ಹಿರಿಯಡ್ಕ: ಸುಶೀಲ ಟೀಚರ್ ನಿಧನ; ಜಿಲ್ಲಾ ಬಿಜೆಪಿ ತೀವ್ರ ಸಂತಾಪ

ಹಿರಿಯಡ್ಕ: ಬೊಮ್ಮರಬೆಟ್ಟು ಗ್ರಾಮದ ಎಚ್. ಸುಶೀಲ ಟೀಚರ್ ಇತ್ತೀಚೆಗೆ ನಿಧನರಾಗಿದ್ದು, ಅವರ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. 1962ನೇ ಇಸವಿಯಿಂದ 2020 ಇಸವಿಯವರೆಗೆ 58 ವರ್ಷ ಬಾಲವಾಡಿಯಲ್ಲಿ ಮಕ್ಕಳ ಹಾಗೂ ಪೋಷಕರ ನೆಚ್ಚಿನ ಶಿಕ್ಷಕಿಯಾಗಿ, 45 ವರ್ಷ ಹೊಲಿಗೆ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ್ದಾರೆ. ಅಲ್ಲದೆ ಅವರ ಸಹೋದರಿ ಎಚ್. ಯೋಗಿನಿ ಅವರ ಜೊತೆ ಸಹಾಯಕಿಯಾಗಿ ಸೇವೆ ಸಲ್ಲಿಸಿರುತ್ತಾರೆ. ಇಬ್ಬರು ಜೊತೆಯಾಗಿ ಸರಿ ಸುಮಾರು 33 ವರ್ಷದಿಂದ ಅಂಚೆ […]
ವಾಶ್ ರೂಂನಲ್ಲಿ ವೀಡಿಯೋ ಪ್ರಕರಣ: ಸಮಗ್ರ ತನಿಖೆಗೆ ಒತ್ತಾಯಿಸಿ ಹಿಂದೂ ಸಂಘಟನೆಗಳ ಪ್ರತಿಭಟನೆ

ಉಡುಪಿ: ಇಲ್ಲಿನ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಹಿಂದೂ ವಿದ್ಯಾರ್ಥಿನಿಯರ ಖಾಸಗಿ ವಿಡಿಯೋ ಚಿತ್ರೀಕರಣ ಮಾಡಿದ ಹೇಯ ಕೃತ್ಯವನ್ನು ಖಂಡಿಸಿ, ಪ್ರಕರಣದ ಸಮಗ್ರ ತನಿಖೆಗೆ ಒತ್ತಾಯಿಸಿ, ಉಡುಪಿ ಜಿಲ್ಲಾ ವಿಶ್ವ ಹಿಂದೂ ಪರಿಷತ್, ಉಡುಪಿ ಜಿಲ್ಲಾ ಬಜರಂಗದಳ ಹಾಗೂ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಗುರುವಾರ ಮಧ್ಯಾಹ್ನ ಜೋಡುಕಟ್ಟೆಯಿಂದ ಪ್ರಾರಂಭಗೊಂಡು ಶ್ರೀ ಕೃಷ್ಣ ಮಠದ ಹಿಂಭಾಗದಲ್ಲಿರುವ ಪಾರ್ಕಿಂಗ್ ವರೆಗೆ ನಡೆದ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ನೂರಾರು ಮಹಿಳೆಯರು ಭಾಗವಹಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಯಶ್ ಪಾಲ್ […]
ಗ್ಯಾರಂಟಿಗಾಗಿ ಎಸ್ಸಿ-ಎಸ್ಟಿ ಅಭಿವೃದ್ಧಿಗೆ ಮೀಸಲಿಟ್ಟ 11 ಸಾವಿರ ಕೋಟಿ ರೂಪಾಯಿ ವರ್ಗ; ರಾಜ್ಯಾದ್ಯಂತ ಪ್ರತಿಭಟನೆ: ದಿನಕರ ಬಾಬು

ಉಡುಪಿ: ಅಧಿಕಾರಕ್ಕೆ ಏರಲೇಬೇಕೆಂಬ ಹಪಾಹಪಿಯಿಂದ ಕಾಂಗ್ರೆಸ್ ಪಕ್ಷ ಘೋಷಿಸಿದ್ದ 5 ಉಚಿತಗಳ ಗ್ಯಾರಂಟಿಗಳನ್ನು ಈಡೇರಿಸಲು ರಾಜ್ಯ ಕಾಂಗ್ರೆಸ್ ಸರಕಾರ ವಿಫಲವಾಗಿದ್ದು, ಇದೀಗ ಎಸ್ಸಿ ಎಸ್ಟಿ ಸಮುದಾಯಗಳ ಅಭಿವೃದ್ಧಿಗೆ ಮೀಸಲಿಟ್ಟಿರುವ ಸುಮಾರು 11,000 ಕೋಟಿ ರೂಪಾಯಿಗಳನ್ನು ಗ್ಯಾರಂಟಿ ಯೋಜನೆಗಳಿಗೆ ವರ್ಗಾವಣೆ ಮಾಡುವ ನಿರ್ಧಾರ ಕೈಗೊಂಡು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳಿಗೆ ಮಹಾ ಮೋಸ ಎಸಗಿರುವುದನ್ನು ಬಿಜೆಪಿ ರಾಜ್ಯ ಎಸ್ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು ತೀವ್ರವಾಗಿ ಖಂಡಿಸಿದರು. ಅವರು ಬಿಜೆಪಿ ಜಿಲ್ಲಾ ಎಸ್ಸಿ ಮೋರ್ಚಾ ವತಿಯಿಂದ ಬಿಜೆಪಿ […]
ವಾಶ್ರೂಮ್ನಲ್ಲಿ ಹಿಡನ್ ಕ್ಯಾಮರಾ ಇಲ್ಲ; ಘಟನೆಗೆ ಕೋಮು ಬಣ್ಣ ಹಚ್ಚಬೇಡಿ: ಖುಷ್ಬು ಸುಂದರ್

ಉಡುಪಿ: ರಾಷ್ಟ್ರೀಯ ಮಹಿಳಾ ಆಯೋಗದ (ಎನ್ಸಿಡಬ್ಲ್ಯು) ಸದಸ್ಯೆ ಮತ್ತು ಬಿಜೆಪಿ ನಾಯಕಿ ಖುಷ್ಬು ಸುಂದರ್ ಗುರುವಾರ ಖಾಸಗಿ ಪ್ಯಾರಾಮೆಡಿಕಲ್ ಕಾಲೇಜಿನ ವಾಶ್ರೂಮ್ನಲ್ಲಿ ಹಿಡನ್ ಕ್ಯಾಮೆರಾ ಇದ್ದ ವಿಚಾರವನ್ನು ತಳ್ಳಿಹಾಕಿದ್ದು ಅದರಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಹೇಳಿದ್ದಾರೆ. ಖುಷ್ಬೂ ಪ್ರಕರಣದ ತನಿಖೆಗಾಗಿ ಉಡುಪಿಯ ನೇತ್ರ ಜ್ಯೋತಿ ಇನ್ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ಗೆ ಭೇಟಿ ನೀಡಿ ಆಡಳಿತ ಮಂಡಳಿಯೊಂದಿಗೆ ಮಾತುಕತೆ ನಡೆಸಿದ್ದಾರೆ. ಶೌಚಾಲಯಗಳಲ್ಲಿ ಹಿಡನ್ ಕ್ಯಾಮೆರಾಗಳಿದ್ದವು ಎಂಬ ಮಾತುಗಳು ಕೇಳಿಬರುತ್ತಿವೆ. ಅದರಲ್ಲಿ ಸತ್ಯಾಂಶವಿಲ್ಲ. ಸುಳ್ಳು ವಿಡಿಯೋಗಳು ಹರಿದಾಡುತ್ತಿವೆ. ಅದೊಂದು […]
ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಭೆ ಆರೋಪಿಗಳ ಕೇಸ್ ವಾಪಾಸು ಪಡೆಯುವ ಉತ್ಸುಕತೆ ಉಡುಪಿ ಪ್ರಕರಣದಲ್ಲಿ ಕಾಣುತ್ತಿಲ್ಲ: ಸರ್ಕಾರದ ವಿರುದ್ದ ನಯನಾ ಆಕ್ರೋಶ

ಉಡುಪಿ: ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಭೆ ಪ್ರಕರಣದ ಆರೋಪಿಗಳ ಕೇಸ್ ಗಳನ್ನು ಹಿಂಪಡೆಯುವ ಪ್ರಸ್ತಾಪದ ಬಗ್ಗೆ ಉತ್ಸುಕತೆ ತೋರುವ ರಾಜ್ಯ ಗೃಹ ಇಲಾಖೆ ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಂದ ನಡೆದ ಹಿಂದೂ ವಿದ್ಯಾರ್ಥಿನಿಯ ಖಾಸಗಿ ವೀಡಿಯೋ ಚಿತ್ರೀಕರಣದ ಪ್ರಕರಣದ ತನಿಖೆಯ ಬಗ್ಗೆ ಯಾಕೆ ಮಹತ್ವ ನೀಡುತ್ತಿಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್ ಪ್ರಶ್ನಿಸಿದ್ದಾರೆ. ಈ ಗಂಭೀರ ಪ್ರಕರಣವು ರಾಜ್ಯದೆಲ್ಲೆಡೆ ಕೋಲಾಹಲ ಸೃಷ್ಟಿಸಿದ್ದು, ಸದ್ರಿ ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ […]