ಕುಮಾರಸ್ವಾಮಿ ಮೊಸರಲ್ಲಿ‌ ಕಲ್ಲು ಹುಡುಕುವ ಕೆಲಸ‌ ಮಾಡುತ್ತಿದ್ದಾರೆ: ಬಸವರಾಜ ಬೊಮ್ಮಯಿ

ಉಡುಪಿ: ಮಾಜಿ ಸಿಎಂ ಕುಮಾರಸ್ವಾಮಿ ಮೊಸರಲ್ಲಿಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಉಡುಪಿಗೆ ಭೇಟಿ ನೀಡಿದ ಅವರು ಕುಮಾರ ಸ್ವಾಮಿ ಅವರ ‘ಪ್ರಭಾವ ಬಳಸಿ ಉಪ ಚುನಾವಣೆ ಮುಂದೂಡಲಾಗಿದೆ’ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು. ಫೋನ್ ಕದ್ದಾಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಅನುಮತಿ ಇಲ್ಲದೆ ಯಾವುದೇ ವ್ಯಕ್ತಿಯ ಖಾಸಗಿ ಮಾತುಕತೆಯ ಕದ್ದಾಲಿಕೆ ತಪ್ಪು ಎಂದು ಅವರು ಹೇಳಿದರು. ಪೊಲೀಸರ ವೇತನ ಪರಿಷ್ಕರಣೆ ವಿಚಾರ ಖಂಡಿತವಾಗಿಯೂ ಔರಾದ್ಕರ್ ವರದಿ ಜಾರಿಯಾಗುತ್ತದೆ. […]