ಅನ್ನಭಾಗ್ಯ ಅಕ್ಕಿ ರಾಜಕೀಯ; ಕೇಂದ್ರವನ್ನು ಒತ್ತಾಯಿಸುತ್ತಿರುವ ರಾಜ್ಯ ಸರ್ಕಾರಕ್ಕೆ ಪ್ರಶ್ನೆಗಳ ಸುರಿಮಳೆಗೈದ ಮಹೇಶ್ ಠಾಕೂರ್

ಉಡುಪಿ: ವಿಧಾನಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ 10 ಕೆ.ಜಿ. ಅಕ್ಕಿಯನ್ನು ಉಚಿತವಾಗಿ ನೀಡುತ್ತೇವೆ ಎಂದು ಬೊಗಳೆ ಬಿಟ್ಟಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಕಾಂಗ್ರೆಸ್ ಮುಖಂಡರು ತಾವು ಘೋಷಿಸಿದ 5 ಗ್ಯಾರಂಟಿಗಳನ್ನು ಜಾರಿಗೊಳಿಸಲು ವಿಫಲಗೊಂಡು, ಇದೀಗ ಅಕ್ಕಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರವನ್ನು ಒತ್ತಾಯಿಸಲು ನಾಚಿಕೆಯಾಗುವುದಿಲ್ಲವೆ? ಎಂದು ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್ ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ಮುಖಂಡರು ಉಚಿತ 10 ಕೆ.ಜಿ. […]
ಕೇಂದ್ರ ಸರಕಾರದ 5 ಕೆ.ಜಿ ಜೊತೆಗೆ ಗ್ಯಾರಂಟಿಯ 10 ಕೆ.ಜಿ. ಅಕ್ಕಿ ವಿತರಿಸಿ ಕಾಂಗ್ರೆಸ್ ಪೌರುಷ ತೋರಿಸಲಿ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಚುನಾವಣೆಯ ಸಂದರ್ಭದಲ್ಲಿ ಪೂರ್ವಾಪರ ಆಲೋಚಿಸದೆ ಬೇಕಾಬಿಟ್ಟಿಯಾಗಿ 5 ಉಚಿತ ಗ್ಯಾರಂಟಿಗಳನ್ನು ಘೋಷಿಸಿ, ತಮ್ಮ ವಾಗ್ದಾನದಂತೆ 24 ಗಂಟೆಗಳಲ್ಲಿ ಜಾರಿಗೊಳಿಸದೆ ರಾಜ್ಯದ ಜನತೆಯನ್ನು ಯಾಮಾರಿಸಿರುವ ಕಾಂಗ್ರೆಸ್ ಇದೀಗ ಕೇಂದ್ರ ಸರಕಾರದ ಮೇಲೆ ಗೂಬೆ ಕೂರಿಸುವ ಪ್ರಯತ್ನದ ಬದಲು ಕೇಂದ್ರ ಸರಕಾರ ರಾಜ್ಯಕ್ಕೆ ನೀಡುತ್ತಿರುವ ಉಚಿತ 5 ಕೆ.ಜಿ. ಅಕ್ಕಿಯನ್ನು ಹೊರತುಪಡಿಸಿ, ತಮ್ಮ ಗ್ಯಾರಂಟಿಯ 10 ಕೆ.ಜಿ. ಅಕ್ಕಿಯನ್ನು ಖರೀದಿಸಿ ಪ್ರತ್ಯೇಕವಾಗಿ ವಿತರಿಸಿ ಪೌರುಷ ತೋರಿಸಲಿ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ರಾಷ್ಟ್ರೀಯ […]
ಕಾರ್ಯಕರ್ತರ ಆಶೋತ್ತರಗಳಿಗೆ ಸ್ಪಂದಿಸುವುದು ಪಕ್ಷ ಮುಖಂಡರ ಕರ್ತವ್ಯ: ಗುರ್ಮೆ ಸುರೇಶ್ ಶೆಟ್ಟಿ

ಕಾಪು: ಪಕ್ಷದ ಕಚೇರಿ ದೇವಸ್ಥಾನಕ್ಕೆ ಸಮಾನ, ಇಲ್ಲಿಗೆ ಬರುವ ಪ್ರತಿಯೊಬ್ಬ ಕಾರ್ಯಕರ್ತನ ಆಶೋತ್ತರಗಳಿಗೂ ಸ್ಪಂದಿಸುವುದು ಜನಪ್ರತಿನಿಧಿಗಳು, ಪಕ್ಷದ ಮುಖಂಡರ ಕರ್ತವ್ಯವಾಗಿದೆ ಎಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು. ಅವರು ಸೋಮವಾರ ಪಟ್ಟಣದ ಮಂಜುಶ್ರೀ ಎನ್ಕ್ಲೇವ್ಗೆ ಸ್ಥಳಾಂತರಗೊಂಡ ಬಿಜೆಪಿಯ ನೂತನ ಕಾರ್ಯಾಲಯದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಪಕ್ಷಕ್ಕೆ ಅದೃಷ್ಟ ತಂದುಕೊಟ್ಟಿರುವ ಚುನಾವಣಾ ಕಚೇರಿಯನ್ನೇ ಪಕ್ಷದ ಅಧಿಕೃತ ಕಚೇರಿಯನ್ನಾಗಿ ಪರಿವರ್ತಿಸಲಾಗಿದೆ. ವಾರಕ್ಕೊಮ್ಮೆ ಇಲ್ಲಿನ ಕಚೇರಿಯಲ್ಲಿದ್ದು ಕಾರ್ಯಕರ್ತರ ಅಹವಾಲು ಸ್ವೀಕಾರ ಮಾಡುವುದಾಗಿ ಭರವಸೆ ನೀಡಿದರು. ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ […]
ಉಡುಪಿ ಜಿಲ್ಲಾ ಬಿಜೆಪಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಉಡುಪಿ: ಜಿಲ್ಲಾ ಬಿಜೆಪಿ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂ.21ರಂದು ಉಡುಪಿಯ ಶೇಷಶಯನ ಸಭಾಂಗಣದಲ್ಲಿ ಆಚರಿಸಲಾಯಿತು. ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಜ್ಯೋತಿ ಬೆಳಗಿಸಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಉಡುಪಿ ಶಾಸಕ ಯಶ್ ಪಾಲ್ ಎ. ಸುವರ್ಣ, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ನಿಕಟಪೂರ್ವ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, […]
ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ನೀಡಲು ಒಪ್ಪದ ಕೇಂದ್ರ ಸರಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಉಡುಪಿ: ಕಾಂಗ್ರೆಸ್ ಪಕ್ಷದ ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ನೀಡುವ ನಿರ್ಧಾರದಿಂದ ಹಿಂದೆ ಸರಿದು ಬಡವರ ಅನ್ನ ಕಿತ್ತುಕೊಳ್ಳಲು ಹೊರಟಿರುವ ಕೇಂದ್ರ ಬಿಜೆಪಿ ಸರಕಾರದ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಉಡುಪಿ ಬ್ರಹ್ಮಗಿರಿ ಸರ್ಕಲ್ ನಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು. ನೂರಾರು ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ಭವನದಿಂದ ಮೆರವಣಿಗೆಯಲ್ಲಿ ಹೊರಟು ಬ್ರಹ್ಮಗಿರಿ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಿದರು. ಕೇಂದ್ರ ಸರಕಾರದ ವಿರುದ್ಧ ಧಿಕ್ಕಾರ ಕೂಗಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ವಿನಯಕುಮಾರ್ ಸೊರಕೆ, ಕೇಂದ್ರ […]