ಕಾಂಗ್ರೆಸ್ ಆಡಳಿತಾವಧಿಯಲ್ಲಿ ಹಿಂದೂಗಳ ಅಮಾನುಷ ಹತ್ಯೆ ಖಂಡನೀಯ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕೊಲೆ ಗಡುಕರಿಗೆ, ಭಯೋತ್ಪಾದಕರಿಗೆ ಬಲ ನೀಡಿದಂತೆ ಎಂಬುದಕ್ಕೆ ಕಾಂಗ್ರೆಸ್ ರಾಜ್ಯದ ಆಡಳಿತದ ಚುಕ್ಕಾಣಿ ಹಿಡಿದ ಎರಡೇ ತಿಂಗಳಲ್ಲಿ ರಾಜ್ಯದಲ್ಲಿ ಜೈನ ಮುನಿ ಮತ್ತು ಹಿಂದೂ ಕಾರ್ಯಕರ್ತನ ಅಮಾನುಷ ಹತ್ಯೆ ನಡೆದಿರುವುದು ಜ್ವಲಂತ ನಿದರ್ಶನವಾಗಿದೆ. ಹಂತಕರಿಗೆ ಕಾನೂನಿನ ಭಯವಿಲ್ಲದೆ ಇಂತಹ ಭೀಕರ ಕೊಲೆಗಳು ನಿರಂತರ ನಡೆಯುತ್ತಿರುವುದು ಅತ್ಯಂತ ಖಂಡನೀಯ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ‌ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜ್ […]

ಕಾಂಗ್ರೆಸ್ ನದ್ದು ನಿರಾಶಾದಾಯಕ ಗೊಂದಲಭರಿತ ಬಜೆಟ್: ನಯನಾ ಗಣೇಶ್

ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಈ ಬಾರಿಯ ಬಜೆಟ್ ನಿರಾಶಾದಾಯಕವಾಗಿದ್ದು, ಬಿಜೆಪಿ ಸರ್ಕಾರದ ಅನೇಕ ಜನಪರ ಯೋಜನೆಗಳಿಗೆ ತಿಲಾಂಜಲಿ ನೀಡಿದ್ದಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ರಾಜ್ಯ ಸರ್ಕಾರದ ಬಜೆಟ್ ನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕೈ ಬಿಡುವ ಮೂಲಕ ವಿದ್ಯಾರ್ಥಿಗಳಲ್ಲಿ ಗೊಂದಲ ಮೂಡಿಸುವ ಕಾರ್ಯ ಮಾಡಿದೆ. ವಿವೇಕ ಶಾಲೆ ಅಭಿವೃದ್ಧಿ ಯೋಜನೆ ರದ್ದು, ಅಗ್ನಿವೀರ್ ತರಬೇತಿ ಯೋಜನೆ, ಸ್ವಾಮಿ ವಿವೇಕಾನಂದರ ಯುವಶಕ್ತಿ ಯೋಜನೆ, ಮಹಿಳಾ ಸ್ತ್ರೀ ಸಾಮರ್ಥ್ಯ ಯೋಜನೆ, […]

ಐದು ರಾಜ್ಯಗಳಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೊಸ ಅಭ್ಯರ್ಥಿಗಳ ನೇಮಕಕ್ಕೆ ಬಿಜೆಪಿ ಸಿದ್ದತೆ; ಒಕ್ಕಲಿಗ ಸಮುದಾಯಕ್ಕೆ ದೊರೆಯಲಿದೆಯೆ ರಾಜ್ಯದ ಚುಕ್ಕಾಣಿ?

ನವದೆಹಲಿ: ಪ್ರಮುಖ ಬೆಳವಣಿಗೆಯಲ್ಲಿ, ಭಾರತೀಯ ಜನತಾ ಪಕ್ಷವು ಐದು ರಾಜ್ಯಗಳಲ್ಲಿ ತನ್ನ ರಾಜ್ಯ ಘಟಕಗಳಿಗೆ ಹೊಸ ಅಧ್ಯಕ್ಷರ ನೇಮಕಗಳನ್ನು ಕೈಗೊಳ್ಳಲಿದೆ. ಗುಜರಾತ್, ತೆಲಂಗಾಣ, ಪಂಜಾಬ್, ಮಧ್ಯಪ್ರದೇಶ ಮತ್ತು ಕರ್ನಾಟಕಕ್ಕೆ ಹೊಸ ರಾಜ್ಯಾಧ್ಯಕ್ಷರನ್ನು ಹೆಸರಿಸುವ ಸಾಧ್ಯತೆಯಿದೆ. ಮೂಲಗಳ ಪ್ರಕಾರ, ಜಿ ಕಿಶನ್ ರೆಡ್ಡಿ ಅವರನ್ನು ತೆಲಂಗಾಣ ಘಟಕದ ಬಿಜೆಪಿ ಅಧ್ಯಕ್ಷರನ್ನಾಗಿ ಮಾಡಬಹುದು ಮತ್ತು ಪಂಜಾಬ್ ಘಟಕದ ಮುಖ್ಯಸ್ಥರಾಗಿ ಸುನೀಲ್ ಜಾಖರ್ ಅವರಿಗೆ ಜವಾಬ್ದಾರಿಯನ್ನು ನೀಡಬಹುದು. ಇದೇ ವೇಳೆ ಅಶ್ವಥ್ ನಾರಾಯಣ್ ಅಥವಾ ಶೋಭಾ ಕರಂದ್ಲಾಜೆ ಅವರನ್ನು ಬಿಜೆಪಿ ಕರ್ನಾಟಕ […]

10 ಕೆ.ಜಿ ಅಕ್ಕಿ ಬದಲಿಗೆ 5 ಕೆ.ಜಿ ಅಕ್ಕಿ ಕಾಸು; ಕಾಂಗ್ರೆಸ್ ನಿಂದ ಜನತೆಗೆ ದ್ರೋಹ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ವಿಧಾನಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ’10 ಕೆ.ಜಿ. ಅಕ್ಕಿ ಫ್ರೀ… ಬೇಕಾ ಬೇಡ್ವಾ…’ ಎಂದು ಘಂಟಾಘೋಷವಾಗಿ ಸಾರಿದ್ದ ಸಿ.ಎಂ. ಸಿದ್ದರಾಮಯ್ಯನವರು ಇದೀಗ ರಾಗ ಬದಲಿಸಿ, ಸಚಿವ ಸಂಪುಟ ಸಭೆಯ ತೀರ್ಮಾನದಂತೆ 10 ಕೆ.ಜಿ. ಅಕ್ಕಿಯ ಬದಲಿಗೆ ಕೇವಲ 5 ಕೆ.ಜಿ. ಅಕ್ಕಿಯ ಮೌಲ್ಯವನ್ನು ಪ್ರತೀ ಕೆ.ಜಿ.ಗೆ ರೂ.34ರಂತೆ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡುದಾರರಿಗೆ ನೀಡುತ್ತೇವೆ ಎಂದಿರುವುದು ರಾಜ್ಯದ ಜನತೆಗೆ ಬಗೆದ ದ್ರೋಹವಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ರಾಜ್ಯದ ಜನತೆಗೆ ನೀಡುತ್ತಿರುವ ಉಚಿತ […]

ರಾಹುಲ್ ಗಾಂಧಿ ವಿರುದ್ದ ಅವಹೇಳನಕಾರಿ ಪೋಸ್ಟ್: ಬಿಜೆಪಿ ಐಟಿ ಸೆಲ್ ಮುಖ್ಯಸ್ಥರ ವಿರುದ್ಧ ಎಫ್ಐಆರ್ ದಾಖಲಿಸಿದ ಕರ್ನಾಟಕ ಕಾಂಗ್ರೆಸ್

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ದ ಅವಹೇಳನಕಾರಿ ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ವಿರುದ್ಧ ಕಾಂಗ್ರೆಸ್​ನ ರಮೇಶ್ ಬಾಬು ದೂರು ನೀಡಿದ್ದಾರೆ. ಟ್ವಿಟರ್ ನಲ್ಲಿ ಕಾಂಗ್ರೆಸ್ ನಾಯಕರ ಬಗ್ಗೆ ಅವಹೇಳನಕಾರಿ ಪೋಸ್ಟ್​ಗಳ ಹಿನ್ನೆಲೆ ರಮೇಶ್ ಬಾಬು ದೂರು ನೀಡಿದ್ದಾರೆ. ಆ್ಯನಿಮೇಟೆಡ್ ವೀಡಿಯೋ ಒಂದರಲ್ಲಿ ಕಾಂಗ್ರೆಸ್ ಪಕ್ಷ ದೇಶದ್ರೋಹಿ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದೆ ಎಂದು ಉಲ್ಲೇಖಿಸಲಾಗಿತ್ತು. ಈ ಹಿನ್ನೆಲೆಯ ಬಿಜೆಪಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ವಿರುದ್ಧ ಹೈಗ್ರೌಂಡ್ಸ್ […]