ಕುಡಿಯುವ ನೀರಿನ ಬೇಡಿಕೆ ಈಡೇರಿಸದ ಜಿಲ್ಲಾಡಳಿತ:ಸ್ಥಳೀಯರಿಂದ ಮತದಾನ ಬಹಿಷ್ಕಾರ

ಕುಂದಾಪುರ: ಬಿಜೂರು ಗರಡಿ, ಕಳಿಹಿತ್ಲು, ನಿಸರ್ಗಕೇರಿ ಗ್ರಾಮಸ್ಥರು ಜಿಲ್ಲಾಡಳಿತ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಿಲ್ಲ ಎಂದು ಆರೋಪಿಸಿ ಮತದಾನ ಬಹಿಷ್ಕಾರ ಹಾಕಿದರು. ಕಳೆದ ಕೆಲ ವರ್ಷಗಳಿಂದ ಕುಡಿಯುವ ನೀರಿನ ಬೇಡಿಕೆ ಇಡುತ್ತಲೇ ಬಂದಿದ್ದೇವೆ. ಆದರೆ ಜಿಲ್ಲಾಡಳಿತ ನಮ್ಮ ಬೇಡಿಕೆ ಈಡೇರಿಸಿಲ್ಲ ಹೀಗಾಗಿ ಚುನಾವಣೆ ಬಹಿಷ್ಕರಿಸುತ್ತೇವೆ ಎಂದು ಇಲ್ಲಿನ ನಿವಾಸಿಗಳು ಒಂದು ತಿಂಗಳ ಹಿಂದೆಯೇ ಬ್ಯಾನರ್ ಅಳವಡಿಸಿ ಚುನಾವಣಾ ಬಹಿಷ್ಕಾರದ ಎಚ್ಚರಿಕೆ ನೀಡಿದ್ದರು. ಅಧಿಕಾರಿಗಳು ಮಧ್ಯಪ್ರವೇಶಿಸಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುತ್ತೇವೆಂದು ಗ್ರಾಮಸ್ಥರ ಮನವೊಲಿಸಿದ ಬಳಿಕ ಬ್ಯಾನರ್ ತೆರವುಗೊಳಿಸಲಾಗಿತ್ತು. […]