10 ಕೆ.ಜಿ ಅಕ್ಕಿ ಬದಲಿಗೆ 5 ಕೆ.ಜಿ ಅಕ್ಕಿ ಕಾಸು; ಕಾಂಗ್ರೆಸ್ ನಿಂದ ಜನತೆಗೆ ದ್ರೋಹ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ವಿಧಾನಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ’10 ಕೆ.ಜಿ. ಅಕ್ಕಿ ಫ್ರೀ… ಬೇಕಾ ಬೇಡ್ವಾ…’ ಎಂದು ಘಂಟಾಘೋಷವಾಗಿ ಸಾರಿದ್ದ ಸಿ.ಎಂ. ಸಿದ್ದರಾಮಯ್ಯನವರು ಇದೀಗ ರಾಗ ಬದಲಿಸಿ, ಸಚಿವ ಸಂಪುಟ ಸಭೆಯ ತೀರ್ಮಾನದಂತೆ 10 ಕೆ.ಜಿ. ಅಕ್ಕಿಯ ಬದಲಿಗೆ ಕೇವಲ 5 ಕೆ.ಜಿ. ಅಕ್ಕಿಯ ಮೌಲ್ಯವನ್ನು ಪ್ರತೀ ಕೆ.ಜಿ.ಗೆ ರೂ.34ರಂತೆ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡುದಾರರಿಗೆ ನೀಡುತ್ತೇವೆ ಎಂದಿರುವುದು ರಾಜ್ಯದ ಜನತೆಗೆ ಬಗೆದ ದ್ರೋಹವಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ರಾಜ್ಯದ ಜನತೆಗೆ ನೀಡುತ್ತಿರುವ ಉಚಿತ […]

ರಾಹುಲ್ ಗಾಂಧಿ ವಿರುದ್ದ ಅವಹೇಳನಕಾರಿ ಪೋಸ್ಟ್: ಬಿಜೆಪಿ ಐಟಿ ಸೆಲ್ ಮುಖ್ಯಸ್ಥರ ವಿರುದ್ಧ ಎಫ್ಐಆರ್ ದಾಖಲಿಸಿದ ಕರ್ನಾಟಕ ಕಾಂಗ್ರೆಸ್

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ದ ಅವಹೇಳನಕಾರಿ ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ವಿರುದ್ಧ ಕಾಂಗ್ರೆಸ್​ನ ರಮೇಶ್ ಬಾಬು ದೂರು ನೀಡಿದ್ದಾರೆ. ಟ್ವಿಟರ್ ನಲ್ಲಿ ಕಾಂಗ್ರೆಸ್ ನಾಯಕರ ಬಗ್ಗೆ ಅವಹೇಳನಕಾರಿ ಪೋಸ್ಟ್​ಗಳ ಹಿನ್ನೆಲೆ ರಮೇಶ್ ಬಾಬು ದೂರು ನೀಡಿದ್ದಾರೆ. ಆ್ಯನಿಮೇಟೆಡ್ ವೀಡಿಯೋ ಒಂದರಲ್ಲಿ ಕಾಂಗ್ರೆಸ್ ಪಕ್ಷ ದೇಶದ್ರೋಹಿ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದೆ ಎಂದು ಉಲ್ಲೇಖಿಸಲಾಗಿತ್ತು. ಈ ಹಿನ್ನೆಲೆಯ ಬಿಜೆಪಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ವಿರುದ್ಧ ಹೈಗ್ರೌಂಡ್ಸ್ […]

ಒಬಿಸಿ ಮೋರ್ಚಾ ವತಿಯಿಂದ ಕುಯಿಲಾಡಿ ಸುರೇಶ್ ನಾಯಕ್ ಅವರಿಗೆ ಸನ್ಮಾನ

ಉಡುಪಿ: ಕಳೆದ ಮೂರು ವರ್ಷಗಳಿಂದ ಜಿಲ್ಲೆಯಾದ್ಯಂತ ಪಕ್ಷವನ್ನು ಬೂತ್ ಮಟ್ಟದಿಂದ ಸಂಘಟನಾತ್ಮಕವಾಗಿ ಸದೃಢಗೊಳಿಸುವ ಜೊತೆಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಂಘಟಿತ ಪ್ರಯತ್ನದ ಮೂಲಕ ಉಡುಪಿ ಜಿಲ್ಲೆಯ ಐದೂ ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಜಿಲ್ಲೆಯ ನೇತೃತ್ವ ವಹಿಸಿರುವ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರನ್ನು ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ಜಿಲ್ಲಾ ಕಛೇರಿಯಲ್ಲಿ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಉಡುಪಿ ಶಾಸಕ ಯಶ್ ಪಾಲ್ ಎ. ಸುವರ್ಣ, […]

ಬಿಜೆಪಿ ರಾಜ್ಯಾಧ್ಯಕ್ಷರ ರಾಜೀನಾಮೆ ಪ್ರಹಸನ: ರಾಜೀನಾಮೆ ಕೊಟ್ಟಿಲ್ಲ ಎಂದ ಕಟೀಲ್

ಬಳ್ಳಾರಿ: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಸೋಲಿಗೆ ನೈತಿಕ ಹೊಣೆ ಹೊತ್ತು ನಾನು ಈಗಾಗಲೇ ಪಕ್ಷದ ರಾಜ್ಯ ಘಟಕದ ಅಧ್ಯಕ್ಷನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಹೇಳಿದ್ದರು. ಬಳ್ಳಾರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಕಟೀಲ್, ನನ್ನ ಅವಧಿ ಮುಕ್ತಾಯವಾಗಿದೆ. ಹೊಸದಾಗಿ ಪಕ್ಷದ ರಾಜ್ಯಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ. ನೈತಿಕವಾಗಿ ನಾನು ವಿಧಾನಸಭಾ ಚುನಾವಣೆಯ ಸೋಲಿನ ಜವಾಬ್ದಾರಿ ಹೊತ್ತಿದ್ದೇನೆ. ಜವಾಬ್ದಾರಿ ಹೊತ್ತು […]

ಉಡುಪಿ ನಗರ ಮಹಿಳಾ ಹೈಟೆಕ್ ಮೀನು ಮಾರುಕಟ್ಟೆಗೆ ಶಾಸಕ ಯಶ್‍ಪಾಲ್ ಸುವರ್ಣ ಭೇಟಿ; ಮೀನುಗಾರ ಮಹಿಳೆಯರ ಬೇಡಿಕೆ ಈಡೇರಿಕೆ ಭರವಸೆ

ಉಡುಪಿ: ಉಡುಪಿ ನಗರ ಮಹಿಳಾ ಹೈಟೆಕ್ ಮೀನು ಮಾರುಕಟ್ಟೆಗೆ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್‍ಪಾಲ್ ಸುವರ್ಣ ಅವರು ಉಡುಪಿ ನಗರಸಭೆಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಮೀನುಗಾರ ಮಹಿಳೆಯರಿಂದ ಮನವಿಯನ್ನು ಸ್ವೀಕರಿಸಿ ಮೀನುಗಾರ ಮಹಿಳೆಯರ ಅಗತ್ಯ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದರು. ಮೀನು ಮಾರುಕಟ್ಟೆಯಲ್ಲಿ ಹೋಲ್‍ಸೇಲ್ ಮೀನು ವ್ಯಾಪಾರ ಮಾಡುವ ಸ್ಥಳದಲ್ಲಿ ಗೋಡೆ ಬಿರುಕು ಬಿಟ್ಟಿದ್ದು, ಮಳೆಗಾಲದಲ್ಲಿ ನೀರು ಸೋರುತ್ತಿದೆ ಹಾಗೂ ಪ್ರಾಂಗಣದಲ್ಲಿ ನೀರು ನಿಲ್ಲುವುದನ್ನು ತಡೆಗಟ್ಟುವುದು, ಶೌಚಾಲಯ ಮತ್ತು ಅದರ ಪಿಟ್ ನ್ನು ವಿಸ್ತಾರಗೊಳಿಸುವುದು, ಮೀನು […]