ಕುಂದಾಪುರ: ಅ.17 ರಂದು ಪ್ರಮೋದ್ ಮಧ್ವರಾಜ್ ಹುಟ್ಟುಹಬ್ಬದ ಪ್ರಯುಕ್ತ ಸ್ವಯಂಪ್ರೇರಿತ ರಕ್ತದಾನ ಶಿಬಿರ

ಕುಂದಾಪುರ: ಪ್ರಮೋದ್ ಮಧ್ವರಾಜ್ ಅಭಿಮಾನಿ ಬಳಗ, ಕುಂದಾಪುರ ಉಡುಪಿ ಜಿಲ್ಲೆ, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್(ರಿ) ಉಡುಪಿ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ(ರಿ) ಕುಂದಾಪುರ ಇವರ ಸಹಕಾರದಲ್ಲಿ ಅ.17 ರಂದು ಕುಂದಾಪುರದ ಕಲಾಮಂದಿರ ಸರಕಾರಿ ಜೂನಿಯರ್ ಕಾಲೇಜಿನಲ್ಲಿ ಬೆಳಿಗ್ಗೆ 8.30 ರಿಂದ ಮಧ್ಯಾಹ್ನ 1.00 ಗಂಟೆವರೆಗೆ ನಡೆಯಲಿರುವುದು ಎಂದು ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ: 8861442007/ 9900230758/9535321649

ಮೇ 5 ರಂದು ಗಾಂಧಿ ಆಸ್ಪತ್ರೆಯಲ್ಲಿ ಬೃಹತ್ ರಕ್ತದಾನ ಶಿಬಿರ

ಉಡುಪಿ: ನಗರದ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಒಂದಾದ ಗಾಂಧಿ ಆಸ್ಪತ್ರೆಯು 29ನೇ ವರ್ಷಕ್ಕೆ ಪಾದಾ‌ಪ೯ಣೆ ಮಾಡುತ್ತಿರುವ ಸಂದರ್ಭದಲ್ಲಿ ಮೇ 5 ರಂದು ಬೆಳಿಗ್ಗೆ 8.30 ರಿಂದ ಮಧ್ಯಾಹ್ನ12.30 ರವರೆಗೆ ಬೃಹತ್ ರಕ್ತದಾನ‌‌ ಶಿಬಿರವನ್ನು ಆಯೋಜಿಸಿದ್ದು, ದಾನಿಗಳು ಸ್ವಯಂಪ್ರೇರಿತರಾಗಿ ಬಂದು ರಕ್ತದಾನ ಮಾಡುವ ಮೂಲಕ ಶಿಬಿರವನ್ನು ಯಶಸ್ವಿಗೊಳಿಸಬೇಕಾಗಿ ಗಾಂಧಿ ಆಸ್ಪತ್ರೆಯ ಆಡಳಿತ ಮಂಡಳಿಯು ತಿಳಿಸಿದೆ.

ಮಾಹೆ: ನರ್ಸಿಂಗ್ ವಿದ್ಯಾರ್ಥಿಗಳಿಂದ ರಕ್ತದಾನ ಶಿಬಿರ

ಮಣಿಪಾಲ: ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನ ದಿನಾಚರಣೆ ಅಂಗವಾಗಿ ಮಾಹೆಯ ಕಾಲೇಜ್ ಆಫ್ ನರ್ಸಿಂಗ್ ನ ಆರೋಗ್ಯ ಮತ್ತು ಸಮಾಜ ಕಲ್ಯಾಣ ಸಮಿತಿ ವತಿಯಿಂದ ರಕ್ತದಾನ ಶಿಬಿರವನ್ನು ಅ. 01 ರಂದು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಬ್ಲಡ್ ಬ್ಯಾಂಕ್‌ನಲ್ಲಿ ಆಯೋಜಿಸಲಾಗಿತ್ತು. ನರ್ಸಿಂಗ ವಿಭಾಗದ ಒಟ್ಟು 72 ವಿದ್ಯಾರ್ಥಿಗಳು, 8 ಶಿಕ್ಷಕರು ಮತ್ತು ಮಣಿಪಾಲ ಸಮೂಹ ಸಂಸ್ಥೆಯ ೧೦ ಸಿಬ್ಬಂದಿಗಳು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿದರು. ಆರೋಗ್ಯ ಮತ್ತು ಸಮಾಜ ಕಲ್ಯಾಣ ಸಮಿತಿ ವಿಭಾಗದ ಅಧ್ಯಕ್ಷೆ ನರ್ಸಿಂಗ್ ವಿದ್ಯಾರ್ಥಿನಿ ಅನುಷಾ ವರ್ಗೀಸ್ […]

ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ವತಿಯಿಂದ ರಕ್ತದಾನ ಶಿಬಿರ

ಕುಂದಾಪುರ: ಭಾರತದ‌ ಪ್ರಧಾನಿ‌ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಸೇವಾ ಪಾಕ್ಷಿಕದ ಅಂಗವಾಗಿ ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಉಡುಪಿ, ಮತ್ತು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ಇವರ ಸಹಯೋಗದಲ್ಲಿ ಸೆ.27 ‌ಮಂಗಳವಾರದಂದು ಇಂಡಿಯನ್ ರೆಡ್‌‌ ಕ್ರಾಸ್ ಸೊಸೈಟಿ ಕುಂದಾಪುರ ಇಲ್ಲಿ ನಡೆದ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ಶ್ರೀಮತಿ ವೀಣಾ ಎಸ್ ಶೆಟ್ಟಿ ಉದ್ಘಾಟಿಸಿ ಮಾತನಾಡಿ, ಭಾರತದ‌ ಪ್ರಧಾನಿ‌ ನರೇಂದ್ರ ಮೋದಿಯವರ ಆಶಯದಂತೆ‌ ಸೇವಾ ಪಾಕ್ಷಿಕದ ಅಂಗವಾಗಿ ಅಭಯಹಸ್ತ ಟ್ರಸ್ಟ್‌ […]

ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಉಡುಪಿ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ಉಡುಪಿ ಜಿಲ್ಲೆ, ಅಭಯ ಹಸ್ತ ಚಾರಿಟೇಬಲ್ ಟ್ರಸ್ಟ್ ಉಡುಪಿ, ರಕ್ತ ನಿಧಿ ವಿಭಾಗ ಕೆಎಂಸಿ ಮಣಿಪಾಲ ಇವರ ಸಹಯೋಗದೊಂದಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಸೇವಾ ಪಾಕ್ಷಿಕದ ಅಂಗವಾಗಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಭಾನುವಾರದಂದು ರಕ್ತ ನಿಧಿ ವಿಭಾಗ ಕೆಎಂಸಿ ಮಣಿಪಾಲ ಇಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್ ಶೆಟ್ಟಿ ವಹಿಸಿದ್ದರು. ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ […]