ಸೌಜನ್ಯಾ ಪ್ರಕರಣ ಮರು ತನಿಖೆಗೆ ಆಗ್ರಹಿಸಿ ದ.ಕ/ಉಡುಪಿ ಬಿಜೆಪಿ ಶಾಸಕರಿಂದ ಪ್ರತಿಭಟನೆ: ನಳಿನ್ ಕುಮಾರ್

ಮಂಗಳೂರು: ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆ ನಡೆಸುವಂತೆ ಆಗ್ರಹಿಸಿ ಆ. 27 ರಂದು ಬೆಳ್ತಂಗಡಿಯ ತಾಲೂಕು ಕಚೇರಿ ಮುಂಭಾಗದಲ್ಲಿ ದ.ಕ ಮತ್ತು ಉಡುಪಿ ಜಿಲ್ಲೆಯ ಶಾಸಕರಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಪ್ರತಿಭಟನೆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಮನವಿ ಸಲ್ಲಿಸಲಾಗುವುದು. ಸೌಜನ್ಯ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡುವಂತೆ ಆಗ್ರಹಿಸಲಾಗುವುದು ಎಂದು ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ರಾಹುಲ್ ಗಾಂಧಿ ಲೋಕಸಭಾ ಸದಸ್ಯತ್ವ ಮರುಸ್ಥಾಪನೆ: ‘ಇಂಡಿಯಾ’ ಮೈತ್ರಿಕೂಟ ನಾಯಕರಿಂದ ಶ್ಲಾಘನೆ

ನವದೆಹಲಿ: ‘ಇಂಡಿಯಾ’ ಮೈತ್ರಿಕೂಟ ನಾಯಕರು ರಾಹುಲ್ ಗಾಂಧಿ ಅವರನ್ನು ಲೋಕಸಭೆಯ ಸಂಸದರಾಗಿ ಮರುಸ್ಥಾಪನೆ ಮಾಡಿರುವುದನ್ನು ಶ್ಲಾಘಿಸಿದ್ದಾರೆ. ಇದು “ಸತ್ಯದ ವಿಜಯ” ಎಂದು ಅವರು ಬಣ್ಣಿಸಿದ್ದಾರೆ. ಅವರ ಅನರ್ಹತೆಯನ್ನು ಹಿಂತೆಗೆದುಕೊಳ್ಳಲಾಗಿದೆ ಮತ್ತು ಅವರ ಸದಸ್ಯತ್ವವನ್ನು ಮರುಸ್ಥಾಪಿಸಲಾಗಿದೆ ಎಂದು ಲೋಕಸಭೆ ಸೆಕ್ರೆಟರಿಯೇಟ್ ಅಧಿಸೂಚನೆಯನ್ನು ಪ್ರಕಟಿಸಿದೆ. ಘೋಷಣೆ ಬಂದ ಕೂಡಲೇ ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಕಾರ್ಯಕರ್ತರು ಗಾಂಧಿ ಪರವಾಗಿ ನೃತ್ಯ ಮಾಡಿ ಘೋಷಣೆಗಳನ್ನು ಕೂಗುತ್ತಾ ಸಂಭ್ರಮಾಚರಣೆ ನಡೆಸಿದ್ದಾರೆ. ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರು ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ಮಾನನಷ್ಟ […]

ಹಿರಿಯಡ್ಕ: ಸುಶೀಲ ಟೀಚರ್ ನಿಧನ; ಜಿಲ್ಲಾ ಬಿಜೆಪಿ ತೀವ್ರ ಸಂತಾಪ

ಹಿರಿಯಡ್ಕ: ಬೊಮ್ಮರಬೆಟ್ಟು ಗ್ರಾಮದ ಎಚ್. ಸುಶೀಲ ಟೀಚರ್‌ ಇತ್ತೀಚೆಗೆ ನಿಧನರಾಗಿದ್ದು, ಅವರ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್‌ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. 1962ನೇ ಇಸವಿಯಿಂದ 2020 ಇಸವಿಯವರೆಗೆ 58 ವರ್ಷ ಬಾಲವಾಡಿಯಲ್ಲಿ ಮಕ್ಕಳ ಹಾಗೂ ಪೋಷಕರ ನೆಚ್ಚಿನ ಶಿಕ್ಷಕಿಯಾಗಿ, 45 ವರ್ಷ ಹೊಲಿಗೆ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ್ದಾರೆ. ಅಲ್ಲದೆ ಅವರ ಸಹೋದರಿ ಎಚ್. ಯೋಗಿನಿ ಅವರ ಜೊತೆ ಸಹಾಯಕಿಯಾಗಿ ಸೇವೆ ಸಲ್ಲಿಸಿರುತ್ತಾರೆ. ಇಬ್ಬರು ಜೊತೆಯಾಗಿ ಸರಿ ಸುಮಾರು 33 ವರ್ಷದಿಂದ ಅಂಚೆ […]

ವಾಶ್ ರೂಂನಲ್ಲಿ ವೀಡಿಯೋ ಪ್ರಕರಣ: ಸಮಗ್ರ ತನಿಖೆಗೆ ಒತ್ತಾಯಿಸಿ ಹಿಂದೂ ಸಂಘಟನೆಗಳ ಪ್ರತಿಭಟನೆ

ಉಡುಪಿ: ಇಲ್ಲಿನ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಹಿಂದೂ ವಿದ್ಯಾರ್ಥಿನಿಯರ ಖಾಸಗಿ ವಿಡಿಯೋ ಚಿತ್ರೀಕರಣ ಮಾಡಿದ ಹೇಯ ಕೃತ್ಯವನ್ನು ಖಂಡಿಸಿ, ಪ್ರಕರಣದ ಸಮಗ್ರ ತನಿಖೆಗೆ ಒತ್ತಾಯಿಸಿ, ಉಡುಪಿ ಜಿಲ್ಲಾ ವಿಶ್ವ ಹಿಂದೂ ಪರಿಷತ್, ಉಡುಪಿ ಜಿಲ್ಲಾ ಬಜರಂಗದಳ ಹಾಗೂ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಗುರುವಾರ ಮಧ್ಯಾಹ್ನ ಜೋಡುಕಟ್ಟೆಯಿಂದ ಪ್ರಾರಂಭಗೊಂಡು ಶ್ರೀ ಕೃಷ್ಣ ಮಠದ ಹಿಂಭಾಗದಲ್ಲಿರುವ ಪಾರ್ಕಿಂಗ್ ವರೆಗೆ ನಡೆದ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ನೂರಾರು ಮಹಿಳೆಯರು ಭಾಗವಹಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಯಶ್ ಪಾಲ್ […]

ಗ್ಯಾರಂಟಿಗಾಗಿ ಎಸ್ಸಿ-ಎಸ್ಟಿ ಅಭಿವೃದ್ಧಿಗೆ ಮೀಸಲಿಟ್ಟ 11 ಸಾವಿರ ಕೋಟಿ ರೂಪಾಯಿ ವರ್ಗ; ರಾಜ್ಯಾದ್ಯಂತ ಪ್ರತಿಭಟನೆ: ದಿನಕರ ಬಾಬು

ಉಡುಪಿ: ಅಧಿಕಾರಕ್ಕೆ ಏರಲೇಬೇಕೆಂಬ ಹಪಾಹಪಿಯಿಂದ ಕಾಂಗ್ರೆಸ್ ಪಕ್ಷ ಘೋಷಿಸಿದ್ದ 5 ಉಚಿತಗಳ ಗ್ಯಾರಂಟಿಗಳನ್ನು ಈಡೇರಿಸಲು ರಾಜ್ಯ ಕಾಂಗ್ರೆಸ್ ಸರಕಾರ ವಿಫಲವಾಗಿದ್ದು, ಇದೀಗ ಎಸ್ಸಿ ಎಸ್ಟಿ ಸಮುದಾಯಗಳ ಅಭಿವೃದ್ಧಿಗೆ ಮೀಸಲಿಟ್ಟಿರುವ ಸುಮಾರು 11,000 ಕೋಟಿ ರೂಪಾಯಿಗಳನ್ನು ಗ್ಯಾರಂಟಿ ಯೋಜನೆಗಳಿಗೆ ವರ್ಗಾವಣೆ ಮಾಡುವ ನಿರ್ಧಾರ ಕೈಗೊಂಡು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳಿಗೆ ಮಹಾ ಮೋಸ ಎಸಗಿರುವುದನ್ನು ಬಿಜೆಪಿ ರಾಜ್ಯ ಎಸ್ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು ತೀವ್ರವಾಗಿ ಖಂಡಿಸಿದರು. ಅವರು ಬಿಜೆಪಿ ಜಿಲ್ಲಾ ಎಸ್ಸಿ ಮೋರ್ಚಾ ವತಿಯಿಂದ ಬಿಜೆಪಿ […]