ರಾಜಕೀಯ ಶಿಷ್ಟಾಚಾರ ಮೀರುತ್ತಿರುವ ಕಾಂಗ್ರೆಸ್ ಹಿಂಬಾಲಕರು; ಬೇಕಾಬಿಟ್ಟಿ ಹೇಳಿಕೆ ನೀಡುತ್ತಿರುವ ಮಂತ್ರಿ ಮಾಗಧರು ಹದ್ದು ಮೀರಿ ವರ್ತಿಸುವುದು ತರವಲ್ಲ: ಕಾರ್ಕಳ ಬಿಜೆಪಿ

ಕಾರ್ಕಳ: ರಾಜ್ಯದಲ್ಲಿ ಕಾಂಗ್ರೆಸ್‌ ಸರಕಾರ ಬಹುಮತದಿಂದ ಅಧಿಕಾರಕ್ಕೆ ಬಂದ ಬಳಿಕ ಕೆಲವು ಸಚಿವರು, ನಾಯಕರು ಮತ್ತು ಆ ನಾಯಕರ ಚೇಲಾಗಳು ಶಿಷ್ಟಾಚಾರ ಮೀರಿ ವರ್ತಿಸುತ್ತಿರುವುದು ಕಂಡುಬರುತ್ತಿದೆ ಎಂದು ಭಾರತೀಯ ಜನತಾ ಪಾರ್ಟಿ ಕಾರ್ಕಳ ಇದರ ಅಧ್ಯಕ್ಷ ಮಹಾವೀರ್ ಹೆಗ್ಡೆ ಹೇಳಿದ್ದಾರೆ. ಸಚಿವರಾದ ಪ್ರಿಯಾಂಕ್‌ ಖರ್ಗೆ, ಎಂ.ಬಿ.ಪಾಟೀಲ್‌ ಸಹಿತ ಕೆಲವರು ತಮ್ಮ ಇಲಾಖೆಗಳಿಗೆ ಸಂಬಂಧಪಡದ, ಸಂಘರ್ಷಕ್ಕೆ ಕಾರಣವಾಗಬಹುದಾದಂಥ ಹೇಳಿಕೆಗಳನ್ನು ನೀಡಿ ಹಲವು ಸಲ ಸರಕಾರಕ್ಕೆ ಮುಜುಗರವುಂಟಾಗುವ ಪರಿಸ್ಥಿತಿ ಉಂಟು ಮಾಡಿದ್ದಾರೆ. ಸೋತ ಪಕ್ಷವನ್ನು ಟೀಕಿಸುವ ಭರದಲ್ಲಿ ಅವರು ನೀಡುತ್ತಿರುವ […]

ಅಧಿಕಾರಕ್ಕೆ ಬರುತ್ತಲೇ ಜನರಿಗೆ ಬೆಲೆಯೇರಿಕೆಯ ಬರೆ ಹಾಕಿದ ಕಾಂಗ್ರೆಸ್: ಸಿ.ಟಿ.ರವಿ

ಉಡುಪಿ: ಅಧಿಕಾರದಲ್ಲಿರುವ ಕಾಂಗ್ರೆಸ್ ಬೆಲೆ ಏರಿಕೆಯ ಮೂಲಕ ಜನತೆಗೆ ಮೋಸ ಮಾಡಿದೆ. ಸದ್ದಿಲ್ಲದೆ ಬೆಲೆ ಏರಿಕೆಗೆ ಮುಂದಾಗಿರುವ ಸರ್ಕಾರ ವಿದ್ಯುತ್ ಹಾಗೂ ಮದ್ಯದ ದರ ಹೆಚ್ಚಿಸಿದೆ. ಮುಂದೆ ನೋಂದಣಿ ಶುಲ್ಕ ಹೆಚ್ಚಿಸಲು ಸಿದ್ಧತೆ ಮಾಡಿಕೊಂಡಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದರು. ಗುರುವಾರ ಹೋಟೆಲ್ ಕಿದಿಯೂರು ಶೇಷಶಯನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದರು. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಅನ್ನಭಾಗ್ಯ ಯೋಜನೆ ಕೊಟ್ಟಿದ್ದು ನಾನೇ ಎಂದು ಹೇಳಿಕೊಳ್ಳುತ್ತಿದ್ದರು. ಈಗ ಕೇಂದ್ರ ಸರ್ಕಾರ […]

ಅನ್ನಭಾಗ್ಯ ಅಕ್ಕಿ ರಾಜಕೀಯ; ಕೇಂದ್ರವನ್ನು ಒತ್ತಾಯಿಸುತ್ತಿರುವ ರಾಜ್ಯ ಸರ್ಕಾರಕ್ಕೆ ಪ್ರಶ್ನೆಗಳ ಸುರಿಮಳೆಗೈದ ಮಹೇಶ್ ಠಾಕೂರ್

ಉಡುಪಿ: ವಿಧಾನಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ 10 ಕೆ.ಜಿ. ಅಕ್ಕಿಯನ್ನು ಉಚಿತವಾಗಿ ನೀಡುತ್ತೇವೆ ಎಂದು ಬೊಗಳೆ ಬಿಟ್ಟಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಕಾಂಗ್ರೆಸ್ ಮುಖಂಡರು ತಾವು ಘೋಷಿಸಿದ 5 ಗ್ಯಾರಂಟಿಗಳನ್ನು ಜಾರಿಗೊಳಿಸಲು ವಿಫಲಗೊಂಡು, ಇದೀಗ ಅಕ್ಕಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರವನ್ನು ಒತ್ತಾಯಿಸಲು ನಾಚಿಕೆಯಾಗುವುದಿಲ್ಲವೆ? ಎಂದು ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್ ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ಮುಖಂಡರು ಉಚಿತ 10 ಕೆ.ಜಿ. […]

ಕೇಂದ್ರ ಸರಕಾರದ 5 ಕೆ.ಜಿ ಜೊತೆಗೆ ಗ್ಯಾರಂಟಿಯ 10 ಕೆ.ಜಿ. ಅಕ್ಕಿ ವಿತರಿಸಿ ಕಾಂಗ್ರೆಸ್ ಪೌರುಷ ತೋರಿಸಲಿ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಚುನಾವಣೆಯ ಸಂದರ್ಭದಲ್ಲಿ ಪೂರ್ವಾಪರ ಆಲೋಚಿಸದೆ ಬೇಕಾಬಿಟ್ಟಿಯಾಗಿ 5 ಉಚಿತ ಗ್ಯಾರಂಟಿಗಳನ್ನು ಘೋಷಿಸಿ, ತಮ್ಮ ವಾಗ್ದಾನದಂತೆ 24 ಗಂಟೆಗಳಲ್ಲಿ ಜಾರಿಗೊಳಿಸದೆ ರಾಜ್ಯದ ಜನತೆಯನ್ನು ಯಾಮಾರಿಸಿರುವ ಕಾಂಗ್ರೆಸ್ ಇದೀಗ ಕೇಂದ್ರ ಸರಕಾರದ ಮೇಲೆ ಗೂಬೆ ಕೂರಿಸುವ ಪ್ರಯತ್ನದ ಬದಲು ಕೇಂದ್ರ ಸರಕಾರ ರಾಜ್ಯಕ್ಕೆ ನೀಡುತ್ತಿರುವ ಉಚಿತ 5 ಕೆ.ಜಿ. ಅಕ್ಕಿಯನ್ನು ಹೊರತುಪಡಿಸಿ, ತಮ್ಮ ಗ್ಯಾರಂಟಿಯ 10 ಕೆ.ಜಿ. ಅಕ್ಕಿಯನ್ನು ಖರೀದಿಸಿ ಪ್ರತ್ಯೇಕವಾಗಿ ವಿತರಿಸಿ ಪೌರುಷ ತೋರಿಸಲಿ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ರಾಷ್ಟ್ರೀಯ […]

ಕಾರ್ಯಕರ್ತರ ಆಶೋತ್ತರಗಳಿಗೆ ಸ್ಪಂದಿಸುವುದು ಪಕ್ಷ ಮುಖಂಡರ ಕರ್ತವ್ಯ: ಗುರ್ಮೆ ಸುರೇಶ್ ಶೆಟ್ಟಿ

ಕಾಪು: ಪಕ್ಷದ ಕಚೇರಿ ದೇವಸ್ಥಾನಕ್ಕೆ ಸಮಾನ, ಇಲ್ಲಿಗೆ ಬರುವ ಪ್ರತಿಯೊಬ್ಬ ಕಾರ್ಯಕರ್ತನ ಆಶೋತ್ತರಗಳಿಗೂ ಸ್ಪಂದಿಸುವುದು ಜನಪ್ರತಿನಿಧಿಗಳು, ಪಕ್ಷದ ಮುಖಂಡರ ಕರ್ತವ್ಯವಾಗಿದೆ ಎಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು. ಅವರು ಸೋಮವಾರ ಪಟ್ಟಣದ ಮಂಜುಶ್ರೀ ಎನ್‌ಕ್ಲೇವ್‌ಗೆ ಸ್ಥಳಾಂತರಗೊಂಡ ಬಿಜೆಪಿಯ ನೂತನ ಕಾರ್ಯಾಲಯದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಪಕ್ಷಕ್ಕೆ ಅದೃಷ್ಟ ತಂದುಕೊಟ್ಟಿರುವ ಚುನಾವಣಾ ಕಚೇರಿಯನ್ನೇ ಪಕ್ಷದ ಅಧಿಕೃತ ಕಚೇರಿಯನ್ನಾಗಿ ಪರಿವರ್ತಿಸಲಾಗಿದೆ. ವಾರಕ್ಕೊಮ್ಮೆ ಇಲ್ಲಿನ ಕಚೇರಿಯಲ್ಲಿದ್ದು ಕಾರ್ಯಕರ್ತರ ಅಹವಾಲು ಸ್ವೀಕಾರ ಮಾಡುವುದಾಗಿ ಭರವಸೆ ನೀಡಿದರು. ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ […]