ಹೆಬ್ರಿ: ಚಾಣಕ್ಯ ಶಿಕ್ಷಣ ಸಂಸ್ಥೆ ಅಧ್ಯಕ್ಷ ಉದಯಕುಮಾರ್ ಶೆಟ್ಟಿ ಅವರಿಗೆ ಸನ್ಮಾನ

ಹೆಬ್ರಿ: ಕನ್ನಡ ರಾಜ್ಯೋತ್ಸವ ಕೇವಲ ಒಂದು ದಿನದ ಆಚರಣೆ ಸೀಮಿತವಾಗಿರಬಾರದು ಎಂಬ ಉದ್ದೇಶದಿಂದ ಶಾಲೆ ಕಾಲೇಜಿಗೆ ತೆರಳಿ ನಿರಂತರವಾಗಿ ಕನ್ನಡ ಕಂಪನ್ನು ವಷ೯ ಪೂತಿ೯ ಕನ್ನಡ ಗೀತೆಗಳ ಗಾಯನ, ಗಾನಯಾನ ಕಾಯ೯ಕ್ರಮ ಮೂಲಕ ರಾಜ್ಯಕ್ಕೆ ಮಾದರಿಯಾದ ಹೆಬ್ರಿಯ ಚಾಣಕ್ಯ ಸಂಸ್ಥೆಯ ಕನ್ನಡ ಅಭಿಮಾನ ಶ್ಲಾಘನೀಯ ಎಂದು ನೆಲ್ಲಿಕಟ್ಟೆ ಸರಕಾರಿ ಪ್ರಾಥಮಿಕ ಶಾಲೆಯ ಶಾಲಾ ಮುಖ್ಯ ಶಿಕ್ಷಕ ರವೀಂದ್ರ ಹೆಗ್ಡೆ ಹೇಳಿದರು. ಮುದ್ರಾಡಿ ನೆಲ್ಲಿಕಟ್ಟೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಚಿಣ್ಣರ ಕಲರವ ಮಕ್ಕಳ ಪ್ರತಿಭಾ ಪುರಸ್ಕಾರ […]

ಹಿರಿಯಡಕ: ವಾಯ್ಸ್ ಆಫ್ ಚಾಣಕ್ಯ 2022 ಸೀಸನ್- 5 ಉಡುಪಿ ಜಿಲ್ಲಾ ಮಟ್ಟದ ಟ್ರ್ಯಾಕ್ ಸಂಗೀತ ಸ್ಪರ್ಧೆ

ಹಿರಿಯಡಕ : ಚಾಣಕ್ಯ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್ಸ್ ಹೆಬ್ರಿ ಇವರ ನೇತೃತ್ವದಲ್ಲಿ ಮುನಿಯಾಲು ಉದಯಕೃಷ್ಣ ಶೆಟ್ಟಿ ಚಾರಿಟೇಬಲ್ ಟ್ರಸ್ಟ್, ರೈತರ ಸಹಕಾರಿ ಸಂಘ ಹಿರಿಯಡಕ ಸಹಯೋಗದೊಂದಿಗೆ ವಾಯ್ಸ್ ಆಪ್ ಚಾಣಕ್ಯ 2022 ಸೀಸನ್- 5 ಉಡುಪಿ ಜಿಲ್ಲಾ ಮಟ್ಟದ ಟ್ರ್ಯಾಕ್ ಸಂಗೀತ ಸ್ಪರ್ಧೆ ಕಾರ್ಯಕ್ರಮವು ಹಿರಿಯಡ್ಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಸಂಯೋಜಕ ಹೆಬ್ರಿ ಉದಯ ಕುಮಾರ್ ಶೆಟ್ಟಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, ಶಿಕ್ಷಣ ಎಂಬುದು ಕೇವಲ ಅಂಕ ಗಳಿಸುವುದು ಮಾತ್ರ ಅಲ್ಲ. […]

ವಾಯ್ಸ್ ಆಫ್ ಚಾಣಕ್ಯ 2022 ಜಿಲ್ಲಾ ಮಟ್ಟದ ಟ್ರ್ಯಾಕ್ ಸಂಗೀತ ಸ್ಪರ್ಧೆ ಉದ್ಘಾಟನೆ

ಉಡುಪಿ: ಯಾವುದೇ ಒಂದು ಪ್ರತಿಭೆ ಹೊರಹೊಮ್ಮಲು ಅದಕ್ಕೆ ಸೂಕ್ತ ವೇದಿಕೆ ಅಗತ್ಯ. ಈ ನಿಟ್ಟಿನಲ್ಲಿ ಹೆಬ್ರಿಯ ಚಾಣಕ್ಯ ಸಂಸ್ಥೆ ಕಳೆದ 7 ವಷ೯ಗಳಿಂದ ಸಂಗೀತ ಪ್ರತಿಭೆಗಳನ್ನು ಗುರುತಿಸಿ ವೇದಿಕೆ ಕಲ್ಪಿಸುತ್ತಿರುವುದು ಶ್ಲಾಘನೀಯ ಎಂದು ಉಡುಪಿ ಜಿಲ್ಲಾ ಕಾಯ೯ನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ನಜೀರ್ ಪೊಲ್ಯ ಹೇಳಿದರು. ನ.6 ರಂದು ಉಡುಪಿ ಸೃಷ್ಟಿ ಸಂಗೀತ ತರಬೇತಿ ಕೇಂದ್ರದಲ್ಲಿ ಚಾಣಕ್ಯ ಇನ್ಸಿಟ್ಯೂಟ್ ಆಫ್ ಮ್ಯೂಸಿಕ್ ಹೆಬ್ರಿ ಇದರ ನೇತೃತ್ವದಲ್ಲಿ ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ನಡೆಯಲಿರುವ […]