ವಾಶ್‌ರೂಮ್‌ನಲ್ಲಿ ಹಿಡನ್ ಕ್ಯಾಮರಾ ಇಲ್ಲ; ಘಟನೆಗೆ ಕೋಮು ಬಣ್ಣ ಹಚ್ಚಬೇಡಿ: ಖುಷ್ಬು ಸುಂದರ್

ಉಡುಪಿ: ರಾಷ್ಟ್ರೀಯ ಮಹಿಳಾ ಆಯೋಗದ (ಎನ್‌ಸಿಡಬ್ಲ್ಯು) ಸದಸ್ಯೆ ಮತ್ತು ಬಿಜೆಪಿ ನಾಯಕಿ ಖುಷ್ಬು ಸುಂದರ್ ಗುರುವಾರ ಖಾಸಗಿ ಪ್ಯಾರಾಮೆಡಿಕಲ್ ಕಾಲೇಜಿನ ವಾಶ್‌ರೂಮ್‌ನಲ್ಲಿ ಹಿಡನ್ ಕ್ಯಾಮೆರಾ ಇದ್ದ ವಿಚಾರವನ್ನು ತಳ್ಳಿಹಾಕಿದ್ದು ಅದರಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಹೇಳಿದ್ದಾರೆ. ಖುಷ್ಬೂ ಪ್ರಕರಣದ ತನಿಖೆಗಾಗಿ ಉಡುಪಿಯ ನೇತ್ರ ಜ್ಯೋತಿ ಇನ್ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ಗೆ ಭೇಟಿ ನೀಡಿ ಆಡಳಿತ ಮಂಡಳಿಯೊಂದಿಗೆ ಮಾತುಕತೆ ನಡೆಸಿದ್ದಾರೆ. ಶೌಚಾಲಯಗಳಲ್ಲಿ ಹಿಡನ್‌ ಕ್ಯಾಮೆರಾಗಳಿದ್ದವು ಎಂಬ ಮಾತುಗಳು ಕೇಳಿಬರುತ್ತಿವೆ. ಅದರಲ್ಲಿ ಸತ್ಯಾಂಶವಿಲ್ಲ. ಸುಳ್ಳು ವಿಡಿಯೋಗಳು ಹರಿದಾಡುತ್ತಿವೆ. ಅದೊಂದು […]

ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಭೆ ಆರೋಪಿಗಳ ಕೇಸ್ ವಾಪಾಸು ಪಡೆಯುವ ಉತ್ಸುಕತೆ ಉಡುಪಿ ಪ್ರಕರಣದಲ್ಲಿ ಕಾಣುತ್ತಿಲ್ಲ: ಸರ್ಕಾರದ ವಿರುದ್ದ ನಯನಾ ಆಕ್ರೋಶ

ಉಡುಪಿ: ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಭೆ ಪ್ರಕರಣದ ಆರೋಪಿಗಳ ಕೇಸ್ ಗಳನ್ನು ಹಿಂಪಡೆಯುವ ಪ್ರಸ್ತಾಪದ ಬಗ್ಗೆ ಉತ್ಸುಕತೆ ತೋರುವ ರಾಜ್ಯ ಗೃಹ ಇಲಾಖೆ ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಂದ ನಡೆದ ಹಿಂದೂ ವಿದ್ಯಾರ್ಥಿನಿಯ ಖಾಸಗಿ ವೀಡಿಯೋ ಚಿತ್ರೀಕರಣದ ಪ್ರಕರಣದ ತನಿಖೆಯ ಬಗ್ಗೆ ಯಾಕೆ ಮಹತ್ವ ನೀಡುತ್ತಿಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್ ಪ್ರಶ್ನಿಸಿದ್ದಾರೆ. ಈ ಗಂಭೀರ ಪ್ರಕರಣವು ರಾಜ್ಯದೆಲ್ಲೆಡೆ ಕೋಲಾಹಲ ಸೃಷ್ಟಿಸಿದ್ದು, ಸದ್ರಿ ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ […]

ವೀಡಿಯೋ ಪ್ರಕರಣ: ಜುಲೈ 27 ರಂದು ಕಾಪು ಪೇಟೆಯಲ್ಲಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಬೃಹತ್ ಪ್ರತಿಭಟನೆ

ಉಡುಪಿ: ಇಲ್ಲಿನ ನೇತ್ರ ಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಮೂರು ಮಂದಿ ಮುಸ್ಲಿಂ ವಿದ್ಯಾರ್ಥಿನಿಯರು ಕಾಲೇಜಿನ ಶೌಚಾಲಯದಲ್ಲಿ ಹಿಂದೂ ವಿದ್ಯಾರ್ಥಿನಿಯರ ವೀಡಿಯೋ ಚಿತ್ರೀಕರಿಸಿರುವ ಘಟನೆಯನ್ನು ಖಂಡಿಸಿ ಹಾಗೂ ಪೊಲೀಸ್ ಇಲಾಖೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸುವಂತೆ ಒತ್ತಾಯಿಸಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ಜುಲೈ 27 ರಂದು ಬೆಳಿಗ್ಗೆ 11.00 ಗಂಟೆಗೆ ಕಾಪು ಪೇಟೆಯ ಬಸ್ ನಿಲ್ದಾಣದ ಬಳಿ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ತಿಳಿಸಿದ್ದಾರೆ. […]

‘ಕರ್ನಾಟಕ ಸ್ಟೋರಿ’ಗೆ ಆಸ್ಪದವಿಲ್ಲ; ವೀಡಿಯೋ ಪ್ರಕರಣ ಸಮಗ್ರ ತನಿಖೆ ನಡೆಸಿ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಜಿಹಾದಿ ಮಾನಸಿಕತೆಯ ಕೆಲವು ವಿದ್ಯಾರ್ಥಿನಿಯರು ಉಡುಪಿ‌ಯ ನೇತ್ರ ಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ನಡೆದ ಗಂಭೀರ ಪ್ರಕರಣದಲ್ಲಿ ಭಾಗಿಯಾಗಿದ್ದು, ಕಳೆದ ಒಂದು ವರ್ಷದಿಂದ ನಿರಂತರವಾಗಿ ಈ ಪ್ರಕ್ರಿಯೆ ನಡೆಯುತ್ತಿದೆ ಎಂಬ ಮಾಹಿತಿ ಇದೆ. ಶಿಕ್ಷಣ ಮತ್ತು ಸಾಂಸ್ಕೃತಿಕ ನಗರಿ ಉಡುಪಿಯ ಖ್ಯಾತಿಗೆ ಮಸಿ ಬಳಿಯುವ ಪ್ರಯತ್ನದ ಮೂಲಕ ‘ಕೇರಳ ಸ್ಟೋರಿ’ಯಂತೆ ಉಡುಪಿ ಸಹಿತ ‘ಕರ್ನಾಟಕ ಸ್ಟೋರಿ’ಗೆ ಸ್ಕೆಚ್ ಹಾಕಲು ಎಂದಿಗೂ ಅವಕಾಶ ನೀಡಲಾರೆವು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಈಗಾಗಲೇ […]

ಬಿಜೆಪಿ ಶಾಸಕರ ಅಮಾನತು ರಾಜ್ಯದ ಇತಿಹಾಸದಲ್ಲೇ ಕಪ್ಪು ಚುಕ್ಕೆ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ದೇಶದೆಲ್ಲೆಡೆ ಕುಖ್ಯಾತರಾಗಿರುವ ಹಲವಾರು ಭ್ರಷ್ಟ ರಾಜಕೀಯ ಮುಖಂಡರನ್ನು ಬೆಂಗಳೂರಿಗೆ ಕರೆಸಿ ನಡೆಸಿರುವ ಕಾಂಗ್ರೆಸ್ ಪಕ್ಷದ ಸ್ವಯಂ ಸ್ವಾರ್ಥದ ರಾಜಕೀಯ ಸಮಾವೇಶಕ್ಕೆ ಸರಕಾರದ ಐಎಎಸ್ ಅಧಿಕಾರಿಗಳನ್ನು ನಿಯಮ ಬಾಹಿರವಾಗಿ ಬಳಸಿರುವ ಕ್ರಮದ ಕುರಿತು ವಿವರಣೆ ಕೇಳಿದ್ದ ಬಿಜೆಪಿಯ 10 ಶಾಸಕರನ್ನು ಸ್ಪೀಕರ್ ಸ್ಥಾನಕ್ಕೆ ಅಗೌರವ ತೋರಿದ್ದಾರೆಂಬ ನೆಪವೊಡ್ಡಿ ಸರ್ವಾಧಿಕಾರಿ ಧೋರಣೆಯಿಂದ ಸದನದಿಂದ ಅಮಾನತುಗೊಳಿಸಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ ಹಾಗೂ ಈ ಬಾರಿಯ ಪ್ರಥಮ ಅಧಿವೇಶನದಲ್ಲೇ ನಡೆದ ಈ ಘಟನೆ ರಾಜ್ಯದ ಇತಿಹಾಸದಲ್ಲೇ ಕಪ್ಪು ಚುಕ್ಕೆ ಎಂದು ಬಿಜೆಪಿ ಉಡುಪಿ […]