ಕಾಂತಾರದಿಂದ ರಾಜ್ಯದ ಶ್ರೀಮಂತ ಸಂಪ್ರದಾಯಗಳ ಪರಿಚಯ: ಅಮಿತ್ ಶಾ

ಪುತ್ತೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ತುಳುನಾಡಿನ ಪುತ್ತೂರಿನಲ್ಲಿ ಕ್ಯಾಂಪ್ಕೋ ಸುವರ್ಣ ಮಹೋತ್ಸವ ಸಂದರ್ಭದಲ್ಲಿ ಭಾಗವಹಿಸಿದ್ದು, ತುಳುನಾಡಿನ ಸಂಸ್ಕೃತಿಯ ಬಗ್ಗೆ ಹೊಗಳಿಕೆಯ ಮಾತುಗಳನ್ನಾಡಿದ್ದಾರೆ. ವಿಶ್ವದಾದ್ಯಂತ ಜನಮನ್ನಣೆ ಪಡೆದ ಕಾಂತಾರ ಚಲನಚಿತ್ರವನ್ನು ಹೊಗಳಿದ್ದಾರೆ. ಕಾಂತಾರನನ್ನು ಈಗಷ್ಟೇ ನೋಡಿದ್ದೇನೆ. ಕಾಂತಾರರನ್ನು ನೋಡಿದ ನಂತರ ಈ ರಾಜ್ಯವು ಅಂತಹ ಶ್ರೀಮಂತ ಸಂಪ್ರದಾಯಗಳಿಂದ ಕೂಡಿದೆ ಎಂದು ನನಗೆ ತಿಳಿಯಿತು. ಪ್ರತಿಕೂಲ ಪರಿಸ್ಥಿತಿಯ ನಡುವೆಯೂ ಬೇಸಾಯ ಮಾಡುವ ಮೂಲಕ ದೇಶವನ್ನು ಸುಭಿಕ್ಷ ಮಾಡುವ ಪ್ರದೇಶಗಳು ದೇಶದಲ್ಲಿ ವಿರಳ ಎಂದು ಅವರು ಹೇಳಿದ್ದಾರೆ. ಈ […]

ಪುತ್ತೂರು: ಭಾರತ ಮಾತಾ ಮಂದಿರವನ್ನು ಉದ್ಘಾಟಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ

ಪುತ್ತೂರು: ಇಲ್ಲಿನ ಈಶ್ವರಮಂಗಲದ ಅಮರಗಿರಿಯಲ್ಲಿ ಭಾರತ ಮಾತಾ ಮಂದಿರವನ್ನು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಶನಿವಾರ ಉದ್ಘಾಟಿಸಿದರು. ಇದನ್ನು ಧರ್ಮಶ್ರೀ ಪ್ರತಿಷ್ಠಾನದ ಮೂಲಕ ಅಭಿವೃದ್ಧಿಪಡಿಸಲಾಗಿದೆ. ಇದು ಭಾರತ ಮಾತಾ ಮತ್ತು ಅವರ ವೀರ ಯೋಧರನ್ನು ಸ್ಮರಿಸುವುದು, ಜನರಲ್ಲಿ ದೇಶಭಕ್ತಿಯ ಉತ್ಸಾಹವನ್ನು ತುಂಬುವ ಗುರಿಯನ್ನು ಹೊಂದಿದೆ. ಧರ್ಮಶ್ರೀ ಪ್ರತಿಷ್ಠಾನದ ಆಡಳಿತಾಧಿಕಾರಿ ಧರ್ಮದರ್ಶಿ ಅಚ್ಯುತ ಮೂಡೆತ್ತಾಯ ಮಾತನಾಡಿ, ಟ್ರಸ್ಟ್‌ಗೆ ಸೇರಿದ ಎರಡೂವರೆ ಎಕರೆ ಜಾಗದಲ್ಲಿ 3 ಕೋಟಿ ರೂ.ವೆಚ್ಚದಲ್ಲಿ ಅಮರಗಿರಿ ಅನ್ನು ನಿರ್ಮಿಸಲಾಗಿದೆ ಎಂದರು. ತಮಿಳುನಾಡಿನ […]

ಗೃಹ ಸಚಿವ ಅಮಿತ್ ಶಾ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವದಲ್ಲಿ ಭಾಗಿ: ಸಂಚಾರ ಮಾರ್ಗದಲ್ಲಿ ಬದಲಾವಣೆ

ಪುತ್ತೂರು: ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವ ಸಮಾರಂಭಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಫೆ.11ರಂದು ಪುತ್ತೂರಿಗೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಕಾರ್ಯಕ್ರಮಗಳ ವಿವರಗಳನ್ನು ನೀಡಲಾಗಿದ್ದು, ಮೊದಲು ಮುಖ್ಯಮಂತ್ರಿ ಬೊಮ್ಮಾಯಿ ವಿವೇಕಾನಂದ ಇಂಜಿನಿಯರ್‌ ಕಾಲೇಜಿಗೆ ಆಗಮಿಸಿ ಕೃಷಿ ಮೇಳದಲ್ಲಿ ಪಾಲ್ಗೊಂಡು ನಂತರ 3.25 ಗಂಟೆಗೆ ತೆಂಕಿಲ ಸಮಾವೇಶಕ್ಕೆ ತೆರಳಿದ್ದಾರೆ. ಕಣ್ಣೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಗೃಹ ಸಚಿವ ಅಮಿತ್ ಷಾ 2.20 ಕ್ಕೆ ಬಿಎಸ್ಎಫ್ ಹೆಲಿಕಾಪ್ಟರ್ ಮೂಲಕ ಈಶ್ವರಮಂಗಲ ಗಜಾನನ ಶಾಲೆ ಹೆಲಿಪ್ಯಾಡ್ ಗೆ 2.45 ತಲುಪಿ, ಹನುಮಗಿರಿ […]

ಫೆ. 10 ರಂದು ಪುತ್ತೂರು ತೆಂಕಿಲ ಮೈದಾನದಲ್ಲಿ ಅದ್ದೂರಿ ಯಂತ್ರಮೇಳ ಹಾಗೂ ಕನಸಿನ ಮನೆ ಉದ್ಘಾಟನೆ

ಪುತ್ತೂರು: ಫೆ. 11 ರಂದು ಕ್ಯಾಂಪ್ಕೋದ ಸುವರ್ಣ ಮಹೋತ್ಸವ ಕಾರ್ಯಕ್ರಮ ತೆಂಕಿಲ ಮೈದಾನದಲ್ಲಿ ನಡೆಯಲಿದೆ. ಇದರಲ್ಲಿ ಕೇಂದ್ರ ಸಹಕಾರಿ ಸಚಿವ ಅಮಿತ್ ಷಾ, ರಾಜ್ಯ ಮುಖ್ಯ ಮಂತ್ರಿ ಬಸವ ರಾಜ್ ಬೊಮ್ಮಾಯಿ, ಮುಖಂಡರಾದ ಪ್ರಹ್ಲಾದ ಜೋಷಿ, ಕಲ್ಲಡ್ಕ ಪ್ರಭಾಕರ ಭಟ್, ಗೃಹ ಸಚಿವ ಅರಗ ಜ್ಞಾನೇಂದ್ರ, ಸಹಕಾರಿ ಸಚಿವ ಸೋಮಶೇಖರ್, ಉಸ್ತುವಾರಿ ಸಚಿವ ಸುನಿಲ್ ಕುಮಾರ್, ಮೀನುಗಾರಿಕಾ ಸಚಿವ ಅಂಗಾರ, ಕೋಟ ಶ್ರೀನಿವಾಸ ಪೂಜಾರಿ, ಸ್ಥಳೀಯ ಸಂಸದರು ಹಾಗೂ ಶಾಸಕರು ಭಾಗವಹಿಸಲಿದ್ದಾರೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ […]

ಪುತ್ತೂರು: ಫೆ.10-12 ರವರೆಗೆ ಕ್ಯಾಂಪ್ಕೋ ವತಿಯಿಂದ ಬೃಹತ್ ಕೃಷಿಯಂತ್ರ ಮೇಳ

ಪುತ್ತೂರು: ಕ್ಯಾಂಪ್ಕೋ ನಿಯಮಿತ ಮಂಗಳೂರು, ಅಡಿಕೆ ಸಂಶೋಧನೆ ಮತ್ತು ಅಭಿವೃದ್ದಿ ಪ್ರತಿಷ್ಠಾನ, ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂದ ಎಂಡ್ ಟೆಕ್ನಾಲಜಿ ಪುತ್ತೂರು ಇದರ ಸಂಯುಕ್ತಾಶ್ರಯದಲ್ಲಿ 5 ನೇ ಬೃಹತ್ ಕೃಷಿಯಂತ್ರ ಮೇಳ ಮತ್ತು ಕನಸಿನ ಮನೆ ಕಾರ್ಯಕ್ರಮವು ಫೆ.10 ರಿಂದ 12 ರವರೆಗೆ ಬೆಳಿಗ್ಗೆ 9 ರಿಂದ ಸಂಜೆ 8 ರ ತನಕ ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ನಡೆಯಲಿದ್ದು ಎಲ್ಲರಿಗೂ ಉಚಿತ ಪ್ರವೇಶಾತಿ ಇದೆ ಎಂದು ಪ್ರಕಟಣೆ ತಿಳಿಸಿದೆ.