ಕರ್ನಾಟಕ ಚುನಾವಣೆ: ಬಿಜೆಪಿಗೆ ಪ್ರಧಾನ್-ಅಣ್ಣಾಮಲೈ ಸಾರಥ್ಯ

ನವದೆಹಲಿ: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷವು ಶನಿವಾರ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಉಸ್ತುವಾರಿಯನ್ನಾಗಿ ನೇಮಿಸಿದೆ. ಪಕ್ಷ ಸಂಘಟನೆಯಲ್ಲಿ ಅನುಭವವಿರುವ ಪ್ರಧಾನ್, ಈ ಹಿಂದೆಯೂ ಹಲವು ಚುನಾವಣೆಗಳನ್ನು ನಿಭಾಯಿಸುವ ಜವಾಬ್ದಾರಿಯನ್ನು ಹೊತ್ತಿದ್ದಾರೆ. ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಅವರನ್ನು ಚುನಾವಣೆಯ ಸಹ ಉಸ್ತುವಾರಿಯನ್ನಾಗಿ ಮಾಡಲಾಗಿದೆ. ಕರ್ನಾಟಕಕ್ಕೆ ಅಣ್ಣಾಮಲೈ ಹೊಸಬರೇನಲ್ಲ. ರಾಜ್ಯದಲ್ಲಿ ಪೊಲೀಸ್ ಅಧಿಕಾರಿಯಾಗಿ ಕರ್ನಾಟಕದ ಸಿಂಘಂ ಎಂದು ಖ್ಯಾತಿವೆತ್ತಿದ್ದ ಅಣ್ಣಾಮಲೈ ಇಲ್ಲಿನವರಿಗೆ ಚಿರಪರಿಚಿತ ಹೆಸರು. ಕರ್ನಾಟಕದಲ್ಲಿ ಈ ವರ್ಷದ ಮಧ್ಯಭಾಗದಲ್ಲಿ ಚುನಾವಣೆ […]

ಕಾರ್ಕಳದಲ್ಲಿ ಮುತಾಲಿಕ್ ಸ್ಪರ್ಧೆ: ಬಿಜೆಪಿಯಿಂದ ಬೆಂಬಲದ ನಿರೀಕ್ಷೆ

ಕಾರ್ಕಳ: ಇಲ್ಲಿನ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಶ್ರೀರಾಮ ಸೇನೆಯ ಮುಖಂಡ ಪ್ರಮೋದ್ ಮುತಾಲಿಕ್, ಹಿಂದೂ ಸಮಾಜದ ಶ್ರೇಯಸ್ಸಿಗಾಗಿ ಬಿಜೆಪಿಯು ತನ್ನ ಅಭ್ಯರ್ಥಿಯನ್ನು ಕಣಕ್ಕೆ ಇಳಿಸದೆ ತನ್ನನ್ನು ಬೆಂಬಲಿಸಬೇಕು ಎಂದು ಹೇಳಿದ್ದಾರೆ. ಪತ್ರಿಕಾಗೋಷ್ಠಿಯನ್ನುದ್ದೇಶಿ ಮಾತನಾಡಿದ ಶ್ರೀರಾಮ ಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಆನಂದ ಶೆಟ್ಟಿ ಅಡ್ಯಾರ್, ಮುತಾಲಿಕ್ ರವರು 47 ವರ್ಷಗಳಿಂದ ಮನೆ ಮಠ ಕುಟುಂಬವನ್ನು ತ್ಯಜಿಸಿ ದೇಶ ಮತ್ತು ಧರ್ಮ ರಕ್ಷಣೆಗಾಗಿ ಹೋರಾಡುತ್ತಿದ್ದಾರೆ. ಈ ಹಿಂದೆ ರಾಜಕೀಯ ಅವಕಾಶಗಳಿದ್ದಾಗಲೂ ತಿರಸ್ಕರಿಸಿ ಸಂಘಟನೆಯಲ್ಲಿ ತೊಡಗಿಸಿಕೊಂಡು ದೇಶ […]

ರಾಜ್ಯದಲ್ಲಿ ಅತಿ ಹೆಚ್ಚು ಬಾರಿ ಪಕ್ಷಾಂತರ ಮಾಡಿರುವುದು ಸಿದ್ದರಾಮಯ್ಯನವರು: ಪ್ರಮೋದ್ ಮಧ್ವರಾಜ್ ತಿರುಗೇಟು

ಉಡುಪಿ: ಈ ರಾಜ್ಯದಲ್ಲಿ ಯಾರಾದರೂ ಹೆಚ್ಚು ಪಕ್ಷಾಂತರ ಮಾಡಿದ್ದರೆ ಅದು ಸಿದ್ದರಾಮಯ್ಯ. ಅವರು ತಮ್ಮ ರಾಜಕೀಯ ಜೀವನದಲ್ಲಿ ಒಟ್ಟು 7 ಬಾರಿ ಪಕ್ಷಗಳನ್ನು ಬದಲಾಯಿಸಿದ್ದು ನಾನು ಹುಟ್ಟಿನಿಂದ ಕಾಂಗ್ರೆಸ್ ಪಕ್ಷದಲ್ಲಿದ್ದು ಈಗ ಸನ್ನಿವೇಶಕ್ಕೆ ಅನುಗುಣವಾಗಿ ಬಿಜೆಪಿ ಸೇರಿದ್ದೇನೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು. ಅವರು ಶುಕ್ರವಾರ ತಮ್ಮ ನಿವಾಸದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಉಡುಪಿಯಲ್ಲಿ ನಡೆದ ಪ್ರಜಾಧ್ವನಿ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನನ್ನನ್ನು ಪಕ್ಷಾಂತರಿ […]

ಪಕ್ಷೇತರ ಅಭ್ಯರ್ಥಿಯಾಗಿ ಕಾರ್ಕಳದಿಂದ ಪ್ರಮೋದ್ ಮುತಾಲಿಕ್ ಸ್ಪರ್ಧೆ: ಅಧಿಕೃತ ಘೋಷಣೆ

ಶ್ರೀರಾಮ ಸೇನೆ ಸಂಘಟನೆಯ ಮುಖಂಡ, ಪ್ರಖರ ಹಿಂದುತ್ವವಾದಿ ಪ್ರಮೋದ್ ಮುತಾಲಿಕ್ ಕಾರ್ಕಳ ಕ್ಷೇತ್ರದಿಂದ ವಿಧಾನಸಭಾ ಚುನಾವಣೆ ಸ್ಪರ್ಧಿಸಲಿದ್ದು ಈ ಬಗ್ಗೆ ಅಧಿಕೃತ ಘೋಷಣೆ ಮಾಡಿದ್ದಾರೆ. ಕಾರ್ಕಳದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ತಾವು ಯಾವುದೇ ಕಾರಣಕ್ಕೂ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ, ಯರು ಏನೇ ಒತ್ತಡ ಹಾಕಿದರೂ ಕಾರ್ಕಳದಲ್ಲೇ ಸ್ಪರ್ಧೆ ಮಾಡುವುದು ನಿಶ್ಚಿತ. ಸಾವಿರಾರು ಕಾರ್ಯಕರ್ತರ ನೀವಿನ ಧ್ವನಿಯಾಗಿ, ಅವರೆಲ್ಲರ ಒತ್ತಡದಿಂದ ತಾವು ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ. ತಾನು ಬಿಜೆಪಿ ಹಾಗೂ ಮೋದಿ ವಿರೋಧಿಯಲ್ಲ. ತಾನು ಕೆಲವು ವ್ಯಕ್ತಿಗಳ ವಿರುದ್ದ, […]

ಬೊಮ್ಮಾಯಿ ಸರ್ಕಾರ ವಿಫಲ; ಮೋದಿ ಹೆಸರಲ್ಲಿ ಬಿಜೆಪಿ ಮತಯಾಚನೆ: ಡಿ.ಕೆ.ಶಿವಕುಮಾರ್

ಉಡುಪಿ: ರಾಜ್ಯದ ಬಿಜೆಪಿ ನೇತೃತ್ವದ ಬೊಮ್ಮಾಯಿ ಸರ್ಕಾರ ಎಲ್ಲಾ ಕ್ಷೇತ್ರಗಳಲ್ಲಿಯೂ ದಯನೀಯವಾಗಿ ವಿಫಲವಾಗಿದ್ದು, ಪಕ್ಷವು 2023 ರ ಚುನಾವಣೆಯನ್ನು ಪ್ರಧಾನಿ ಮೋದಿ ಮತ್ತು ರಾಷ್ಟ್ರೀಯ ನಾಯಕರ ನೇತೃತ್ವದಲ್ಲಿ ಎದುರಿಸಬೇಕಾಗಿದೆ. ರಾಜ್ಯ ಸರ್ಕಾರವು ತನ್ನ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಮತ್ತು ಅದಕ್ಕೀಗ ರಾಷ್ಟ್ರೀಯ ನಾಯಕರ ಅವಶ್ಯಕತೆಯಿದೆ. ಬಿಜೆಪಿಯು ಜನರಿಗೆ ನೀಡಿದ ಆಶ್ವಾಸನೆಗಳನ್ನು ಈಡೇರಿಸಲಿಲ್ಲ ಮತ್ತು ಗಗನಕ್ಕೇರಿರುವ ಬೆಲೆ ಏರಿಕೆಯನ್ನು ತಡೆಯಲೂ ಆಗಲಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಆರೋಪಿಸಿದರು. ಅವರು ಭಾನುವಾರ ಉಡುಪಿಯ ಮಿಶನ್ ಕೌಂಪಾಡಿನ […]