ತಿಹಾರ್ ಜೈಲಿನಲ್ಲಿರುವ ಆಪ್ ನಾಯಕ ಸತ್ಯೇಂದ್ರ ಜೈನ್ಗೆ ಫೂಟ್ ಮಸಾಜ್: ಸಿಸಿಟಿವಿ ದೃಶ್ಯಾವಳಿ ವೈರಲ್

ನವದೆಹಲಿ: ದೆಹಲಿಯ ಮಾಜಿ ಸಚಿವ ಮತ್ತು ಆಪ್ ನಾಯಕ ಸತ್ಯೇಂದ್ರ ಜೈನ್ ಅವರ ಸಿಸಿಟಿವಿ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪಿ ತಿಹಾರ್ ಜೈಲಿನಲ್ಲಿ ಕಾಲಿಗೆ ಮಸಾಜ್ ತೆಗೆದುಕೊಳ್ಳುತ್ತಿದ್ದಾರೆ. ವೈರಲ್ ಆಗಿರುವ ಈ ವೀಡಿಯೋದಲ್ಲಿ, ಜೈನ್ ತನ್ನ ಹಾಸಿಗೆಯ ಮೇಲೆ ಮಲಗಿ ಪೇಪರ್ಗಳನ್ನು ಓದುತ್ತಿದ್ದಾರೆ ಮತ್ತು ಅವರ ಪಕ್ಕದಲ್ಲಿ ಒಬ್ಬ ವ್ಯಕ್ತಿ ಅವರಿಗೆ ಫೂಟ್ ಮಸಾಜ್ ನೀಡುತ್ತಿದ್ದಾನೆ. ತಿಹಾರ್ ಜೈಲಿನಲ್ಲಿ ಸತ್ಯೇಂದ್ರ ಜೈನ್ ಕಾಲಿಗೆ ಮಸಾಜ್ ತೆಗೆದುಕೊಳ್ಳುತ್ತಿರುವುದನ್ನು ತೋರಿಸುವ ಸಿಸಿಟಿವಿ […]
ಪ.ಜಾತಿ ಮತ್ತು ಪ. ಪಂಗಡದ ಬಗ್ಗೆ ಕಾಂಗ್ರೆಸ್ ಕೇವಲ ಮತಬ್ಯಾಂಕ್ ರಾಜಕಾರಣ ಮಾಡಿದೆ: ಬಿ ಶ್ರೀರಾಮುಲು

ಬಳ್ಳಾರಿ: ಹಲವು ದಶಕಗಳ ಕಾಲ ಆಳ್ವಿಕೆ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ಪರಿಶಿಷ್ಟ ಜಾತಿ – ಪರಿಶಿಷ್ಟ ಪಂಗಡಗಳ ಬಗ್ಗೆ ಕೇವಲ ಮತಬ್ಯಾಂಕ್ ರಾಜಕಾರಣ ಮಾಡಿದ್ದರು. ಈ ಸಮುದಾಯಗಳ ಕುರಿತು ಶಕುನಿ ವಾತ್ಸಲ್ಯವನ್ನು ಪ್ರದರ್ಶನ ಮಾಡಿದ್ದರು ಎಂದು ರಾಜ್ಯದ ಸಾರಿಗೆ ಮತ್ತು ಪರಿಶಿಷ್ಟ ಪಂಗಡ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಟೀಕಿಸಿದ್ದಾರೆ. ಬಳ್ಳಾರಿಯಲ್ಲಿ ನ 20ರಂದು ಬಿಜೆಪಿ ಎಸ್.ಟಿ. ಮೋರ್ಚಾ ನವಶಕ್ತಿ ಸಮಾವೇಶ ನಡೆಯುವ ಸ್ಥಳವನ್ನು ಪರಿಶೀಲಿಸಿದ ಬಳಿಕ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಮತ್ತು ಮುಖ್ಯಮಂತ್ರಿ ಬಸವರಾಜ […]
ನಾಡಿನ ಜನತೆಯ ಸಮಗ್ರ ಅಭಿವೃದ್ಧಿಗಾಗಿ ಡಬಲ್ ಇಂಜಿನ್ ಸರ್ಕಾರ ನಿರಂತರವಾಗಿ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಬೊಮ್ಮಾಯಿ

ಉಡುಪಿ: ಕನ್ನಡ ನಾಡಿನ ಜನತೆಯ ಸಮಗ್ರ ಅಭಿವೃದ್ಧಿಗಾಗಿ ಡಬಲ್ ಇಂಜಿನ್ ಸರ್ಕಾರ ನಿರಂತರವಾಗಿ ಕೆಲಸ ಮಾಡುತ್ತಿದೆ. ಮೀನುಗಾರರಿಗೆ ಅಗತ್ಯವಿರುವ ಹೆಚ್ಚುವರಿ ಸೀಮೆಎಣ್ಣೆ ಒದಗಿಸಲು ನಮ್ಮ ಸರ್ಕಾರ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಹಾಗೂ ಮೀನುಗಾರರಿಗೆ ಸುಸಜ್ಜಿತ ಮನೆ ನಿರ್ಮಿಸಿಕೊಡುವ ಕಾರ್ಯ ಈಗಾಗಲೇ ಪ್ರಗತಿಯಲ್ಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಸೋಮವಾರದಂದು ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಆಯೋಜಿಸಲಾಗಿದ್ದ ಜನಸಂಕಲ್ಪ ಸಭೆಯನ್ನುದ್ದೇಶಿಸಿ ಮಾತನಾಡಿದರು. ಕರಾವಳಿ ಪ್ರದೇಶದ ಅಭಿವೃದ್ಧಿಗೆ ನರೇಂದ್ರ ಮೋದಿಯವರ ಸರ್ಕಾರ ಬಹಳಷ್ಟು […]
ಉಪಚುನಾವಣಾ ಫಲಿತಾಂಶ: ಏಳರಲ್ಲಿ ನಾಲ್ಕು ಸ್ಥಾನ ಬಿಜೆಪಿಗೆ; ಆರ್.ಜೆ.ಡಿ, ಶಿವಸೇನೆ, ಟಿ.ಆರ್. ಎಸ್ ಗೆ ತಲಾ ಒಂದು ಸ್ಥಾನ

ನವದೆಹಲಿ: ಹರಿಯಾಣದ ಆದಂಪುರ, ಬಿಹಾರದ ಮೊಕಮಾ ಮತ್ತು ಗೋಪಾಲ್ಗಂಜ್, ಮಹಾರಾಷ್ಟ್ರದ ಅಂಧೇರಿ (ಪೂರ್ವ), ತೆಲಂಗಾಣದ ಮುನುಗೋಡೆ, ಉತ್ತರ ಪ್ರದೇಶದ ಗೋಲ ಗೋಕ್ರನಾಥ ಮತ್ತು ಒಡಿಶಾದ ಧಾಮ್ನಗರ ಈ ಏಳು ಕ್ಷೇತ್ರಗಳಲ್ಲಿ ನವೆಂಬರ್ 3 ರಂದು ತೆರವಾದ ಸ್ಥಾನಗಳಿಗೆ ಉಪ-ಚುನಾವಣೆ ನಡೆದಿತ್ತು. ನವೆಂಬರ್ 6 ರಂದು ಫಲಿತಾಂಶ ಪ್ರಕಟವಾಗಿದ್ದು, ಒಡಿಶಾದ ಧಾಮ್ನಗರ, ಬಿಹಾರದ ಗೋಪಾಲ್ಗಂಜ್, ಹರಿಯಾಣದ ಆದಂಪುರ ಮತ್ತು ಉತ್ತರ ಪ್ರದೇಶದ ಗೋಲಾ ಗೋಕ್ರನಾಥದಲ್ಲಿ ಬಿಜೆಪಿ ಗೆದ್ದರೆ, ಅಂಧೇರಿಯಲ್ಲಿ (ಪೂರ್ವ) ಉದ್ಧವ್ ಠಾಕ್ರೆ ನೇತೃತ್ವದ ಸೇನೆಯ ರುತುಜಾ ಲಟ್ಕೆ […]
ಗುಜರಾತ್ ಚುನಾವಣೆ: ಡಿ. 1 ಮತ್ತು 5 ರಂದು ಮತದಾನ: ಡಿ. 8 ರಂದು ಮತ ಎಣಿಕೆ

ಅಹಮದಾಬಾದ್: ಗುಜರಾತಿನಲ್ಲಿ ಚುನಾವಣಾ ಕಣ ಸಜ್ಜಾಗಿದ್ದು, ಬಿರುಸಿನ ಪ್ರಚಾರಗಳಿಗೆ ತೆರೆಬಿದ್ದಿದ್ದು ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ಇದೀಗ ಭಾರತೀಯ ಚುನಾವಣಾ ಆಯೋಗವು ಮತದಾನದ ದಿನಾಂಕಗಳನ್ನು ಘೋಷಣೆ ಮಾಡಿದೆ. ಇನ್ನೇನಿದ್ದರೂ ಮತದಾರ ಪ್ರಭುವಿನ ಮುದ್ರೆ ಒತ್ತುವಿಕೆ ಒಂದೇ ಬಾಕಿ ಉಳಿದಿದೆ. ಗುಜರಾತಿನ ಎಲ್ಲಾ 182 ವಿಧಾನಸಭಾ ಸ್ಥಾನಗಳಿಗೆ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಮೊದಲ ಹಂತದ ವಿಧಾನಸಭಾ ಚುನಾವಣೆ ಡಿಸೆಂಬರ್ 1 ರಂದು ನಡೆಯಲಿದ್ದು, ಎರಡನೇ ಹಂತ ಡಿಸೆಂಬರ್ 5 ರಂದು ನಡೆಯಲಿದೆ. ಡಿಸೆಂಬರ್ 8 ರಂದು […]