ಬ್ರಹ್ಮಾವರ:ಅರಣ್ಯ ಕೃಷಿ ತರಬೇತಿ ಕಾರ್ಯಕ್ರಮ

ಉಡುಪಿ: ಕೃಷಿ ವಿಜ್ಞಾನ ಕೇಂದ್ರ, ಬ್ರಹ್ಮಾವರದಲ್ಲಿ ಶುಕ್ರವಾರ ದಿ.ಕೆ.ಎಂ. ಉಡುಪ ಸ್ಮರಣಾರ್ಥವಾಗಿ ಅರಣ್ಯ ಕೃಷಿ ಬಗ್ಗೆ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕೊಡಗು ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ. ರಾಮಕೃಷ್ಣ ಹೆಗಡೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿ, ಈಗಿನ ಯುವಕರು ಕೃಷಿ ಬಗ್ಗೆ ಆಸಕ್ತಿ ಕಳೆದುಕೊಳ್ಳುತ್ತಿದ್ದಾರೆ, ಅರಣ್ಯದಲ್ಲಿ ಕೃಷಿ ಮಾಡಬಹುದಾ ಅಥವಾ ಕೃಷಿ ಭೂಮಿಯಲ್ಲಿ ಅರಣ್ಯ ವೃಕ್ಷಗಳನ್ನು ಬೆಳೆಸಬಹುದಾ ಎನ್ನುವುದರ ಕುರಿತು ಚರ್ಚಿಸಿದರು ಮತ್ತು ಮನುಷ್ಯನ ಬೇಡಿಕೆಗಳು ದಿನೇ ದಿನೇ ಹೆಚ್ಚುತ್ತಿರುವುದರಿಂದ ಪರಿಸರ ಹಾಳಾಗುತ್ತಿದೆ ಎನ್ನುವುದರ ಕುರಿತು ಮನವಿ […]