ಸದನದಿಂದ ಅಮಾನತು ಶಿಕ್ಷೆ ನೀಡಿದ ಸಭಾಧ್ಯಕ್ಷರಿಗೆ ಪತ್ರ ಬರೆದ ಕಾರ್ಕಳ ಶಾಸಕ ಸುನಿಲ್ ಕುಮಾರ್

ಬೆಂಗಳೂರು: ಸರ್ಕಾರದ ನಡೆಯನ್ನು ಪ್ರಶ್ನಿಸಿದ ಬಿಜೆಪಿ ನಾಯಕರನ್ನು ಅಮಾನತುಗೊಳಿಸಿದ ಸಭಾಧ್ಯಕ್ಷ ಯುಟಿ ಖಾದರ್ ಅವರಿಗೆ ಕಾರ್ಕಳ ಶಾಸಕ ಸುನಿಲ್ ಕುಮಾರ್ ಪತ್ರ ಬರೆದಿದ್ದಾರೆ. ಶ್ರೀ ಯು.ಟಿ.ಖಾದರ್ ಸನ್ಮಾನ್ಯ ಸಭಾಧ್ಯಕ್ಷರು ವಿಧಾನಸಭೆ ವಿಷಯ: ಏಕಪಕ್ಷೀಯವಾಗಿ ಅಮಾನತು ಶಿಕ್ಷೆಕೊಟ್ಟದ್ದಕ್ಕಾಗಿ ಧನ್ಯವಾದ ಸಮರ್ಪಣೆ ಮಾನ್ಯ ಸಭಾಧ್ಯಕ್ಷರೇ , ನಿಮ್ಮಿಂದ ನಾವು ಇಂಥದೊಂದು ನಡೆಯನ್ನು ನಿರೀಕ್ಷಿಸಿರಲಿಲ್ಲ. ಸಭಾಧ್ಯಕ್ಷ ಪೀಠದ ಮೇಲೆ ಕುಳಿತು ಎಲ್ಲರನ್ನೂ ಸಮಾನರೆಂದು ಪರಿಗಣಿಸಿ ಪ್ರಜಾಪ್ರಭುತ್ವದ ಮೌಲ್ಯವನ್ನು ಖಾದರ್ ಸಮರ್ಥವಾಗಿ ಎತ್ತಿ ಹಿಡಿಯಬಹುದೆಂಬ ನಮ್ಮನಿರೀಕ್ಷೆ ಇಂದು ಉಸುಕಿನ ಸೌಧದಂತೆ ಕುಸಿದು ಹೋಗಿದೆ. […]
ಬಿಜೆಪಿ ಶಾಸಕರ ಅಮಾನತು ಪ್ರಜಾಪ್ರಭುತ್ವದ ಕಗ್ಗೊಲೆ: ಕೆ. ಉದಯ ಕುಮಾರ್ ಶೆಟ್ಟಿ

ಮಂಗಳೂರು: ಬಿಜೆಪಿಯ ಹತ್ತು ಮಂದಿ ಶಾಸಕರನ್ನು ಸದನದಿಂದ ಅಮಾನತುಗೊಳಿಸಿರುವ ಸ್ಪೀಕರ್ ಕ್ರಮ ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕದಲ್ಲಿ ಪ್ರಸ್ತುತ ಕಾಂಗ್ರೆಸ್ ನೇತೃತ್ವದ ಗೂಂಡಾರಾಜ್ ಆಡಳಿತ ಚಾಲ್ತಿಯಲ್ಲಿದೆ. ವಿಧಾನಸಭೆಯ ಸ್ಪೀಕರ್ ಕಾಂಗ್ರೆಸ್ ಪಕ್ಷದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ. ಈ ಹಿಂದೆ ಕಾಂಗ್ರೆಸ್ ಶಾಸಕರು ಸದನದಲ್ಲಿ ಗೂಂಡಾಗಿರಿ ನಡೆಸಿರುವುದನ್ನು ರಾಜ್ಯದ ಜನತೆ ಮರೆತಿಲ್ಲ. ಆಗ ಯಾವುದೇ ಅವಸರದ ಕ್ರಮ ಕೈಗೊಂಡಿರುವುದಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಶ್ನಿಸುವ ಹಕ್ಕು ಎಲ್ಲರಿಗೂ ಇದೆ. […]
26 ಪಕ್ಷಗಳ ಮೈತ್ರಿಕೂಟದ ಹೆಸರು INDIA ಎಂದು ಘೋಷಣೆ: ಈ ಬಾರಿಯ ಲೋಕಸಭೆ ಚುನಾವಣೆ NDA v/s INDIA ನಡುವೆ

ಬೆಂಗಳೂರು: ಮಂಗಳವಾರ ರಾಜ್ಯ ರಾಜಧಾನಿಯಲ್ಲಿ ನಡೆದ ಪ್ರತಿಪಕ್ಷಗಳ ನಾಲ್ಕು ಗಂಟೆಗಳ ಸುದೀರ್ಘ ಸಭೆಯ ಕೊನೆಯಲ್ಲಿ, 26 ಪಕ್ಷಗಳು ತಮ್ಮ ಮೈತ್ರಿಕೂಟದ ಹೆಸರನ್ನು INDIA ಎಂದು ಘೋಷಿಸಿಕೊಂಡವು. INDIA- Indian National Developmental, Inclusive Alliance (ಭಾರತೀಯ ರಾಷ್ಟ್ರೀಯ ಅಭಿವೃದ್ಧಿ, ಅಂತರ್ಗತ ಮೈತ್ರಿ). ಪ್ರತಿಪಕ್ಷಗಳು 2024 ರ ಚುನಾವಣಾ ಸ್ಪರ್ಧೆಯನ್ನು ಬಿಜೆಪಿ ಮತ್ತು ದೇಶದ ಉಳಿದ ಭಾಗಗಳ ನಡುವಿನ ಹೋರಾಟ ಎಂದು ರೂಪಿಸಿದ್ದು, ಮಂಗಳವಾರ ಬೆಳಗ್ಗೆ ಮುಖಂಡರು ಸಭೆಗೆ ಕುಳಿತುಕೊಳ್ಳುವ ಮುನ್ನವೇ ಹೆಸರನ್ನು ನಿರ್ಧರಿಸಲಾಯಿತು ಎಂದು ಮೂಲಗಳು ತಿಳಿಸಿವೆ. […]
ಪ್ರಸ್ತುತ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾನೂನು ರದ್ದು ಮಸೂದೆ ಮಂಡನೆ ಇಲ್ಲ: ವರದಿ

ಬೆಂಗಳೂರು: ಹಿಂದಿನ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಬಲವಂತದ ಮತಾಂತರ ನಿಷೇಧ ಕಾನೂನು ಮಸೂದೆಯನ್ನು ರದ್ದುಗೊಳಿಸುವ ಜೂನ್ 15 ರ ಕ್ಯಾಬಿನೆಟ್ ನಿರ್ಧಾರದ ಹೊರತಾಗಿಯೂ ರಾಜ್ಯ ವಿಧಾನಮಂಡಲದಲ್ಲಿ ನಡೆಯುತ್ತಿರುವ ಬಜೆಟ್ ಅಧಿವೇಶನದಲ್ಲಿ ಮಂಡಿಸದಿರಲು ಕಾಂಗ್ರೆಸ್ ಸರ್ಕಾರ ನಿರ್ಧರಿಸಿದೆ. ಪ್ರಸ್ತುತ ಅಧಿವೇಶನದಲ್ಲಿ ಮಸೂದೆ ಮಂಡನೆಯಾಗುವ ಸಾಧ್ಯತೆ ಇಲ್ಲ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಚೇರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಮಾಧ್ಯಮ ವರದಿ ತಿಳಿಸಿದೆ. ಕೆಲವು ದಿನಗಳ ಹಿಂದೆ ಸಿದ್ಧಪಡಿಸಿದ ಕರಡು ಮಸೂದೆಯನ್ನು ಸರ್ಕಾರವು ಹಿಂತೆಗೆದುಕೊಂಡಿದೆ […]
ನಾಳೆ (ಜು.14) ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಉಡುಪಿಗೆ; ಪ್ರಬುದ್ಧರ ಗೋಷ್ಠಿಯಲ್ಲಿ ಭಾಗಿ

ಉಡುಪಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ 9 ವರ್ಷಗಳ ಸಾಧನೆ ಮತ್ತು ಪ್ರಬುದ್ಧರ ಗೋಷ್ಠಿಯನ್ನುದ್ದೇಶಿಸಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಜು.14ರಂದು ಬೆಳಿಗ್ಗೆ 11.00 ಗಂಟೆಗೆ ಮಣಿಪಾಲದ ಹೋಟೆಲ್ ಕಂಟ್ರಿ ಇನ್ ಸಭಾಂಗಣದಲ್ಲಿ ಮಾತನಾಡಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದರು. ಅವರು ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಬಿಜೆಪಿ ಉಡುಪಿ ನಗರ ಮಂಡಲದ ಸಭೆಯಲ್ಲಿ ಭಾಗವಹಿಸಿ, ‘ಮಹಾ ಸಂಪರ್ಕ […]