ಬ್ರಹ್ಮಾವರ: ಕೋಟ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಸಂಪೂರ್ಣ ಹವಾ ನಿಯಂತ್ರಿತ ಹೂಡೆ ಶಾಖೆ ಉದ್ಘಾಟನೆ

ಬ್ರಹ್ಮಾವರ: ಮೂರ್ತೆದಾರರ ಸೇವಾ ಸಹಕಾರಿ ಸಂಘ ಕೋಟ ಇದರ ಸಂಪೂರ್ಣ ಹವಾ ನಿಯಂತ್ರಿತ ಹೂಡೆ ಶಾಖೆಯ ಉದ್ಘಾಟನಾ ಸಮಾರಂಭವು ಡಿ.4 ಭಾನುವಾರದಂದು ಬೆಳಿಗ್ಗೆ 10 ಗಂಟೆಗೆ ಹೂಡೆಯ ಮೀನುಮಾರುಕಟ್ಟೆ ಎದುರಿನ ಸಿಂಧೂರ ಕಾಂಪ್ಲೆಕ್ಸ್ ನಲ್ಲಿ ನಡೆಯಲಿದೆ. ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಶಾಖೆಯನ್ನು ಉದ್ಘಾಟಿಸಲಿದ್ದು, ಇ-ಸ್ಟ್ಯಾಪಿಂಗ್ ಮತ್ತು ಆರ್.ಟಿ.ಸಿ ಸೌಲಭ್ಯವನ್ನು ಶಾಸಕ ರಘುಪತಿ ಭಟ್, ಭದ್ರತಾ ಕೊಠಡಿಯನ್ನು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಸೇಫ್ ಡಿಪಾಸಿಟ್ ಲಾಕರ್ ಅನ್ನು ಮಾಜಿ ಸಚಿವ ಪ್ರಮೋದ್ […]

69ನೇ ಅಖಿಲ ಭಾರತ ಸಹಕಾರ ಸಪ್ತಾಹ: ಎಂ.ಎನ್. ರಾಜೇಂದ್ರ ಕುಮಾರ್ ಅವರಿಗೆ ಸನ್ಮಾನ

ಉಚ್ಚಿಲ: 69ನೇ ಅಖಿಲ ಭಾರತ ಸಹಕಾರ ಸಪ್ತಾಹದ ಉದ್ಘಾಟನಾ ಸಮಾರಂಭ ಹಾಗೂ ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ ಅಭಿನಂದನಾ ಸಮಾರಂಭವು ಸೋಮವಾರದಂದು ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಸಭಾಂಗಣದಲ್ಲಿ ನೆರವೇರಿತು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ನಿ., ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ., ಉಡುಪಿ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿ., ಮಂಗಳೂರು, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ರಿ., ಮಂಗಳೂರು ದಕ್ಷಿಣ ಕನ್ನಡ ಸಹಕಾರಿ […]

ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ್ ಶೆಟ್ಟಿ ಇಂದ್ರಾಳಿ ಸಹಕಾರ ರತ್ನ ಪ್ರಶಸ್ತಿಗೆ ಆಯ್ಕೆ

ಉಡುಪಿ: ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕ, ಬಡಗುಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವಿಶೇಷ ಕರ್ತವ್ಯ ನಿರ್ವಹಣಾಧಿಕಾರಿ, ಉಡುಪಿ ತುಳುಕೂಟದ ಅಧ್ಯಕ್ಷ ಬಿ. ಜಯಕರ್ ಶೆಟ್ಟಿ ಇಂದ್ರಾಳಿ ಇವರು ಸಹಕಾರ ಕ್ಷೇತ್ರದ ಅತ್ಯುನ್ನತ ಗೌರವ, 2022ನೇ ಸಾಲಿನ ಸಹಕಾರ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಸಹಕಾರ ಕ್ಷೇತ್ರದ ವಿಶಿಷ್ಟ ಸಾಧನೆಗಾಗಿ ಸಹಕಾರ ರತ್ನ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.

ಸಹಕಾರಿ ಸಪ್ತಾಹ: ಲಾಂಛನ ಬಿಡುಗಡೆ, ಸಹಕಾರಿ ರಥಕ್ಕೆ ಚಾಲನೆ

ಉಡುಪಿ: ರಾಜ್ಯ ಮಟ್ಟದ 69ನೇ ಅಖಿಲ ಭಾರತ ಸಹಕಾರಿ ಸಪ್ತಾಹ ನವೆಂಬರ್ 14 ರಿಂದ 21ರವರೆಗೆ ನಡೆಯಲಿದ್ದು, ಸಹಕಾರಿ ಸಪ್ತಾಹದ ಅಂಗವಾಗಿ ಉಡುಪಿಯ ಪುರಭವನದ ಆವರಣದಲ್ಲಿ ಸಹಕಾರಿ ರಥಕ್ಕೆ ಉಡುಪಿ ನಗರ ಸಭಾ ಅಧ್ಯಕ್ಷೆ ಶ್ರೀಮತಿ ಸುಮಿತ್ರಾ ನಾಯಕ್, ಸಹಕಾರಿ ಧ್ವಜವನ್ನು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ್ ಶೆಟ್ಟಿಯವರಿಗೆ ಧ್ವಜ ಹಸ್ತಾಂತರಿಸುವ ಮೂಲಕ ಚಾಲನೆ ನೀಡಿದರು. ಸಹಕಾರಿ ಕ್ಷೇತ್ರದಲ್ಲಿ ರಾಜ್ಯದಲ್ಲಿಯೇ ಪ್ರಥಮ ಸಹಕಾರಿ ಲಾಂಛನವನ್ನು (ಪಿನ್) ಉದ್ಯಮಿ ಪಿ. ಪುರುಶೋಥಮ್ ಶೆಟ್ಟಿ ಬಿಡುಗಡೆಗೊಳಿಸಿದರು. ಈ […]