ಐದು ರಾಜ್ಯಗಳಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೊಸ ಅಭ್ಯರ್ಥಿಗಳ ನೇಮಕಕ್ಕೆ ಬಿಜೆಪಿ ಸಿದ್ದತೆ; ಒಕ್ಕಲಿಗ ಸಮುದಾಯಕ್ಕೆ ದೊರೆಯಲಿದೆಯೆ ರಾಜ್ಯದ ಚುಕ್ಕಾಣಿ?

ನವದೆಹಲಿ: ಪ್ರಮುಖ ಬೆಳವಣಿಗೆಯಲ್ಲಿ, ಭಾರತೀಯ ಜನತಾ ಪಕ್ಷವು ಐದು ರಾಜ್ಯಗಳಲ್ಲಿ ತನ್ನ ರಾಜ್ಯ ಘಟಕಗಳಿಗೆ ಹೊಸ ಅಧ್ಯಕ್ಷರ ನೇಮಕಗಳನ್ನು ಕೈಗೊಳ್ಳಲಿದೆ. ಗುಜರಾತ್, ತೆಲಂಗಾಣ, ಪಂಜಾಬ್, ಮಧ್ಯಪ್ರದೇಶ ಮತ್ತು ಕರ್ನಾಟಕಕ್ಕೆ ಹೊಸ ರಾಜ್ಯಾಧ್ಯಕ್ಷರನ್ನು ಹೆಸರಿಸುವ ಸಾಧ್ಯತೆಯಿದೆ. ಮೂಲಗಳ ಪ್ರಕಾರ, ಜಿ ಕಿಶನ್ ರೆಡ್ಡಿ ಅವರನ್ನು ತೆಲಂಗಾಣ ಘಟಕದ ಬಿಜೆಪಿ ಅಧ್ಯಕ್ಷರನ್ನಾಗಿ ಮಾಡಬಹುದು ಮತ್ತು ಪಂಜಾಬ್ ಘಟಕದ ಮುಖ್ಯಸ್ಥರಾಗಿ ಸುನೀಲ್ ಜಾಖರ್ ಅವರಿಗೆ ಜವಾಬ್ದಾರಿಯನ್ನು ನೀಡಬಹುದು. ಇದೇ ವೇಳೆ ಅಶ್ವಥ್ ನಾರಾಯಣ್ ಅಥವಾ ಶೋಭಾ ಕರಂದ್ಲಾಜೆ ಅವರನ್ನು ಬಿಜೆಪಿ ಕರ್ನಾಟಕ […]
10 ಕೆ.ಜಿ ಅಕ್ಕಿ ಬದಲಿಗೆ 5 ಕೆ.ಜಿ ಅಕ್ಕಿ ಕಾಸು; ಕಾಂಗ್ರೆಸ್ ನಿಂದ ಜನತೆಗೆ ದ್ರೋಹ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ವಿಧಾನಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ’10 ಕೆ.ಜಿ. ಅಕ್ಕಿ ಫ್ರೀ… ಬೇಕಾ ಬೇಡ್ವಾ…’ ಎಂದು ಘಂಟಾಘೋಷವಾಗಿ ಸಾರಿದ್ದ ಸಿ.ಎಂ. ಸಿದ್ದರಾಮಯ್ಯನವರು ಇದೀಗ ರಾಗ ಬದಲಿಸಿ, ಸಚಿವ ಸಂಪುಟ ಸಭೆಯ ತೀರ್ಮಾನದಂತೆ 10 ಕೆ.ಜಿ. ಅಕ್ಕಿಯ ಬದಲಿಗೆ ಕೇವಲ 5 ಕೆ.ಜಿ. ಅಕ್ಕಿಯ ಮೌಲ್ಯವನ್ನು ಪ್ರತೀ ಕೆ.ಜಿ.ಗೆ ರೂ.34ರಂತೆ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡುದಾರರಿಗೆ ನೀಡುತ್ತೇವೆ ಎಂದಿರುವುದು ರಾಜ್ಯದ ಜನತೆಗೆ ಬಗೆದ ದ್ರೋಹವಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ರಾಜ್ಯದ ಜನತೆಗೆ ನೀಡುತ್ತಿರುವ ಉಚಿತ […]
ರಾಹುಲ್ ಗಾಂಧಿ ವಿರುದ್ದ ಅವಹೇಳನಕಾರಿ ಪೋಸ್ಟ್: ಬಿಜೆಪಿ ಐಟಿ ಸೆಲ್ ಮುಖ್ಯಸ್ಥರ ವಿರುದ್ಧ ಎಫ್ಐಆರ್ ದಾಖಲಿಸಿದ ಕರ್ನಾಟಕ ಕಾಂಗ್ರೆಸ್

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ದ ಅವಹೇಳನಕಾರಿ ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ವಿರುದ್ಧ ಕಾಂಗ್ರೆಸ್ನ ರಮೇಶ್ ಬಾಬು ದೂರು ನೀಡಿದ್ದಾರೆ. ಟ್ವಿಟರ್ ನಲ್ಲಿ ಕಾಂಗ್ರೆಸ್ ನಾಯಕರ ಬಗ್ಗೆ ಅವಹೇಳನಕಾರಿ ಪೋಸ್ಟ್ಗಳ ಹಿನ್ನೆಲೆ ರಮೇಶ್ ಬಾಬು ದೂರು ನೀಡಿದ್ದಾರೆ. ಆ್ಯನಿಮೇಟೆಡ್ ವೀಡಿಯೋ ಒಂದರಲ್ಲಿ ಕಾಂಗ್ರೆಸ್ ಪಕ್ಷ ದೇಶದ್ರೋಹಿ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದೆ ಎಂದು ಉಲ್ಲೇಖಿಸಲಾಗಿತ್ತು. ಈ ಹಿನ್ನೆಲೆಯ ಬಿಜೆಪಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ವಿರುದ್ಧ ಹೈಗ್ರೌಂಡ್ಸ್ […]
ಒಬಿಸಿ ಮೋರ್ಚಾ ವತಿಯಿಂದ ಕುಯಿಲಾಡಿ ಸುರೇಶ್ ನಾಯಕ್ ಅವರಿಗೆ ಸನ್ಮಾನ

ಉಡುಪಿ: ಕಳೆದ ಮೂರು ವರ್ಷಗಳಿಂದ ಜಿಲ್ಲೆಯಾದ್ಯಂತ ಪಕ್ಷವನ್ನು ಬೂತ್ ಮಟ್ಟದಿಂದ ಸಂಘಟನಾತ್ಮಕವಾಗಿ ಸದೃಢಗೊಳಿಸುವ ಜೊತೆಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಂಘಟಿತ ಪ್ರಯತ್ನದ ಮೂಲಕ ಉಡುಪಿ ಜಿಲ್ಲೆಯ ಐದೂ ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಜಿಲ್ಲೆಯ ನೇತೃತ್ವ ವಹಿಸಿರುವ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರನ್ನು ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ಜಿಲ್ಲಾ ಕಛೇರಿಯಲ್ಲಿ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಉಡುಪಿ ಶಾಸಕ ಯಶ್ ಪಾಲ್ ಎ. ಸುವರ್ಣ, […]
ಬಿಜೆಪಿ ರಾಜ್ಯಾಧ್ಯಕ್ಷರ ರಾಜೀನಾಮೆ ಪ್ರಹಸನ: ರಾಜೀನಾಮೆ ಕೊಟ್ಟಿಲ್ಲ ಎಂದ ಕಟೀಲ್

ಬಳ್ಳಾರಿ: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಸೋಲಿಗೆ ನೈತಿಕ ಹೊಣೆ ಹೊತ್ತು ನಾನು ಈಗಾಗಲೇ ಪಕ್ಷದ ರಾಜ್ಯ ಘಟಕದ ಅಧ್ಯಕ್ಷನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದರು. ಬಳ್ಳಾರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಕಟೀಲ್, ನನ್ನ ಅವಧಿ ಮುಕ್ತಾಯವಾಗಿದೆ. ಹೊಸದಾಗಿ ಪಕ್ಷದ ರಾಜ್ಯಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ. ನೈತಿಕವಾಗಿ ನಾನು ವಿಧಾನಸಭಾ ಚುನಾವಣೆಯ ಸೋಲಿನ ಜವಾಬ್ದಾರಿ ಹೊತ್ತಿದ್ದೇನೆ. ಜವಾಬ್ದಾರಿ ಹೊತ್ತು […]