ಪತ್ರಕರ್ತೆ ಹರ್ಷಿಣಿ ಬ್ರಹ್ಮಾವರ ಇವರಿಗೆ ಬೀಳ್ಕೊಡುಗೆ

ಉಡುಪಿ: ಕಳೆದ ಎಂಟು ವರ್ಷಗಳ ಕಾಲ ಉಡುಪಿಯಲ್ಲಿ ಡೈಜಿ ವರ್ಲ್ಡ್ ಸಂಸ್ಥೆಯ ವರದಿಗಾರ್ತಿಯಾಗಿ ಕೆಲಸ ಮಾಡಿಕೊಂಡಿದ್ದ ಹರ್ಷಿಣಿ ಬ್ರಹ್ಮಾವರ ಅವರ ಬೀಳ್ಕೊಡುಗೆ ಸಮಾರಂಭವನ್ನು ಉಡುಪಿಯ ಬ್ರಹ್ಮಗಿರಿಯ ಪತ್ರಿಕಾ ಭವನದಲ್ಲಿ ಶನಿವಾರ ಆಯೋಜಿಸಲಾಗಿತ್ತು. ಉಡುಪಿ ಜಿಲ್ಲಾ ಕಾರ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ಅಧ್ಯಕ್ಷತೆಯಲ್ಲಿ ಹಿರಿಯ ಪತ್ರಕರ್ತ ಬಿ.ಬಿ. ಶೆಟ್ಟಿಗಾರ್ ಹರ್ಷಿಣಿ ಅವರನ್ನು ಸನ್ಮಾನಿಸಿ, ಶುಭ ಹಾರೈಸಿದರು. ಪದವಿಯ ನಂತರ ಉಡುಪಿಯ ಜಿ.ಶಂಕರ್ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿದ್ದ ಹರ್ಷಿಣಿ ಬ್ರಹ್ಮಾವರ, ಮಾಧ್ಯಮ ಕ್ಷೇತ್ರದ ಮೇಲಿನ ಅತೀವ […]

ಪೂರ್ವ ಸ್ವಾಮ್ಯದ ವಾಹನ ವಿತರಕರ ಸಂಘದ ಉದ್ಘಾಟನಾ ಕಾರ್ಯಕ್ರಮ

ಉಡುಪಿ: ಪೂರ್ವ ಸ್ವಾಮ್ಯದ ವಾಹನ ವಿತರಕರ ಸಂಘದ ಉದ್ಘಾಟನಾ ಕಾರ್ಯಕ್ರಮವು ಸೆ.18 ಭಾನುವಾರದಂದು ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ  ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶಂಕರಪುರ ಸಂತ ಜಾನ್ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಮೋಹನ್ ದಾಸ್ ಆರ್ ಶೆಟ್ಟಿ ಭಾಗವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪೂರ್ವ ಸ್ವಾಮ್ಯದ ವಾಹನ ವಿತರಕ ಸಂಘದ ಸಂಸ್ಥಾಪಕ ಉದಯ್ ಕಿರಣ್ ವಹಿಸಿದ್ದರು. ಉಡುಪಿ ಆರಕ್ಷಕ ಠಾಣೆಯ ಉಪಅಧೀಕ್ಷಕ ವಾಸಪ್ಪ ನಾಯಕ್, ಉಡುಪಿ ಟ್ರಾಫಿಕ್ ಪೊಲೀಸ್ ಎಸ್ ಐ ಅಬ್ದುಲ್ ಖಾದರ್ , ದಕ್ಷಿಣ ಕನ್ನಡ […]

ಕಾಂಗ್ರೆಸ್ ನಾಯಕ ಆಸ್ಕರ್ ಫೆರ್ನಾಂಡೀಸ್ ಪ್ರಥಮ  ಪುಣ್ಯತಿಥಿ : ಕಾಂಗ್ರೆಸ್ ಭವನದಲ್ಲಿ  ಪ್ರತಿಮೆ ಅನಾವರಣ

ಉಡುಪಿ: ಜಿಲ್ಲಾ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಕಾಂಗ್ರೆಸ್ ನಾಯಕ ಆಸ್ಕರ್ ಫೆರ್ನಾಂಡಿಸ್ ರವರ ಪ್ರಥಮ ವರ್ಷದ ಪುಣ್ಯ ತಿಥಿ ಮಂಗಳವಾರ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆಯಿತು. ಮಾಜಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಚಂದ್ರ ಶೆಟ್ಟಿ ಆಸ್ಕರ್ ಫರ್ನಾಂಡಿಸ್ ರವರ ಪ್ರತಿಮೆ ಅನಾವರಣ  ಗೊಳಿಸಿದರು. ಕಾರ್ಯಕ್ರಮದ ಅಂಗವಾಗಿ  ಸಾರ್ವಜನಿಕರಿಗೆ ಹಾಗೂ ಪಕ್ಷದ ಕಾರ್ಯಕರ್ತರಿಗೆ ಭಾಷಣ – ರಸ ಪ್ರಶ್ನೆ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು. ಮಾಜಿ ಸಚಿವ  ವಿನಯ್ ಕುಮಾರ್ ಸೊರಕೆ,   ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, […]

ಅಮೃತ್ ಗಾರ್ಡನ್ ನಲ್ಲಿ ಲಯನ್ಸ್ ಕ್ಲಬ್ ಪ್ರಾಂತ್ಯ ಆರರ ಪ್ರಾಂತೀಯ ಸಾಂಸ್ಕೃತಿಕ ಕಾರ್ಯಕ್ರಮ

ಉಡುಪಿ: ಪ್ರಪ್ರಥಮ ಬಾರಿಗೆ ಜಿಲ್ಲೆ 317 ಸಿ ಯಲ್ಲಿ ಪ್ರಾಂತ್ಯ ಆರರ ಪ್ರಾಂತೀಯ ಸಾಂಸ್ಕೃತಿಕ ಕಾರ್ಯಕ್ರಮ ಪ್ರಾಂತ್ಯ ಅಧ್ಯಕ್ಷ ಲಯನ್ ಹರಿಪ್ರಸಾದ್ ರೈ ಅವರ ಮುಂದಾಳತ್ವದಲ್ಲಿ ನೆರವೇರಿತು. ಪ್ರಾಂತ್ಯದ ಎಲ್ಲಾ ಕ್ಲಬ್ಬುಗಳಿಗೆ ತಮ್ಮ ಪ್ರತಿಭೆಗಳನ್ನು ಪ್ರಸ್ತುತಪಡಿಸಲು ಇದೊಂದು ಒಳ್ಳೆಯ ಅವಕಾಶ, ಇದನ್ನು ಎಲ್ಲರೂ ಸದುಪಯೋಗ ಪಡಿಸಿಕೊಳ್ಳಿ ಎಂದು ಜಿಲ್ಲಾ ಪ್ರಥಮ ಉಪಜಿಲ್ಲಾ ಗವರ್ನರ್ ಲಯನ್ ನೇರಿ ಕರ್ನೆಲಿಯೋ ಹೇಳಿದರು. ಅವರು ಅಮೃತ್ ಗಾರ್ಡನ್ ನಲ್ಲಿ ಸೆ.10 ರಂದು ನಡೆದ ಪ್ರಾಂತ್ಯ ಆರರ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. […]

ಸ್ಕೂಟರ್ ಅಪಘಾತ: ಹಿರಿಯ ನಾಗರಿಕರಿಗೆ ಮೂಳೆ ಮುರಿತ

ಉಡುಪಿ: ತೆಂಕಪೇಟೆ ನಿವಾಸಿ ರವೀಂದ್ರ ಭಟ್ (63) ಎನ್ನುವವರು ಸೆಪ್ಟೆಂಬರ್ 08 ರಂದು ತನ್ನ ಸ್ಕೂಟರ್ ನಲ್ಲಿ ಉಡುಪಿ ಅಜ್ಜರಕಾಡು ಆಸ್ಪತ್ರೆಗೆ ತೆರಳಿದ್ದು, ಮರಳಿ ತನ್ನ ಮನೆಗೆ ಹೋಗುವಾಗ ಮಧ್ಯಾಹ್ನ 12:30 ಗಂಟೆ ಸುಮಾರಿಗೆ ಅಜ್ಜರಕಾಡು ಆಸ್ಪತ್ರೆಯ ಮುಂಭಾಗದ ಸಾರ್ವಜನಿಕ ಡಾಮಾರು ರಸ್ತೆಯಲ್ಲಿ ಜೋಡುಕಟ್ಟೆ ಕಡೆಯಿಂದ ಬ್ರಹ್ಮಗಿರಿ ಕಡೆಗೆ ಬರುತ್ತಿದ್ದ ಮೋಟಾರ್ ಸೈಕಲ್ ಸವಾರರೊಬ್ಬರು ದುಡುಕುತನ ಮತ್ತು ನಿರ್ಲಕ್ಷ್ಯತನದಿಂದ ವಾಹನ ಚಲಾಯಿಸಿ ರವೀಂದ್ರ ಭಟ್ ಸವಾರಿ ಮಾಡುತ್ತಿದ್ದ ಸ್ಕೂಟರಿಗೆ ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ, ರವೀಂದ್ರ ಭಟ್ […]