ಹಿಮಾಚಲ ಪ್ರದೇಶ ಮತ್ತು ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಗೆ ಮುಖಭಂಗ: ರಮೇಶ್ ಕಾಂಚನ್

ಉಡುಪಿ: ಗುಜರಾತ್ನಲ್ಲಿ ಬಿಜೆಪಿ ಮತ್ತೆ ಅಧಿಕಾರವನ್ನು ಉಳಿಸಿಕೊಂಡಿರುವುದನ್ನೇ ದೊಡ್ಡ ಸಾಧನೆ ಎಂಬಂತೆ ಬಿಂಬಿಸಲಾಗುತ್ತಿದೆ. ಇದೇ ಹೊತ್ತಿನಲ್ಲಿ ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಅಧಿಕಾರ ಕಳೆದುಕೊಂಡಿದೆ. ಕಾಂಗ್ರೆಸ್ಗೆ ಸ್ಪಷ್ಟ ಬಹುಮತ ಬಂದಿದೆ. ದೇಶದ ರಾಜಧಾನಿಯಾಗಿರುವ ದೆಹಲಿಯ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರ ಕಳೆದುಕೊಂಡಿದೆ. ಒಂದು ರಾಜ್ಯದಲ್ಲಿ ಗೆದ್ದಿರುವುದನ್ನೇ ಸಂಭ್ರಮಿಸಿ ಎರಡು ಕಡೆ ಸೋತಿರುವುದನ್ನು ಮರೆಮಾಚಲಾಗುತ್ತಿದೆ. ಕಾಂಗ್ರೆಸ್ ಮುಕ್ತ ಭಾರತ ಎಂದು ಹೇಳುತ್ತಿದ್ದ ಬಿಜೆಪಿಗೆ ಇತ್ತೀಚೆಗೆ ನಡೆದ ಹಲವು ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲ್ಲುವ ಮೂಲಕ ಕಾಂಗ್ರೆಸ್ ಮುಕ್ತ ಭಾರತ ಮಾಡಲು ಅಸಾಧ್ಯ […]
ಗುಜರಾತ್ ಚುನಾವಣಾ ಫಲಿತಾಂಶ ರಾಜ್ಯ ಚುನಾವಣೆಯ ದಿಕ್ಸೂಚಿ: ನಯನಾ ಗಣೇಶ್, ವೀಣಾ ಶೆಟ್ಟಿ

ಉಡುಪಿ: ಗುಜರಾತ್ ಬಿಜೆಪಿ ಜಯಭೇರಿ ಮುಂದಿನ ರಾಜ್ಯ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್ ಹೇಳಿದ್ದಾರೆ. ಗುಜರಾತ್ ನಲ್ಲಿ 7ನೇ ಬಾರಿ ಅತೀ ಹೆಚ್ಚು ಸ್ಥಾನ ಗಳಿಸುವ ಮೂಲಕ ದಾಖಲೆ ನಿರ್ಮಿಸಿ ಬಿಜೆಪಿ ಅಧಿಕಾರಕ್ಕೆ ಬಂದಿದ್ದು ಯಶಸ್ವಿ ಆಡಳಿತ, ಅಭಿವೃದ್ಧಿ ಪರ ಚಿಂತನೆಗೆ ಮತದಾರರ ಒಲವು ವ್ಯಕ್ತವಾಗಿದೆ. ಗುಜರಾತ್ ರಾಷ್ಟ್ರಕ್ಕೆ ಒಂದು ಮಾದರಿ ರಾಜ್ಯವಾಗಿ ರೂಪುಗೊಂಡಿದ್ದು ಪ್ರಧಾನ ಮಂತ್ರಿ ನರೇಂದ್ರ ಮೋದಿ ನಾಯಕತ್ವದಿಂದ ಗೆಲುವು ಸಾಧಿಸಿದ್ದು ಈ ಫಲಿತಾಂಶ ಮುಂದಿನ ರಾಜ್ಯ […]
ಗುಜರಾತಿನಲ್ಲಿ ಸತತ ಏಳನೇ ಬಾರಿ ಅರಳಿದ ಕಮಲ; ಹಿಮಾಚಲ ಕೈ ಪಾಲು: ಎಮ್.ಸಿ.ಡಿ ಗೆ ತೃಪ್ತಿ ಪಟ್ಟುಕೊಂಡ ಆಪ್

ನವದೆಹಲಿ: ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯ ಫಲಿತಾಂಶಗಳು ಹೊರಬಿದ್ದಿದ್ದು, ಗುಜರಾತಿನಲ್ಲಿ ಸತತ ಏಳನೇ ಬಾರಿಗೆ ಕಮಲ ಅರಳಿಸುವಲ್ಲಿ ಭಾರತೀಯ ಜನತಾ ಪಕ್ಷ ಯಶಸ್ವಿಯಾಗಿದೆ. ಗುಜರಾತ್ ನಲ್ಲಿ ಸತತ ಏಳನೇ ಬಾರಿಗೆ ಅರಳಿದ ಕಮಲ ಬಿಜೆಪಿ 71 ಸೀಟು ಗೆದ್ದಿದ್ದು 87 ರಲ್ಲಿ ಮುನ್ನಡೆ ಸಾಧಿಸಿ 158 ಸೀಟು ಸಿಗುವ ಸಾಧ್ಯತೆಗಳಿದ್ದು ಪೂರ್ಣ ಬಹುಮತದ ಸರಕಾರ ರಚಿಸುವುದು ಬಹುತೇಕ ಖಚಿತವಾಗಿದೆ , ಐ.ಎನ್.ಸಿ(ಕಾಂಗ್ರೆಸ್) 6 ಸೀಟು ಗೆದ್ದಿದ್ದು10 ರಲ್ಲಿ ಮುನ್ನಡೆ ಸಾಧಿಸಿ 16 ಸೀಟು ಗಳಿಸುವ […]
ಸರಕಾರ ನಾಡದೋಣಿ ಮತ್ತು ಗಿಲ್ನೆಟ್ ಮೀನುಗಾರರ ಸಮಸ್ಯೆಗೆ ತಕ್ಷಣ ಸ್ಪಂದಿಸದಿದ್ದಲ್ಲಿ ತೀವ್ರ ಹೋರಾಟ: ರಮೇಶ್ ಕಾಂಚನ್

ಉಡುಪಿ: ನಾಡದೋಣಿ ಮತ್ತು ಗಿಲ್ನೆಟ್ ಮೀನುಗಾರರಿಗೆ ಕಳೆದ ಹತ್ತು ತಿಂಗಳಿನಿಂದ ಸೀಮೆಎಣ್ಣೆ ಬಿಡುಗಡೆಗೊಂಡಿಲ್ಲ. ಈಗಾಗಲೇ ನಾಡದೋಣಿ ಸಂಘದವರು ಉಡುಪಿ ಜಿಲ್ಲಾಧಿಕಾರಿ ಕಚೇರಿಯ ಎದುರು ಪ್ರತಿಭಟನೆ ನಡೆಸಿ ತಕ್ಷಣ ಸೀಮೆಎಣ್ಣೆ ಬಿಡುಗಡೆ ಮಾಡಿ ಎಂದು ಒತ್ತಾಯಿಸಿದ ಹೊರತಾಗಿಯೂ ಸರಕಾರ ನಿರ್ಲಕ್ಷ್ಯ ಧೋರಣೆ ಮುಂದುವರಿಸಿರುವುದು ಖಂಡನಾರ್ಹವಾಗಿದೆ. ನಾಡದೋಣಿ ಮತ್ತು ಗಿಲ್ನೆಟ್ ಮೀನುಗಾರರ ಸಮಸ್ಯೆಗೆ ತಕ್ಷಣ ಸ್ಪಂದಿಸಿ ಸೀಮೆಎಣ್ಣೆ ಬಿಡುಗಡೆ ಮಾಡುವಂತೆ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಸರಕಾರವನ್ನು ಆಗ್ರಹಿಸಿದ್ದಾರೆ. ಕಾಂಗ್ರೆಸ್ ಸರಕಾರವಿದ್ದ ಸಂದರ್ಭದಲ್ಲಿ ನಾಡದೋಣಿ ಮತ್ತು ಗಿಲ್ನೆಟ್ […]
ಡಿ.25 ರಂದು ಉಡುಪಿಗೆ ಬರಲಿದ್ದಾರೆ ಉತ್ತರಪ್ರದೇಶದ ಸಂತ: ಯುವ ಮತದಾರರ ಸಮಾವೇಶದಲ್ಲಿ ಯೋಗಿ ಆದಿತ್ಯನಾಥ್ ಭಾಗಿ

ಉಡುಪಿ: ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇದೇ ಪ್ರಥಮ ಬಾರಿಗೆ ಕರಾವಳಿ ಕರ್ನಾಟಕ್ಕೆ ಕಾಲಿಡುತ್ತಿದ್ದಾರೆ. ಹಿಂದುತ್ವದ ಭದ್ರ ಕೋಟೆಯಲ್ಲಿ ಹಿಂದೂ ಸಂತನ ಆಗಮನವನ್ನು ಸ್ವಾಗತಿಸಲು ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಉತ್ಸಾಹದಿಂದ ಸಜ್ಜಾಗುತ್ತಿದ್ದಾರೆ. ಇಂಧನ ಸಚಿವ ಸುನಿಲ್ ಕುಮಾರ್ ಈ ಬಗ್ಗೆ ಮಾಹಿತಿ ನೀಡಿದ್ದು, ಡಿ.25 ರಂದು ಜಿಲ್ಲೆಯಲ್ಲಿ ನಡೆಯಲಿರುವ ಯುವ ಮತದಾರರ ಸಮಾವೇಶದಲ್ಲಿ ಉ.ಪ್ರ. ಜನಪ್ರಿಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾಗವಹಿಸಲಿದ್ದಾರೆ ಎಂದಿದ್ದಾರೆ. ಡಿ.6 ರಂದು ನಡೆದ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು ೨೦೨೩ ವಿಧಾನಸಭಾ […]