ಆಗ ಪೇಸಿಎಂ; ಈಗ ಸೇಸಿಎಂ: ಸರಕಾರದ ವಿರುದ್ದ ಕಾಂಗ್ರೆಸ್ ನಿಂದ ಮತ್ತೊಂದು ಅಸ್ತ್ರ

ಬೆಂಗಳೂರು: ‘ಪೇಸಿಎಂ’ ಅಭಿಯಾನದ ನಂತರ, ಕಾಂಗ್ರೆಸ್ನ ಕರ್ನಾಟಕ ಘಟಕವು ಪ್ರತಿಪಕ್ಷಗಳು ಕೇಳಿದ 50 ಪ್ರಶ್ನೆಗಳಿಗೆ ಮುಖ್ಯಮಂತ್ರಿಗಳಿಂದ ಉತ್ತರವನ್ನು ಕೋರಿ ‘ಸೇಸಿಎಂ’ ಅಭಿಯಾನವನ್ನು ಪ್ರಾರಂಭಿಸಿದೆ. ಕ್ಯೂಆರ್ ಕೋಡ್ ಸ್ವರೂಪದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಛಾಯಾಚಿತ್ರದೊಂದಿಗೆ ಪೇಸಿಎಂ ಅಭಿಯಾನದ ಅದೇ ಗ್ರಾಫಿಕ್ ಅನ್ನು ಪ್ರಚಾರಕ್ಕೆ ಬಳಸಲಾಗಿದೆ. “ಸೇಸಿಎಂ 90% ಈಡೇರಿಸಲಾಗಿಲ್ಲ”, “ಸಿಎಂ ಮಾತನಾಡಲು ನಾವು ಪೇಸಿಎಂ ಮಾಡಬೇಕೇ” ಎಂದು ಪ್ರಶ್ನಿಸಲಾಗಿದೆ. ಬಿಜೆಪಿ ಸರ್ಕಾರ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ್ದ ಭರವಸೆಗಳಲ್ಲಿ ಶೇ 10 ರಷ್ಟನ್ನು ಕೂಡಾ ಈಡೇರಿಸಲು […]
ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಆಭಾ ಕಾರ್ಡ್ ನೋಂದಣಿ

ಉಡುಪಿ: ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ನಾರ್ತ್ ಶಾಲೆಯಲ್ಲಿ ಹಳೇ ವಿದ್ಯಾರ್ಥಿ ಮತ್ತು ಶಾಲಾಭಿವೃದ್ಧಿ ಸಮಿತಿ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಇದರ ಜಂಟಿ ಆಶ್ರಯದಲ್ಲಿ ಆದಿತ್ಯವಾರದಂದು ಆಯುಷ್ಮಾನ್ ಭಾರತ ಆರೋಗ್ಯ ಕಾರ್ಡ್ ಉಚಿತ ನೋಂದಣಿ ಹಾಗೂ ಆಧಾರ್ ಕಾರ್ಡ್, ರೇಷನ್ ಕಾರ್ಡ್, ಆಧಾರ್ ಜೋಡಣೆ ಕಾರ್ಯಕ್ರಮವನ್ನು ಉಡುಪಿ ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್ ದೀಪ ಬೆಳಗಿಸಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ತೆಂಕಪೇಟೆ ವಾರ್ಡ್ ನಗರಸಭಾ ಸದಸ್ಯೆ ಮಾನಸ ಪೈ, ಹಳೇ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷೆ ಶ್ರೀದೇವಿ, […]
ಸುರತ್ಕಲ್ ಟೋಲ್ ಗೇಟಿಗೆ ಮುತ್ತಿಗೆ: ಪ್ರತಿಭಟನಾಕಾರರ ಬಂಧನ

ಸುರತ್ಕಲ್: ಅಕ್ಟೋಬರ್ 18 ರಂದು ಟೋಲ್ ಗೇಟ್ ವಿರೋಧಿ ಸಮಿತಿಯಿಂದ ಕರೆಯಲಾಗಿದ್ದ ಪ್ರತಿಭಟನೆಯ ಕಾವು ಜೋರಾಗಿದ್ದು, ಹಲವರ ಬಂಧನವಾಗಿದೆ. ಪ್ರತಿಭಟನಾಕಾರರು ಟೋಲ್ ಗೇಟ್ ಮುತ್ತಿಗೆ ತಡೆಯಲು ಹಾಕಲಾಗಿದ್ದ ಬ್ಯಾರಿಕೇಡ್ ಅನ್ನು ದಾಟಿ ಟೋಲ್ ಗೆ ಮುತ್ತಿಗೆ ಹಾಕಿದ್ದಾರೆ. ಕಾಂಗ್ರೆಸ್ ನಾಯಕ ಮಿಥುನ್ ರೈ ಟೋಲ್ ಗೇಟ್ ಮೇಲೆ ಹತ್ತಿದ್ದು, ಪೊಲೀಸರು ಪ್ರತಿಭಟನಾಕಾರರನ್ನು ತೆರವುಗೊಳಿಸಲು ಲಾಠಿ ಪ್ರಹಾರ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ಕೆಲವರಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ. ಪ್ರತಿಭಟನೆಯಲ್ಲಿ ನಿರತರಾಗಿದ್ದ ಮಾಜಿ ವಿಧಾನ್ ಪರಿಷತ್ ಸದಸ್ಯ ಐವನ್ ಡಿಸೋಜಾ, […]
ಉಡುಪಿ ಶಾಸಕರ ಕಾರ್ಯವೈಖರಿಗೆ ಮೆಚ್ಚುಗೆ: ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

ಉಡುಪಿ: ಭಾರತೀಯ ಜನತಾ ಪಕ್ಷ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನಪರ ಕಾಳಜಿಯ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ರಘುಪತಿ ಭಟ್ ಅವರ ಕಾರ್ಯ ವೈಖರಿ, ಜನಪರ ಕಾಳಜಿ ಹಾಗೂ ಕ್ಷೇತ್ರದಾದ್ಯಂತ ನಡೆದ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಕಾಂಗ್ರೆಸ್ ಪಕ್ಷದ ಪ್ರಮುಖ ಕಾರ್ಯಕರ್ತರು, ಗ್ರಾಮ ಪಂಚಾಯತ್ ಮಾಜಿ ಸದಸ್ಯರು ಶನಿವಾರದಂದು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು. ಎರಡು ಬಾರಿ ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಬಾವ್ತಿಸ್ ಡಿಸೋಜಾ ಹಾಗೂ ಕಾಂಗ್ರೆಸ್ […]
ಶಾಸಕ ಹರೀಶ್ ಪೂಂಜಾಗೆ ಜೀವ ಬೆದರಿಕೆ: ದುಷ್ಕರ್ಮಿಗಳನ್ನು ಶೀಘ್ರ ಬಂಧಿಸುವಂತೆ ಜಿಲ್ಲಾ ಬಿಜೆಪಿ ಒತ್ತಾಯ

ಉಡುಪಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರ ವಾಹನ ತಡೆದು, ತಲವಾರು ಝಳಪಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಒಡ್ಡಿರುವ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸುವಂತೆ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್ ಮತ್ತು ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ. ಕರಾವಳಿ ಜಿಲ್ಲೆಯು ಅನೇಕ ದಿನಗಳಿಂದ ಶಾಂತಿಯ ವಾತಾವರಣದಲ್ಲಿದ್ದು, ಕೆಲವು ಶಕ್ತಿಗಳು ಅಶಾಂತಿ ನಿರ್ಮಿಸಲು ಪ್ರಯತ್ನಿಸುತ್ತಿದ್ದಾರೆ, ಪಕ್ಷದ ಶಾಸಕರಾದ ಹರೀಶ್ ಪೂಂಜಾ ರವರು ನಿನ್ನೆ ರಾತ್ರಿ ಊರಿಗೆ ವಾಪಾಸು ಬರುತ್ತಿದ್ದ ಸಂದರ್ಭ ಕಾರಿಗೆ ಅಡ್ಡಹಾಕಿ […]