ರಾಜ್ಯಗಳಿಗೆ ತೆರಿಗೆ ಹಂಚಿಕೆಯ 3ನೇ ಕಂತು 1,18,280 ಕೋಟಿ ರೂ ಬಿಡುಗಡೆ ಮಾಡಿದ ಕೇಂದ್ರ: ಕರ್ನಾಟಕಕ್ಕೆ 4,314 ಕೋಟಿ ಬಿಡುಗಡೆ

ನವದೆಹಲಿ: ಕೇಂದ್ರ ಸರ್ಕಾರವು ಸೋಮವಾರ ರಾಜ್ಯಗಳಿಗೆ ಮೂರನೇ ಕಂತಿನ ತೆರಿಗೆ ಹಂಚಿಕೆಯ ಮೂರನೇ ಕಂತಾಗಿ 1,18,280 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ. ಸಾಮಾನ್ಯ ಮಾಸಿಕ ಹಂಚಿಕೆ 59,140 ಕೋಟಿ ರೂ. ಗಳಿಗಿಂತ ಇದು ಹೆಚ್ಚಾಗಿದೆ. ಬಂಡವಾಳ ವೆಚ್ಚವನ್ನು ವೇಗಗೊಳಿಸಲು, ಅಭಿವೃದ್ಧಿ ಮತ್ತು ಕಲ್ಯಾಣ ಸಂಬಂಧಿತ ವೆಚ್ಚಗಳಿಗೆ ಹಣಕಾಸು ಒದಗಿಸಲು ಮತ್ತು ಆದ್ಯತೆಯ ಯೋಜನೆಗಳಿಗೆ ಸಂಪನ್ಮೂಲ ಲಭ್ಯವಾಗುವಂತೆ ಮಾಡಲು ಜೂನ್ 2023 ರಲ್ಲಿ ನಿಯಮಿತ ಕಂತಿಗೆ ಹೆಚ್ಚುವರಿಯಾಗಿ ಒಂದು ಮುಂಗಡ ಕಂತನ್ನು ರಾಜ್ಯಗಳಿಗೆ ಬಿಡುಗಡೆ ಮಾಡಲಾಗುತ್ತಿದೆ ಎಂದು ಅಧಿಕೃತ […]

2016 ರ ನೋಟು ಅಮಾನ್ಯೀಕರಣ ಅರ್ಜಿಗಳನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್: ಕೇಂದ್ರದ ಅಧಿಸೂಚನೆ ಮಾನ್ಯ ಎಂದ ಪೀಠ

ನವದೆಹಲಿ: 500 ರೂ ಮತ್ತು 1000 ರೂ.ಗಳ ಕರೆನ್ಸಿ ನೋಟುಗಳನ್ನು ಅಮಾನ್ಯಗೊಳಿಸಿ ಕೇಂದ್ರ ಸರ್ಕಾರ ಆರು ವರ್ಷಗಳ ಹಿಂದೆ ತೆಗೆದುಕೊಂಡಿದ್ದ ನಿರ್ಧಾರವನ್ನು ಸುಪ್ರೀಂ ಕೋರ್ಟಿನ ಸಂವಿಧಾನ ಪೀಠ ಎತ್ತಿ ಹಿಡಿದಿದೆ. ನವೆಂಬರ್ 8, 2016 ರ ಕೇಂದ್ರದ ಅಧಿಸೂಚನೆಯು ಮಾನ್ಯವಾಗಿದೆ ಮತ್ತು ಅನುಪಾತದ ಪರೀಕ್ಷೆಯನ್ನು ತೃಪ್ತಿಪಡಿಸುತ್ತದೆ ಎಂದು ಅದು ಹೇಳಿದೆ. ನ್ಯಾಯಮೂರ್ತಿಗಳಾದ ಎಸ್ ಅಬ್ದುಲ್ ನಜೀರ್, ಬಿಆರ್ ಗವಾಯಿ, ಎ.ಎಸ್ ಬೋಪಣ್ಣ, ವಿ ರಾಮಸುಬ್ರಮಣಿಯನ್ ಮತ್ತು ಬಿವಿ ನಾಗರತ್ನ ಅವರನ್ನೊಳಗೊಂಡ ಐವರು ನ್ಯಾಯಾಧೀಶರ ಪೀಠವು ಡಿಸೆಂಬರ್ 7, […]

ಆಧಾರ್ ನಿಯಮಗಳಿಗೆ ತಿದ್ದುಪಡಿ ಮಾಡಿದ ಕೇಂದ್ರ: ಪೋಷಕ ದಾಖಲೆಗಳನ್ನು 10 ವರ್ಷಗಳಿಗೊಮ್ಮೆ ನವೀಕರಿಸಿ

ನವದೆಹಲಿ: ಕೇಂದ್ರ ಸರ್ಕಾರವು ಆಧಾರ್ ನಿಯಮಗಳಿಗೆ ತಿದ್ದುಪಡಿ ಮಾಡಿದ್ದು, ಆಧಾರ್ ದಾಖಲಾತಿ ದಿನಾಂಕದಿಂದ 10 ವರ್ಷ ಪೂರ್ಣಗೊಂಡ ನಂತರ ಆಧಾರ್ ಹೊಂದಿರುವವರು ಒಮ್ಮೆಯಾದರೂ ಪೋಷಕ ದಾಖಲೆಗಳನ್ನು ನವೀಕರಿಸಬೇಕು ಎಂದು ನಿರ್ದಿಷ್ಟಪಡಿಸಿದೆ. ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯ ಹೊರಡಿಸಿದ ಗೆಜೆಟ್ ಅಧಿಸೂಚನೆಯ ಪ್ರಕಾರ, ನವೀಕರಣವು ಕೇಂದ್ರೀಯ ಗುರುತುಗಳ ಡೇಟಾ ರೆಪೊಸಿಟರಿಯಲ್ಲಿ ಆಧಾರ್-ಸಂಬಂಧಿತ ಮಾಹಿತಿಯ ನಿರಂತರ ನಿಖರತೆಯನ್ನು ಖಚಿತಪಡಿಸುತ್ತದೆ. ಆಧಾರ್ ಸಂಖ್ಯೆ ಹೊಂದಿರುವವರು, ಆಧಾರ್‌ಗಾಗಿ ದಾಖಲಾತಿ ದಿನಾಂಕದಿಂದ10 ವರ್ಷ ಪೂರ್ಣಗೊಂಡ ನಂತರ, ಗುರುತಿನ ಪುರಾವೆ ಮತ್ತು ವಿಳಾಸದ ದಾಖಲೆಗಳನ್ನು ಸಲ್ಲಿಸುವ […]

ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವನ್ನು ರದ್ದುಗೊಳಿಸುವ ಯಾವುದೇ ಪ್ರಸ್ತಾವನೆ ಇಲ್ಲ: ಕೇಂದ್ರ

ನವದೆಹಲಿ: ಕೇಂದ್ರ ಸರ್ಕಾರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವನ್ನು ರದ್ದುಪಡಿಸಲಿದೆ ಎಂದು ಮಾಧ್ಯಮಗಳಲ್ಲಿ ವರದಿಗಳು ಹರಿದಾಡುತ್ತಿದ್ದು, ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವನ್ನು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದೊಂದಿಗೆ ಸರ್ಕಾರ ವಿಲೀನಗೊಳಿಸಬಹುದು ಎಂನ್ನುವ ಊಹಾಪೋಹಗಳನ್ನು ಹರಿಯಬಿಡಲಾಗಿತ್ತು. ಮಾಧ್ಯಮಗಳಲ್ಲಿ ವರದಿಯಾದ ವದಂತಿಗಳಿಗೆ ಸರ್ಕಾರವು ಅಂತ್ಯ ಹಾಡಿದ್ದು, ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವನ್ನು ರದ್ದುಪಡಿಸುವ ಯಾವುದೇ ಪ್ರಸ್ತಾವನೆಯು ಪರಿಗಣನೆಯಲ್ಲಿಲ್ಲ ಎಂದು ಸರ್ಕಾರವು ಸ್ಪಷ್ಟಪಡಿಸಿದೆ. ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವನ್ನು ರದ್ದುಗೊಳಿಸುವ ಯಾವುದೇ ಪ್ರಸ್ತಾವನೆಯು ಪರಿಗಣನೆಯಲ್ಲಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದ್ದು, ಮಾಧ್ಯಮ ವರದಿಗೆ ಪ್ರತಿಕ್ರಿಯೆಯಾಗಿ ಸರ್ಕಾರದಿಂದ ಈ […]

ಪಿ.ಎಫ್.ಐ ನಿಷೇಧ ರಾಷ್ಟ್ರ ವಿರೋಧಿಗಳಿಗೆ ಪಾಠ: ನಯನಾ ಗಣೇಶ್

ಉಡುಪಿ: ದೇಶದಲ್ಲಿ ಅಶಾಂತಿ ಮತ್ತು ಮತಿಯವಾದವನ್ನು ಪ್ರತಿಪಾದಿಸಿ ದೇಶ ವಿರೋಧಿಸಿ ಕೃತ್ಯದಲ್ಲಿ ತೊಡಗಿದ್ದ ಪಿ.ಎಫ್.ಐ ಮತ್ತು ಅದರ ಅಂಗಸಂಸ್ಥೆಗಳನ್ನು ಕೇಂದ್ರ ಸರ್ಕಾರ ನಿಷೇಧ ಮಾಡಿರುವುದನ್ನು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಶ್ರೀಮತಿ ನಯನಾ ಗಣೇಶ್ ಸ್ವಾಗತಿಸಿದ್ದಾರೆ. ಕಳೆದ ಅನೇಕ ವರ್ಷಗಳಿಂದ ದೇಶದ ಅನೇಕ ಕಡೆ ಮುಖ್ಯವಾಗಿ ಕರಾವಳಿ ಪ್ರದೇಶದಲ್ಲಿ ಹಲವು ವಿಧ್ವಂಸಕ ಚಟುವಟಿಕೆಯಲ್ಲಿ ಭಾಗಿಯಾಗಿ, ದೇಶದ ಐಕ್ಯತೆ ಗೆ ಪಿ.ಎಫ್.ಐ ಧಕ್ಕೆ ತಂದಿದ್ದು, ಭಯದ ವಾತಾವರಣ ಮೂಡಿಸುತ್ತ ಬಂದಿದೆ. ಅನೇಕ ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡುವ ಮೂಲಕ ರಾಷ್ಟ್ರೀಯತೆಯ […]