ಎಪ್ರಿಲ್ 8 ಅಥವಾ 9 ರಂದು ಬಿಜೆಪಿ ಅಭ್ಯರ್ಥಿಗಳ ಅಧಿಕೃತ ಪಟ್ಟಿ ಬಿಡುಗಡೆ: ಬೊಮ್ಮಾಯಿ

ಬೆಂಗಳೂರು: ಕಳೆದೆರೆಡು ದಿನಗಳಿಂದ ಜಿಲ್ಲಾ ಸಮಿತಿಗಳಲ್ಲಿ ತೆಗೆದುಕೊಂಡ ತೀರ್ಮಾನಗಳನ್ನು ಇಂದು ರಾಜ್ಯ ಕೋರ್ ಕಮಿಟಿ ಪರಿಶೀಲಿಸಿ, ಕೇಂದ್ರಕ್ಕೆ ಕಳುಹಿಸಿಕೊಡಲಿದೆ. ಬಹುತೇಕ ಎಪ್ರಿಲ್ 8 ಅಥವಾ 9 ರಂದು ಅಧಿಕೃತ ಪಟ್ಟಿ ಬಿಡುಗಡೆಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಕಾರ್ಯಕರ್ತರಲ್ಲಿ ಉತ್ಸಾಹ ಇಮ್ಮಡಿಯಾಗಿದ್ದು, ಸ್ಪಷ್ಟ ಬಹುಮತದ ಸರ್ಕಾರ ರಚನೆಯಾಗುವ ವಿಶ್ವಾಸವಿದ್ದು, ಕೆಲವು ಕಡೆ ಅಚ್ಚರಿ ರೀತಿಯಲ್ಲಿ ನಮ್ಮ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಟಿಕೆಟ್‌ ಪ್ರಕ್ರಿಯೆ ಅಂತಿಮಗೊಳಿಸಲು ಮಂಗಳವಾರ ಹಾಗೂ ಬುಧವಾರದಂದು ರಾಜ್ಯ […]

ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿ: ಸಿಎಂ ಬೊಮ್ಮಾಯಿ ಸರ್ಕಾರಿ ಕಾರ್ಯಕ್ರಮಗಳು ರದ್ದು

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಬುಧವಾರದಂದು ವೇಳಾಪಟ್ಟಿ ಪ್ರಕಟವಾಗಲಿದ್ದು ತಕ್ಷಣದಿಂದಲೇ ನೀತಿ ಸಂಹಿತೆ ಜಾರಿಯಾಗಲಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳು ರದ್ದಾಗಿವೆ. ಇಂದು ಸಿಎಂ ಬೊಮ್ಮಾಯಿ ಅವರು ಕೊಪ್ಪಳ ಹಾಗೂ ತವರು ಕ್ಷೇತ್ರದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಉದ್ಘಾಟಿಸಬೇಕಿತ್ತು. ಆದರೆ 11.30ಕ್ಕೆ ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ ಕರೆದಿರುವುದರಿಂದ ಸರ್ಕಾರಿ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ. ಕೊಪ್ಪಳ ಜಿಲ್ಲೆಯಲ್ಲಿ ನೀರಾವರಿ ಯೋಜನೆಗೆ ಚಾಲನೆ ನೀಡಬೇಕಿತ್ತು. ಕೆರೆಗಳಿಗೆ ನೀರು ತುಂಬುವ ಯೋಜನೆ ಚಾಲನೆ ಹಾಗೂ ಶಿಗ್ಗಾಂವಿ, ರಾಣೆಬೆನ್ನೂರಿನಲ್ಲಿ […]

ಮುಸ್ಲಿಂ ಬಾಲಕಿಯರ ಪ್ರತ್ಯೇಕ ಶಾಲೆ ವಿಚಾರ ಚರ್ಚೆ ಆಗಿಲ್ಲ; ವಕ್ಫ್ ಬೋರ್ಡ್ ಅಧ್ಯಕ್ಷರ ಹೇಳಿಕೆ ವೈಯಕ್ತಿಕ: ಬೊಮ್ಮಾಯಿ ಸ್ಪಷ್ಟನೆ

ಬೆಂಗಳೂರು: ಮುಸ್ಲಿಂ ಬಾಲಕಿಯರಿಗಾಗಿಯೇ 10 ಹೊಸ ಕಾಲೇಜುಗಳನ್ನು ಸ್ಥಾಪಿಸುವ ರಾಜ್ಯದ ಆಡಳಿತಾರೂಢ ಬಿಜೆಪಿ ಸರ್ಕಾರದ ನಿರ್ಧಾರಕ್ಕೆ ಪ್ರತಿಯಾಗಿ ಕರ್ನಾಟಕದಲ್ಲಿ ವ್ಯಾಪಕ ಪ್ರತಿಭಟನೆ ನಡೆಸುವುದಾಗಿ ಹಿಂದೂ ಸಂಘಟನೆಗಳು ಎಚ್ಚರಿಕೆ ನೀಡಿದ್ದರಿಂದ ವಿವಾದ ಭುಗಿಲೆದ್ದಿದೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಈ ವಿಚಾರ ತನಗೆ ತಿಳಿದಿಲ್ಲ ಎಂದಿದ್ದಾರೆ. ರಾಜ್ಯದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಗಾಗಿ 10 ಕಾಲೇಜುಗಳನ್ನು ತೆರೆಯಲು ಸರ್ಕಾರವು ಒಪ್ಪಿಗೆ ನೀಡಿದೆ ಎಂಬ ಕರ್ನಾಟಕ ವಕ್ಫ್ ಮಂಡಳಿಯ ಅಧ್ಯಕ್ಷ ಮೌಲಾನಾ ಶಾಫ್ತಿ ಸಾದಿ ಅವರ ಹೇಳಿಕೆಯನ್ನು ಕರ್ನಾಟಕ […]

ಅಪ್ಪ ಮಗನ ಅಪೂರ್ವ ಸಂಗಮದ ಪೋಸ್ಟರ್; ಚಿತ್ರ ಕ್ಕೆ ತೆರಿಗೆ ವಿನಾಯಿತಿ; ಗಂಧದಗುಡಿ ಎಲ್ಲಾ ದಾಖಲೆಗಳನ್ನೂ ಪುಡಿಗಟ್ಟಲಿ ಎಂದ ಯಶ್

ಬೆಂಗಳೂರು: ಸಸ್ಯ ಮತ್ತು ಪ್ರಾಣಿಗಳ ರಕ್ಷಣೆ ಮತ್ತು ಸಂರಕ್ಷಣೆಯನ್ನು ಆಧರಿಸಿದ ದಿವಂಗತ ಪುನೀತ್ ರಾಜ್‌ಕುಮಾರ್ ಅಭಿನಯದ ಕನ್ನಡ ಸಾಕ್ಷ್ಯಚಿತ್ರ ‘ಗಂಧದ ಗುಡಿ’ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ತೆರಿಗೆ ವಿನಾಯಿತಿ ಘೋಷಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಇದು ಅಪ್ಪು ನಟನೆಯ ಕೊನೆಯ ಚಿತ್ರವಾಗಿದೆ. ಈ ಮಧ್ಯೆ ಅಪ್ಪು ಮತ್ತು ವರನಟ ಡಾ. ರಾಜ್ ಕುಮಾರ್ ಅವರ ಚಿತ್ರಗಳನ್ನೊಳಗೊಂಡ ಪೋಸ್ಟರ್ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ. ಅಪ್ಪ-ಮಗ ಇಬ್ಬರೂ ಗಂಧದಗುಡಿ ಎನ್ನುವ ಹೆಸರಿನ ಚಿತ್ರದಲ್ಲಿ ನಟಿಸಿದ್ದು, ದುರಾದೃಷ್ಟವಶಾತ್ ಈ […]

ಪುನೀತ್ ರಾಜ್ ಕುಮಾರ್ ನೆನಪಿಗಾಗಿ ಅರಮನೆ ಮೈದಾನದಲ್ಲಿ ಪುನೀತ ಪರ್ವ: ಭಾರತೀಯ ಚಿತ್ರರಂಗದ ದಿಗ್ಗಜರು ಭಾಗವಹಿಸುವ ನಿರೀಕ್ಷೆ

ಅಪ್ಪು ಕಣ್ಮರೆಯಾಗಿ ಒಂದು ವರ್ಷವಾಗುತ್ತಾ ಬಂದಿದ್ದು, ಅವರ ಪುಣ್ಯ ಸ್ಮರಣೆಯ ಒಂದು ದಿನಕ್ಕೂ ಮುನ್ನ ಅಕ್ಟೋಬರ್‌ 28ರಂದು ‘ಗಂಧದ ಗುಡಿ’ ಚಿತ್ರಮಂದಿರಗಳಲ್ಲಿ ಬಿಡುಗಡೆ ಕಾಣುತ್ತಿದೆ. ವನ್ಯಜೀವಿ ಛಾಯಾಗ್ರಾಹಕ ಅಮೋಘ ವರ್ಷ ನಿರ್ದೇಶನ ಮಾಡಿರುವ ಈ ಚಿತ್ರದಲ್ಲಿ ನೈಜ ಜೀವನದ ಪುನೀತ್ ರಾಜ್‍ಕುಮಾರ್ ಆಗಿ ಅಪ್ಪು ಕಾಣಿಸಿಕೊಂಡಿದ್ದಾರೆ. ಚಿತ್ರ ಬಿಡುಗಡೆಯಾಗುವ ಹಿನ್ನೆಲೆಯಲ್ಲಿ  ಅರಮನೆ ಮೈದಾನದಲ್ಲಿ ಅಕ್ಟೋಬರ್ 21ರ ಶುಕ್ರವಾರ ಚಿತ್ರದ ಬಿಡುಗಡೆ ಪೂರ್ವ ಸಮಾರಂಭ ನಡೆಯಲಿದ್ದು, ಕಾರ್ಯಕ್ರಮಕ್ಕೆ ‘ಪುನೀತ ಪರ್ವ’ ಎಂದು ಹೆಸರಿಡಲಾಗಿದೆ. ಈ ಪುನೀತ ಪರ್ವ ಕಾರ್ಯಕ್ರಮಕ್ಕೆ […]