ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ರದ್ದು: ನೈಟ್ ಕರ್ಫ್ಯೂ, ಕಠಿಣ ನಿಯಮಗಳು ಮುಂದುವರಿಕೆ.. ಮದುವೆ, ಸಭೆ, ಸಮಾರಂಭಗಳಿಗೆ ಹಳೆ ರೂಲ್ಸ್ ಮುಂದುವರಿಕೆ..!!

ಬೆಂಗಳೂರು: ರಾಜ್ಯದಲ್ಲಿ ವಿಕೇಂಡ್ ಕರ್ಫ್ಯೂ ರದ್ದುಗೊಳಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ‌. ಅಧಿಕೃತ ಆದೇಶ ಕೆಲವೇ ಕ್ಷಣಗಳಲ್ಲಿ ಹೊರಬೀಳಲಿದೆ. ಇಂದು ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ‌. ವೀಕೆಂಡ್ ಕರ್ಫ್ಯೂಗೆ ವ್ಯಾಪಾರಿಗಳು, ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಲು ನಿರ್ಧಾರಿಸಲಾಗಿದೆ. ನೈಟ್ ಕರ್ಫೂ ಅವಧಿಯಲ್ಲೂ ಬದಲಾವಣೆ ಮಾಡುವ ಸಾಧ್ಯತೆ ಇದ್ದು, ರಾತ್ರಿ 10 ಗಂಟೆಯ ಬದಲಾಗಿ 11 ಗಂಟೆಯಿಂದ ಕರ್ಫ್ಯೂ […]