ವೀಡಿಯೋ ಪ್ರಕರಣ: ಜುಲೈ 27 ರಂದು ಕಾಪು ಪೇಟೆಯಲ್ಲಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಬೃಹತ್ ಪ್ರತಿಭಟನೆ

ಉಡುಪಿ: ಇಲ್ಲಿನ ನೇತ್ರ ಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಮೂರು ಮಂದಿ ಮುಸ್ಲಿಂ ವಿದ್ಯಾರ್ಥಿನಿಯರು ಕಾಲೇಜಿನ ಶೌಚಾಲಯದಲ್ಲಿ ಹಿಂದೂ ವಿದ್ಯಾರ್ಥಿನಿಯರ ವೀಡಿಯೋ ಚಿತ್ರೀಕರಿಸಿರುವ ಘಟನೆಯನ್ನು ಖಂಡಿಸಿ ಹಾಗೂ ಪೊಲೀಸ್ ಇಲಾಖೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸುವಂತೆ ಒತ್ತಾಯಿಸಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ಜುಲೈ 27 ರಂದು ಬೆಳಿಗ್ಗೆ 11.00 ಗಂಟೆಗೆ ಕಾಪು ಪೇಟೆಯ ಬಸ್ ನಿಲ್ದಾಣದ ಬಳಿ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ತಿಳಿಸಿದ್ದಾರೆ. […]
‘ಕರ್ನಾಟಕ ಸ್ಟೋರಿ’ಗೆ ಆಸ್ಪದವಿಲ್ಲ; ವೀಡಿಯೋ ಪ್ರಕರಣ ಸಮಗ್ರ ತನಿಖೆ ನಡೆಸಿ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಜಿಹಾದಿ ಮಾನಸಿಕತೆಯ ಕೆಲವು ವಿದ್ಯಾರ್ಥಿನಿಯರು ಉಡುಪಿಯ ನೇತ್ರ ಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ನಡೆದ ಗಂಭೀರ ಪ್ರಕರಣದಲ್ಲಿ ಭಾಗಿಯಾಗಿದ್ದು, ಕಳೆದ ಒಂದು ವರ್ಷದಿಂದ ನಿರಂತರವಾಗಿ ಈ ಪ್ರಕ್ರಿಯೆ ನಡೆಯುತ್ತಿದೆ ಎಂಬ ಮಾಹಿತಿ ಇದೆ. ಶಿಕ್ಷಣ ಮತ್ತು ಸಾಂಸ್ಕೃತಿಕ ನಗರಿ ಉಡುಪಿಯ ಖ್ಯಾತಿಗೆ ಮಸಿ ಬಳಿಯುವ ಪ್ರಯತ್ನದ ಮೂಲಕ ‘ಕೇರಳ ಸ್ಟೋರಿ’ಯಂತೆ ಉಡುಪಿ ಸಹಿತ ‘ಕರ್ನಾಟಕ ಸ್ಟೋರಿ’ಗೆ ಸ್ಕೆಚ್ ಹಾಕಲು ಎಂದಿಗೂ ಅವಕಾಶ ನೀಡಲಾರೆವು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಈಗಾಗಲೇ […]
ಬಿಜೆಪಿ ಶಾಸಕರ ಅಮಾನತು ರಾಜ್ಯದ ಇತಿಹಾಸದಲ್ಲೇ ಕಪ್ಪು ಚುಕ್ಕೆ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ದೇಶದೆಲ್ಲೆಡೆ ಕುಖ್ಯಾತರಾಗಿರುವ ಹಲವಾರು ಭ್ರಷ್ಟ ರಾಜಕೀಯ ಮುಖಂಡರನ್ನು ಬೆಂಗಳೂರಿಗೆ ಕರೆಸಿ ನಡೆಸಿರುವ ಕಾಂಗ್ರೆಸ್ ಪಕ್ಷದ ಸ್ವಯಂ ಸ್ವಾರ್ಥದ ರಾಜಕೀಯ ಸಮಾವೇಶಕ್ಕೆ ಸರಕಾರದ ಐಎಎಸ್ ಅಧಿಕಾರಿಗಳನ್ನು ನಿಯಮ ಬಾಹಿರವಾಗಿ ಬಳಸಿರುವ ಕ್ರಮದ ಕುರಿತು ವಿವರಣೆ ಕೇಳಿದ್ದ ಬಿಜೆಪಿಯ 10 ಶಾಸಕರನ್ನು ಸ್ಪೀಕರ್ ಸ್ಥಾನಕ್ಕೆ ಅಗೌರವ ತೋರಿದ್ದಾರೆಂಬ ನೆಪವೊಡ್ಡಿ ಸರ್ವಾಧಿಕಾರಿ ಧೋರಣೆಯಿಂದ ಸದನದಿಂದ ಅಮಾನತುಗೊಳಿಸಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ ಹಾಗೂ ಈ ಬಾರಿಯ ಪ್ರಥಮ ಅಧಿವೇಶನದಲ್ಲೇ ನಡೆದ ಈ ಘಟನೆ ರಾಜ್ಯದ ಇತಿಹಾಸದಲ್ಲೇ ಕಪ್ಪು ಚುಕ್ಕೆ ಎಂದು ಬಿಜೆಪಿ ಉಡುಪಿ […]
ಸದನದಿಂದ ಅಮಾನತು ಶಿಕ್ಷೆ ನೀಡಿದ ಸಭಾಧ್ಯಕ್ಷರಿಗೆ ಪತ್ರ ಬರೆದ ಕಾರ್ಕಳ ಶಾಸಕ ಸುನಿಲ್ ಕುಮಾರ್

ಬೆಂಗಳೂರು: ಸರ್ಕಾರದ ನಡೆಯನ್ನು ಪ್ರಶ್ನಿಸಿದ ಬಿಜೆಪಿ ನಾಯಕರನ್ನು ಅಮಾನತುಗೊಳಿಸಿದ ಸಭಾಧ್ಯಕ್ಷ ಯುಟಿ ಖಾದರ್ ಅವರಿಗೆ ಕಾರ್ಕಳ ಶಾಸಕ ಸುನಿಲ್ ಕುಮಾರ್ ಪತ್ರ ಬರೆದಿದ್ದಾರೆ. ಶ್ರೀ ಯು.ಟಿ.ಖಾದರ್ ಸನ್ಮಾನ್ಯ ಸಭಾಧ್ಯಕ್ಷರು ವಿಧಾನಸಭೆ ವಿಷಯ: ಏಕಪಕ್ಷೀಯವಾಗಿ ಅಮಾನತು ಶಿಕ್ಷೆಕೊಟ್ಟದ್ದಕ್ಕಾಗಿ ಧನ್ಯವಾದ ಸಮರ್ಪಣೆ ಮಾನ್ಯ ಸಭಾಧ್ಯಕ್ಷರೇ , ನಿಮ್ಮಿಂದ ನಾವು ಇಂಥದೊಂದು ನಡೆಯನ್ನು ನಿರೀಕ್ಷಿಸಿರಲಿಲ್ಲ. ಸಭಾಧ್ಯಕ್ಷ ಪೀಠದ ಮೇಲೆ ಕುಳಿತು ಎಲ್ಲರನ್ನೂ ಸಮಾನರೆಂದು ಪರಿಗಣಿಸಿ ಪ್ರಜಾಪ್ರಭುತ್ವದ ಮೌಲ್ಯವನ್ನು ಖಾದರ್ ಸಮರ್ಥವಾಗಿ ಎತ್ತಿ ಹಿಡಿಯಬಹುದೆಂಬ ನಮ್ಮನಿರೀಕ್ಷೆ ಇಂದು ಉಸುಕಿನ ಸೌಧದಂತೆ ಕುಸಿದು ಹೋಗಿದೆ. […]
ಬಿಜೆಪಿ ಶಾಸಕರ ಅಮಾನತು ಪ್ರಜಾಪ್ರಭುತ್ವದ ಕಗ್ಗೊಲೆ: ಕೆ. ಉದಯ ಕುಮಾರ್ ಶೆಟ್ಟಿ

ಮಂಗಳೂರು: ಬಿಜೆಪಿಯ ಹತ್ತು ಮಂದಿ ಶಾಸಕರನ್ನು ಸದನದಿಂದ ಅಮಾನತುಗೊಳಿಸಿರುವ ಸ್ಪೀಕರ್ ಕ್ರಮ ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕದಲ್ಲಿ ಪ್ರಸ್ತುತ ಕಾಂಗ್ರೆಸ್ ನೇತೃತ್ವದ ಗೂಂಡಾರಾಜ್ ಆಡಳಿತ ಚಾಲ್ತಿಯಲ್ಲಿದೆ. ವಿಧಾನಸಭೆಯ ಸ್ಪೀಕರ್ ಕಾಂಗ್ರೆಸ್ ಪಕ್ಷದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ. ಈ ಹಿಂದೆ ಕಾಂಗ್ರೆಸ್ ಶಾಸಕರು ಸದನದಲ್ಲಿ ಗೂಂಡಾಗಿರಿ ನಡೆಸಿರುವುದನ್ನು ರಾಜ್ಯದ ಜನತೆ ಮರೆತಿಲ್ಲ. ಆಗ ಯಾವುದೇ ಅವಸರದ ಕ್ರಮ ಕೈಗೊಂಡಿರುವುದಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಶ್ನಿಸುವ ಹಕ್ಕು ಎಲ್ಲರಿಗೂ ಇದೆ. […]