ಏಪ್ರಿಲ್ 1 ರಿಂದ ಸರ್ಕಾರಿ ನೌಕರರರಿಗೆ ಶೇ.17ರಷ್ಟು ಮಧ್ಯಂತರ ಪರಿಹಾರ ಮಂಜೂರು: ಆದೇಶ ಹೊರಡಿಸಿದ ಸರ್ಕಾರ

ಬೆಂಗಳೂರು: ಸರ್ಕಾರಿ ನೌಕರರ ವೇತನ ಶೇ.17ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು,ಪ್ರಸಕ್ತ ವರ್ಷದ ಏಪ್ರಿಲ್ 1ರಿಂದ ನೂತನ ಆದೇಶ ಜಾರಿಯಾಗಲಿದೆ. ಸರ್ಕಾರದ ಆದೇಶದಲ್ಲಿ 2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ತೀರ್ಮಾನಿಸಲಾಗಿದೆ. ಏಪ್ರಿಲ್ 1 ರಿಂದ ಜಾರಿಗೆ ಬರುವಂತೆ ಮೂಲ ವೇತನದ ಶೇಕಡಾ 17ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲಾಗಿದೆ. ರಾಜ್ಯದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳೊಂದಿಗೆ ಚರ್ಚಿಸಿದ […]

6085 ಕೋಟಿ ದಾಖಲೆ ಜಿ.ಎಸ್.ಟಿ ಸಂಗ್ರಹ: 30% ಬೆಳವಣಿಗೆ ದರ ಮುಂದುವರಿಕೆ

ಬೆಂಗಳೂರು: “ಈ ತಿಂಗಳು ಜಿಎಸ್‌ಟಿ ಅಡಿಯಲ್ಲಿ 6085 ಕೋಟಿ ದಾಖಲೆ ಸಂಗ್ರಹವಾಗಿದೆ. ಜಿಎಸ್‌ಟಿ ತೆರಿಗೆ ಸಂಗ್ರಹದಲ್ಲಿ ಕರ್ನಾಟಕವು 30% ರಷ್ಟು ಅತ್ಯಧಿಕ ಬೆಳವಣಿಗೆ ದರವನ್ನು ಹೊಂದಿರುವ ರಾಜ್ಯವಾಗಿ ಮುಂದುವರೆದಿದೆ. ಸುಧಾರಣೆಗಳು, ಕೇಂದ್ರೀಕೃತ ಜಾಗರೂಕತೆ, ಆರ್ಥಿಕತೆಯಲ್ಲಿ ಚೇತರಿಕೆ ಮತ್ತು ತೆರಿಗೆ ಪಾವತಿದಾರರಿಂದ ಉತ್ತಮ ಅನುಸರಣೆಗಾಗಿ ಕೈಗೊಂಡ ಕ್ರಮಗಳಿಂದಾಗಿ ಈ ಗಮನಾರ್ಹ ಸಂಗ್ರಹಣೆ ಆಗಿದೆ. ಆದಾಯದ ಈ ಹೆಚ್ಚಳವು ಈ ವರ್ಷ ಉತ್ತಮ ಬಜೆಟ್ ಅನ್ನು ಮಂಡಿಸಲು ಸರ್ಕಾರಕ್ಕೆ ಅನುವು ಮಾಡಿಕೊಡುತ್ತದೆ” ಎಂದು ಮುಖ್ಯಮಂತ್ರಿ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ. ಏತನ್ಮಧ್ಯೆ, […]

ಹಾಲಿನ ದರ ಏರಿಕೆ: ಮುಖ್ಯಮಂತ್ರಿ ಮಧ್ಯಪ್ರವೇಶ; ನ. 20 ರವರೆಗೆ ಕಾಯಲು ಕೆಎಂಎಫ್ ನಿರ್ಧಾರ

ಬೆಂಗಳೂರು: ಮಂಗಳವಾರದಿಂದ ಹಾಲು ಮತ್ತು ಮೊಸರು ದರವನ್ನು ಹೆಚ್ಚಿಸುವ ಕರ್ನಾಟಕ ಹಾಲು ಒಕ್ಕೂಟದ (ಕೆಎಂಎಫ್) ನಿರ್ಧಾರಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಾತ್ಕಾಲಿಕ ತಡೆ ಹಾಕಿದ್ದಾರೆ. ಮುಖ್ಯಮಂತ್ರಿ ನಿರ್ದೇಶನದ ನಂತರ, ಹಾಲು ಮತ್ತು ಮೊಸರಿನ ಬೆಲೆಗಳನ್ನು ಪರಿಷ್ಕರಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ನವೆಂಬರ್ 20 ರವರೆಗೆ ಕಾಯಲು ಕೆಎಂಎಫ್ ನಿರ್ಧರಿಸಿದೆ. ಸೋಮವಾರ ಮಧ್ಯರಾತ್ರಿಯೊಳಗೆ ಬೆಲೆ ಏರಿಕೆ ಮಾಡಲು ಕೆಎಂಎಫ್ ನಿರ್ಧರಿಸಿದ ಸುದ್ದಿ ತಿಳಿದ ಮುಖ್ಯಮಂತ್ರಿ ಬೊಮ್ಮಾಯಿ, ನವೆಂಬರ್ 20ರ ವರೆಗೆ ಬೆಲೆ ಏರಿಕೆ ಮಾಡದಂತೆ ಘಟಕವನ್ನು ಕೇಳಿಕೊಂಡಿದ್ದಾರೆ. ಕೆಎಂಎಫ್ […]

ಬಿಜೆಪಿ ಜಿಲ್ಲಾ ಜನಸಂಕಲ್ಪ ಸಮಾವೇಶದ ಪೂರ್ವಸಿದ್ಧತಾ ಸಭೆ

ಉಡುಪಿ: ನ.5 ರಂದು ಬೆಳಿಗ್ಗೆ 10.00ಕ್ಕೆ ಬಿಜೆಪಿ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯು ಮಣಿಪಾಲದ ಹೋಟೆಲ್ ಕಂಟ್ರಿ ಇನ್ ಸಭಾಂಗಣದಲ್ಲಿ ನಡೆಯಲಿದೆ. ಉಡುಪಿ ಜಿಲ್ಲಾ ಜನಸಂಕಲ್ಪ ಸಮಾವೇಶವು‌ ನ.7ರಂದು ಬೆಳಿಗ್ಗೆ 10.30ಕ್ಕೆ ಕಾಪು ಬಸ್ ನಿಲ್ದಾಣದ ಬಳಿ ಹಾಗೂ ಸಂಜೆ 4.00ಕ್ಕೆ ತ್ರಾಸಿ‌ ಮುಳ್ಳಿಕಟ್ಟೆ ರಾ.ಹೆ. ಬಳಿ ನಡೆಯಲಿದೆ. ಈ ಎರಡೂ ಮಹತ್ವಪೂರ್ಣ ಕಾರ್ಯಕ್ರಮಗಳ ಬಗ್ಗೆ ಪೂರ್ವಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಸಂಘಟಿತ ಪ್ರಯತ್ನದ ಮೂಲಕ ನಿರೀಕ್ಷಿತ ಯಶಸ್ಸನ್ನು ಸಾಧಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ […]