ಒಬಿಸಿ ಮೋರ್ಚಾ ವತಿಯಿಂದ ಕುಯಿಲಾಡಿ ಸುರೇಶ್ ನಾಯಕ್ ಅವರಿಗೆ ಸನ್ಮಾನ

ಉಡುಪಿ: ಕಳೆದ ಮೂರು ವರ್ಷಗಳಿಂದ ಜಿಲ್ಲೆಯಾದ್ಯಂತ ಪಕ್ಷವನ್ನು ಬೂತ್ ಮಟ್ಟದಿಂದ ಸಂಘಟನಾತ್ಮಕವಾಗಿ ಸದೃಢಗೊಳಿಸುವ ಜೊತೆಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಂಘಟಿತ ಪ್ರಯತ್ನದ ಮೂಲಕ ಉಡುಪಿ ಜಿಲ್ಲೆಯ ಐದೂ ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಜಿಲ್ಲೆಯ ನೇತೃತ್ವ ವಹಿಸಿರುವ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರನ್ನು ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ಜಿಲ್ಲಾ ಕಛೇರಿಯಲ್ಲಿ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಉಡುಪಿ ಶಾಸಕ ಯಶ್ ಪಾಲ್ ಎ. ಸುವರ್ಣ, […]
ಬಿಜೆಪಿ ರಾಜ್ಯಾಧ್ಯಕ್ಷರ ರಾಜೀನಾಮೆ ಪ್ರಹಸನ: ರಾಜೀನಾಮೆ ಕೊಟ್ಟಿಲ್ಲ ಎಂದ ಕಟೀಲ್

ಬಳ್ಳಾರಿ: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಸೋಲಿಗೆ ನೈತಿಕ ಹೊಣೆ ಹೊತ್ತು ನಾನು ಈಗಾಗಲೇ ಪಕ್ಷದ ರಾಜ್ಯ ಘಟಕದ ಅಧ್ಯಕ್ಷನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದರು. ಬಳ್ಳಾರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಕಟೀಲ್, ನನ್ನ ಅವಧಿ ಮುಕ್ತಾಯವಾಗಿದೆ. ಹೊಸದಾಗಿ ಪಕ್ಷದ ರಾಜ್ಯಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ. ನೈತಿಕವಾಗಿ ನಾನು ವಿಧಾನಸಭಾ ಚುನಾವಣೆಯ ಸೋಲಿನ ಜವಾಬ್ದಾರಿ ಹೊತ್ತಿದ್ದೇನೆ. ಜವಾಬ್ದಾರಿ ಹೊತ್ತು […]
ಉಡುಪಿ ನಗರ ಮಹಿಳಾ ಹೈಟೆಕ್ ಮೀನು ಮಾರುಕಟ್ಟೆಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ; ಮೀನುಗಾರ ಮಹಿಳೆಯರ ಬೇಡಿಕೆ ಈಡೇರಿಕೆ ಭರವಸೆ

ಉಡುಪಿ: ಉಡುಪಿ ನಗರ ಮಹಿಳಾ ಹೈಟೆಕ್ ಮೀನು ಮಾರುಕಟ್ಟೆಗೆ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್ಪಾಲ್ ಸುವರ್ಣ ಅವರು ಉಡುಪಿ ನಗರಸಭೆಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಮೀನುಗಾರ ಮಹಿಳೆಯರಿಂದ ಮನವಿಯನ್ನು ಸ್ವೀಕರಿಸಿ ಮೀನುಗಾರ ಮಹಿಳೆಯರ ಅಗತ್ಯ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದರು. ಮೀನು ಮಾರುಕಟ್ಟೆಯಲ್ಲಿ ಹೋಲ್ಸೇಲ್ ಮೀನು ವ್ಯಾಪಾರ ಮಾಡುವ ಸ್ಥಳದಲ್ಲಿ ಗೋಡೆ ಬಿರುಕು ಬಿಟ್ಟಿದ್ದು, ಮಳೆಗಾಲದಲ್ಲಿ ನೀರು ಸೋರುತ್ತಿದೆ ಹಾಗೂ ಪ್ರಾಂಗಣದಲ್ಲಿ ನೀರು ನಿಲ್ಲುವುದನ್ನು ತಡೆಗಟ್ಟುವುದು, ಶೌಚಾಲಯ ಮತ್ತು ಅದರ ಪಿಟ್ ನ್ನು ವಿಸ್ತಾರಗೊಳಿಸುವುದು, ಮೀನು […]
ರಾಜಕೀಯ ಶಿಷ್ಟಾಚಾರ ಮೀರುತ್ತಿರುವ ಕಾಂಗ್ರೆಸ್ ಹಿಂಬಾಲಕರು; ಬೇಕಾಬಿಟ್ಟಿ ಹೇಳಿಕೆ ನೀಡುತ್ತಿರುವ ಮಂತ್ರಿ ಮಾಗಧರು ಹದ್ದು ಮೀರಿ ವರ್ತಿಸುವುದು ತರವಲ್ಲ: ಕಾರ್ಕಳ ಬಿಜೆಪಿ

ಕಾರ್ಕಳ: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಹುಮತದಿಂದ ಅಧಿಕಾರಕ್ಕೆ ಬಂದ ಬಳಿಕ ಕೆಲವು ಸಚಿವರು, ನಾಯಕರು ಮತ್ತು ಆ ನಾಯಕರ ಚೇಲಾಗಳು ಶಿಷ್ಟಾಚಾರ ಮೀರಿ ವರ್ತಿಸುತ್ತಿರುವುದು ಕಂಡುಬರುತ್ತಿದೆ ಎಂದು ಭಾರತೀಯ ಜನತಾ ಪಾರ್ಟಿ ಕಾರ್ಕಳ ಇದರ ಅಧ್ಯಕ್ಷ ಮಹಾವೀರ್ ಹೆಗ್ಡೆ ಹೇಳಿದ್ದಾರೆ. ಸಚಿವರಾದ ಪ್ರಿಯಾಂಕ್ ಖರ್ಗೆ, ಎಂ.ಬಿ.ಪಾಟೀಲ್ ಸಹಿತ ಕೆಲವರು ತಮ್ಮ ಇಲಾಖೆಗಳಿಗೆ ಸಂಬಂಧಪಡದ, ಸಂಘರ್ಷಕ್ಕೆ ಕಾರಣವಾಗಬಹುದಾದಂಥ ಹೇಳಿಕೆಗಳನ್ನು ನೀಡಿ ಹಲವು ಸಲ ಸರಕಾರಕ್ಕೆ ಮುಜುಗರವುಂಟಾಗುವ ಪರಿಸ್ಥಿತಿ ಉಂಟು ಮಾಡಿದ್ದಾರೆ. ಸೋತ ಪಕ್ಷವನ್ನು ಟೀಕಿಸುವ ಭರದಲ್ಲಿ ಅವರು ನೀಡುತ್ತಿರುವ […]
ಅಧಿಕಾರಕ್ಕೆ ಬರುತ್ತಲೇ ಜನರಿಗೆ ಬೆಲೆಯೇರಿಕೆಯ ಬರೆ ಹಾಕಿದ ಕಾಂಗ್ರೆಸ್: ಸಿ.ಟಿ.ರವಿ

ಉಡುಪಿ: ಅಧಿಕಾರದಲ್ಲಿರುವ ಕಾಂಗ್ರೆಸ್ ಬೆಲೆ ಏರಿಕೆಯ ಮೂಲಕ ಜನತೆಗೆ ಮೋಸ ಮಾಡಿದೆ. ಸದ್ದಿಲ್ಲದೆ ಬೆಲೆ ಏರಿಕೆಗೆ ಮುಂದಾಗಿರುವ ಸರ್ಕಾರ ವಿದ್ಯುತ್ ಹಾಗೂ ಮದ್ಯದ ದರ ಹೆಚ್ಚಿಸಿದೆ. ಮುಂದೆ ನೋಂದಣಿ ಶುಲ್ಕ ಹೆಚ್ಚಿಸಲು ಸಿದ್ಧತೆ ಮಾಡಿಕೊಂಡಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದರು. ಗುರುವಾರ ಹೋಟೆಲ್ ಕಿದಿಯೂರು ಶೇಷಶಯನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದರು. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಅನ್ನಭಾಗ್ಯ ಯೋಜನೆ ಕೊಟ್ಟಿದ್ದು ನಾನೇ ಎಂದು ಹೇಳಿಕೊಳ್ಳುತ್ತಿದ್ದರು. ಈಗ ಕೇಂದ್ರ ಸರ್ಕಾರ […]