ಸಿಎಂ ಯಡಿಯೂರಪ್ಪ ಶಿವಮೊಗ್ಗಕ್ಕೆ ಸೀಮಿತಗೊಂಡಿದ್ದಾರೆ: ಬಿಜೆಪಿ ಶಾಸಕ ಉಮೇಶ್ ಕತ್ತಿ ಕಿಡಿ

ಬೆಳಗಾವಿ: ಸಿಎಂ ಬಿ.ಎಸ್. ಯಡಿಯೂರಪ್ಪನವರು ರಾಜ್ಯದ ಸಮಗ್ರ ಅಭಿವೃದ್ಧಿ ಬಗ್ಗೆ ಚಿಂತಿಸುತ್ತಿಲ್ಲ. ಅವರು ಕೇವಲ ಶಿವಮೊಗ್ಗ ಜಿಲ್ಲೆಗಷ್ಟೇ ಸೀಮಿತವಾಗಿದ್ದಾರೆ ಎಂದು ಹುಕ್ಕೇರಿ ಬಿಜೆಪಿ ಶಾಸಕ ಉಮೇಶ ಕತ್ತಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಉತ್ತರ ಕರ್ನಾಟಕದ ಅಭಿವೃದ್ಧಿ ಯೋಜನೆಗಳ ಬಗ್ಗೆ ಗಮನಕೊಡುತ್ತಿಲ್ಲ. ಇದರಿಂದ ನನಗೆ ಬಹಳ ನೋವಾಗಿದೆ ಎಂದು ಕಿಡಿಕಾರಿದರು. ಉತ್ತರ ಕರ್ನಾಟಕ ಭಾಗಕ್ಕೆ ಅನುಕೂಲ ಮಾಡಿಕೊಡಬಹುದು ಎಂದು ಇಷ್ಟು ದಿನ ಕಾದಿದ್ದೆ. ಆದರೆ ಅದು ನಡೆಯುವ ಲಕ್ಷಣ ಕಾಣುತ್ತಿಲ್ಲ. ಹಾಗಾಗಿ ಅನಿವಾರ್ಯವಾಗಿ […]