ವಿವಿಧ ದೇವಸ್ಥಾನಗಳಲ್ಲಿ ಷಷ್ಠಿ ಮಹೋತ್ಸವ ಆಚರಣೆ

ಉಡುಪಿ: ಷಷ್ಠಿ ಪ್ರಯುಕ್ತ ವಿವಿಧ ದೇವಸ್ಥಾನಗಳ ನಾಗ ಸನ್ನಿಧಿಯಲ್ಲಿ ಪೂಜಾ ಕಾರ್ಯಗಳು ನಡೆದವು. ಸಗ್ರಿ ಶ್ರೀ ವಾಸುಕೀ ಸುಬ್ರಹ್ಮಣ್ಯ ದೇವಸ್ಥಾನ ಕುಂಜಿಬೆಟ್ಟಿನಲ್ಲಿ ನಾಗಪಾತ್ರಿ ಗೋಪಾಲ್ ಕೃಷ್ಣ ಸಾಮಗರ ಮಾರ್ಗದರ್ಶನದಲ್ಲಿ ಚಂಡಿಕಾ ಹೋಮ, ನಾಗದೇವರಿಗೆ ವಿಶೇಷ ಅಭಿಷೇಕ ನಡೆಯಿತು. ಶ್ರೀ ವಾಸುಕಿ ಅನಂತ ಪದ್ಮನಾಭ ದೇವಸ್ಥಾನ ಬಡಗುಪೇಟೆಯಲ್ಲಿ ಷಷ್ಠಿ ಮಹೋತ್ಸವದ ಪ್ರಯುಕ್ತ ದೇವರ ಸನ್ನಿಧಾನದಲ್ಲಿ ಆಶ್ಲೇಷ ಬಲಿಸೇವೆ, ಪಲ್ಲ ಪೂಜೆ ನಡೆಯಿತು. ಸಾವಿರಾರು ಭಕ್ತರು ದೇವರ ದರ್ಶನ ಪಡೆದು ಸಾರ್ವಜನಿಕ ಅನ್ನಸಂತರಪಣೆಯಲ್ಲಿ ಭೋಜನ ಪ್ರಸಾದ ಸ್ವೀಕರಿಸಿದರು. ಕಿದಿಯೂರು ಹೋಟೆಲ್ […]

ನ.27 ರಿಂದ 30 ರವರೆಗೆ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವ

ಕಡಬ: ದೇಶ-ವಿದೇಶಗಳಲ್ಲಿ ಪ್ರಸಿದ್ದಿ ಪಡೆದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನ.27 ರಿಂದ 30 ರವರೆಗೆ ಸಂಭ್ರಮದ ಚಂಪಾಷಷ್ಠಿ ಮಹೋತ್ಸವ-2022 ಜರುಗಲಿದೆ. ಉತ್ಸವದ ವಿವರಗಳು: ನ.27 ಆದಿತ್ಯವಾರದಂದು ರಾತ್ರಿ ಹೂವಿನ ತೇರಿನ ಉತ್ಸವ, ನ.28 ಸೋಮವಾರದಂದು ರಾತ್ರಿ ಪಂಚಮಿ ರಥೋತ್ಸವ ಮತ್ತು ತೈಲ್ಯಾಭ್ಯಂಜನ, ನ.29 ಮಂಗಳವಾರದಂದು ಚಂಪಾಷಷ್ಠಿ ಮಹಾರಥೋತ್ಸವ, ನ.30 ಬುಧವಾರದಂದು ಅವಭೃತೋತ್ಸವ ಮತ್ತು ನೌಕಾವಿಹಾರ ನಡೆಯಲಿದೆ. ನ. 27 ಮತ್ತು 28 ರಂದು ರಾತ್ರಿ ಹೊತ್ತಿನ ಪ್ರಾರ್ಥನೆ ಸೇವೆ ಹಾಗೂ ನ.29 ರಂದು ಮಧ್ಯಾಹ್ನ […]