ಚಿಕ್ಕಮಗಳೂರು: ಹಾವು ಹಿಡಿಯುತ್ತಿದ್ದ ಸ್ನೇಕ್ ನರೇಶ್ ತಾನೇ ಹಿಡಿದ ನಾಗರಹಾವು ಕಚ್ಚಿ ಮೃತ

ಚಿಕ್ಕಮಗಳೂರು: ಇಲ್ಲಿನ ಹಾವು ಹಿಡಿಯುವ ಸ್ನೇಕ್ ನರೇಶ್ ಎಂಬ ವ್ಯಕ್ತಿಯು ತಾವೇ ಹಿಡಿದ ನಾಗರಹಾವು ಕಚ್ಚಿ ಮಂಗಳವಾರ ಮೃತಪಟ್ಟಿದ್ದಾರೆ. ನರೇಶ್ (55) ಕೆಲವು ದಿನಗಳ ಹಿಂದೆ ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ನಲ್ಲಿ ಬೆಳಗ್ಗೆ ನಾಗರಹಾವು ಹಿಡಿದು ರಕ್ಷಣೆ ಮಾಡಿ ಸ್ಕೂಟಿಯಲ್ಲಿ ಇಟ್ಟು ಮತ್ತೊಂದು ಹಾವಿದೆ ಎಂದು ಹಿಡಿಯಲು ಹೊರಟ್ಟಿದ್ದರು. ಈ ವೇಳೆ ಸ್ಕೂಟಿಯ ಸೀಟ್ ತೆಗೆದು ಹಾವಿದ್ದ ಚೀಲ ಸರಿಪಡಿಸಲು ಮುಂದಾದಾಗ ನಾಗರಹಾವು ನರೇಶ್‌ ಅವರ ಕೈಗೆ ಕಚ್ಚಿದೆ. ಹಾವು ಕಚ್ಚಿದ ತಕ್ಷಣವೇ ಸ್ಥಳೀಯರು ನರೇಶ್‌ […]