ಡಿ .25 ರಂದು ಜಿಲ್ಲೆಯಲ್ಲಿ ಅಟಲ್ ಉತ್ಸವ; ಬೂತ್ ಸಂಗಮ ಕಾರ್ಯಕ್ರಮ

ಉಡುಪಿಯ: ಭಾರತೀಯ ಜನತಾ ಪಾರ್ಟಿ ಉಡುಪಿ ನಗರ ಹಾಗೂ ಗ್ರಾಮಾಂತರ ವತಿಯಿಂದ ಮಾಜಿ ಪ್ರಧಾನಮಂತ್ರಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನಾಚರಣೆ ಪ್ರಯುಕ್ತ ಉಡುಪಿಯಲ್ಲಿ ನಡೆಯಲಿರುವ ಅಟಲ್ ಬಿಹಾರಿ ಉತ್ಸವ ಪ್ರಯುಕ್ತ ಡಿ .25 ರಂದು ಬೂತ್ ಸಂಗಮ ಕಾರ್ಯಕ್ರಮವು ಎಂಜಿಎಂ ಕಾಲೇಜು ಮೈದಾನದಲ್ಲಿ ನಡೆಯಲಿದ್ದು, ಇದರ ಚಪ್ಪರ ಮುಹೂರ್ತವನ್ನು ಸೋಮವಾರದಂದು ಶಾಸಕ ಕೆ ರಘುಪತಿ ಭಟ್ ನೆರವೇರಿಸಿದರು. ಉತ್ಸವದ ಅಂಗವಾಗಿ ಡಿ.24 ರಂದು ರಾಷ್ಟ್ರೀಯ ಮಟ್ಟದ ಹೊನಲು ಬೆಳಕಿನ ಕಬ್ಬಡ್ಡಿ ಪಂದ್ಯಾಟ […]
ಸರಕಾರಿ ಶಾಲಾ-ಕಾಲೇಜು ವಿದ್ಯಾರ್ಥಿಯನಿಯರಿಗೆ ಸ್ಯಾನಿಟರಿ ನ್ಯಾಪ್ಕಿನ್ ಪೂರೈಸುವಂತೆ ವೆರೋನಿಕಾ ಕರ್ನೆಲಿಯೋ ಒತ್ತಾಯ

ಉಡುಪಿ: ಸದಾ ಬೇಟಿ ಬಚಾವೊ ಬೇಟಿ ಪಡಾವೊ ಎನ್ನುವ ಬಿಜೆಪಿ ಸರಕಾರಕ್ಕೆ ರಾಜ್ಯದ ಸರಕಾರಿ ಮತ್ತು ಅನುದಾನಿತ ಶಾಲಾ-ಕಾಲೇಜುಗಳ ವಿದ್ಯಾರ್ಥಿನಿಯರಿಗೆ ಶುಚಿ ಯೋಜನೆಯಡಿ ನೀಡಲಾಗುವ ಸ್ಯಾನಿಟರಿ ನ್ಯಾಪ್ಕಿನ್ ಪೊರೈಸಲು ಸಾಧ್ಯವಾಗದಿರುವುದು ನಾಚಿಕೆಗೇಡಿನ ವಿಚಾರ ಎಂದು ಕೆಪಿಸಿಸಿ ವಕ್ತಾರೆ ವೆರೋನಿಕಾ ಕರ್ನೆಲಿಯೋ ಹೇಳಿದ್ದಾರೆ. ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ನಿಯಮಿತದ ವತಿಯಿಂದ ಶುಚಿ ಯೋಜನೆಯಡಿ ನ್ಯಾಪ್ಕಿನ್ ಖರೀದಿಸಿ ವಿತರಿಸುವ ಜವಾಬ್ದಾರಿ ಹೊತ್ತಿದ್ದು, ಕಳೆದ ಒಂದೂವರೆ ವರ್ಷದಿಂದ ಪೂರೈಸದಿರುವುದು ಸರಕಾರದ ನಿರ್ಲಕ್ಷ್ಯತನಕ್ಕೆ ಹಿಡಿದ ಕೈಗನ್ನಡಿಯಾಗಿದೆ. ದೇಶದ ಪ್ರಧಾನಿಯವರು ಮಾತೆತ್ತಿದ್ದರೆ […]
ಹಿಮಾಚಲ ಪ್ರದೇಶದ ರೀತಿ ಕರ್ನಾಟಕದಲ್ಲೂ ಬಿಜೆಪಿಯನ್ನು ಜನತೆ ಕಿತ್ತೊಗೆಯಲಿದ್ದಾರೆ: ಪ್ರಖ್ಯಾತ ಶೆಟ್ಟಿ

ಉಡುಪಿ: ಗುಜರಾತ್ ನಲ್ಲಿನ ಗೆಲವು ಭಾರತೀಯ ಜನತಾ ಪಕ್ಷಕ್ಕೆ ಮುಂದಿನ ಕರ್ನಾಟಕ ಚುನಾವಣೆಗೆ ದಿಕ್ಸೂಚಿಯಾದರೆ ಹಿಮಾಚಲ ಪ್ರದೇಶ ಚುನಾವಣೆ ಕೂಡ ಯಾಕೆ ದಿಕ್ಸೂಚಿಯಾಗಬಾರದೆಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ ಪ್ರಶ್ನಿಸಿದ್ದಾರೆ. ಈ ಹಿಂದಿನ ಚುನಾವಣೆಗಿಂತ ಗುಜರಾತ್ ನಲ್ಲಿ ಬಿಜೆಪಿ ಗೆದ್ದಿರುವುದರಲ್ಲಿ ಆಶ್ಚರ್ಯ ವೇನಿಲ್ಲ. ಆಮ್ ಆದ್ಮಿ ಪಕ್ಷದವರು ಸ್ಪರ್ಧೆ ಒಡ್ಡಿ ಕಾಂಗ್ರೆಸ್ ಮತಗಳನ್ನು ಪಡೆದುಕೊಂಡಿದ್ದಾರೆ. ಬಹುತೇಕ ಕ್ಷೇತ್ರಗಳಲ್ಲಿ ಆಮ್ ಆದ್ಮಿ ಪಕ್ಷ ಕಾಂಗ್ರೆಸ್ ಮತಗಳನ್ನೇ ಕಬಳಿಸಿದೆ. ಇದರಿಂದ ಗುಜರಾತ್ ನಲ್ಲಿ ಹಿನ್ನಡೆಯಾಗಿದೆ. ಕೇವಲ ಗುಜರಾತ್ […]
ರಾಜ್ಯಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ ಮಸೂದೆ ಮಂಡನೆ: ವಿರೋಧಪಕ್ಷಗಳಿಂದ ಪ್ರತಿಭಟನೆ

ನವದೆಹಲಿ: ಆಡಳಿತಾರೂಢ ಭಾರತೀಯ ಜನತಾ ಪಕ್ಷದ ಸಂಸದ ಕಿರೋಡಿ ಲಾಲ್ ಮೀನಾ ಶುಕ್ರವಾರ ರಾಜ್ಯಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆಯ ಖಾಸಗಿ ಸದಸ್ಯರ ಮಸೂದೆಯನ್ನು ಮಂಡಿಸಿದರು. ವಿರೋಧ ಪಕ್ಷದ ಸದಸ್ಯರು ಈ ಕ್ರಮವನ್ನು ವಿರೋಧಿಸಿರು ಮತ್ತು ಪ್ರಸ್ತಾವಿತ ಮಸೂದೆಗೆ ಮತದಾನ ನಡೆಸುವಂತೆ ಕೇಳಿಕೊಂಡರು. ವೈಯಕ್ತಿಕ ಕಾನೂನುಗಳನ್ನು ರದ್ದುಪಡಿಸುವ ಮೂಲಕ, ಏಕರೂಪ ನಾಗರಿಕ ಸಂಹಿತೆಯು ಮದುವೆ, ದತ್ತು, ಪಿತ್ರಾರ್ಜಿತ, ಉತ್ತರಾಧಿಕಾರ ಮತ್ತು ವಿಚ್ಛೇದನದವರೆಗಿನ ಎಲ್ಲ ವಿಷಯಗಳ ಮೇಲೆ ಸಾಮಾನ್ಯ ಕಾನೂನುಗಳ ನಿಯಮಗಳೊಂದಿಗೆ ಯಾವುದೇ ಸಮುದಾಯಗಳನ್ನು ಲೆಕ್ಕಿಸದೆ ದೇಶದ ನಾಗರಿಕರನ್ನು ಸಮಾನವಾಗಿ […]
ಗುಜರಾತ್ ನಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದಿರುವುದು ಜನತೆ ನರೇಂದ್ರ ಮೋದಿ ಮೇಲಿಟ್ಟಿರುವ ವಿಶ್ವಾಸಕ್ಕೆ ಸಾಕ್ಷಿ: ಪ್ರಮೋದ್ ಮಧ್ವರಾಜ್

ಉಡುಪಿ: ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪ್ರಚಂಡ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬಂದಿರುವ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಪಕ್ಷದ ಗೆಲುವಿಗೆ ಸಂತೋಷ ವ್ಯಕ್ತಪಡಿಸಿದರು. ಗುಜರಾತ್ ನಲ್ಲಿ ಸತತ 27 ವರ್ಷದಿಂದ ಬಿಜೆಪಿ ಆಡಳಿತವಿದ್ದು, ಮತ್ತೆ ಮುಂದಿನ 5 ವರ್ಷಗಳಿಗೆ ಅಭೂತಪೂರ್ವ ಬೆಂಬಲದೊಂದಿಗೆ ಪಕ್ಷ ಅಧಿಕಾರಕ್ಕೆ ಬಂದಿದ್ದು, ಇದು ಪಧಾನಿ ನರೇಂದ್ರ ಮೋದಿಯವರ ಮೇಲೆ ಜನತೆ ಸಂಪೂರ್ಣ ವಿಶ್ವಾಸ ಇಟ್ಟಿರುವ ಪ್ರತೀಕ. ಪ್ರಜಾಪ್ರಭುತ್ವದ ಇತಿಹಾಸದಲ್ಲಿ 27 ವರ್ಷ ಆಡಳಿತ ನಡೆಸಿ, ಮತ್ತೆ ಮುಂದಿನ ಬಾರಿಗೆ […]