ಪಬ್ ನಲ್ಲಿ ಕಾಲೇಜು ವಿದ್ಯಾರ್ಥಿಗಳ ಪಾರ್ಟಿಗೆ ಬಜರಂಗದಳದಿಂದ ತಡೆ ಪ್ರಕರಣ: ಯಾವುದೇ ದಾಳಿ ನಡೆದಿಲ್ಲ ಎಂದ ಮಂಗಳೂರು ‌ಕಮಿಷನರ್ ಶಶಿಕುಮಾರ್

ಮಂಗಳೂರು: ಇಲ್ಲಿನ ಪಬ್ ಒಂದರಲ್ಲಿ ಕಾಲೇಜು ವಿದ್ಯಾರ್ಥಿಗಳ ಪಾರ್ಟಿಗೆ ಬಜರಂಗದಳ ತಡೆಯೊಡ್ಡಿದ ಪ್ರಕರಣ ಸಂಬಂಧಿಸಿ ಮಂಗಳೂರು ‌ಕಮಿಷನರ್ ಶಶಿಕುಮಾರ್ ಹೇಳಿಕೆ ನೀಡಿದ್ದು, ಪಬ್ ಮೇಲೆ ದಾಳಿ ಅಂತ ಕೆಲ ಮಾಧ್ಯಮಗಳಲ್ಲಿ ಬಂದಿದೆ. ಆದರೆ ಈ ವರದಿ ಸತ್ಯಕ್ಕೆ ದೂರ, ಯಾವುದೇ ಗ್ರಾಹಕರು ಅಥವಾ ಯಾರ ಮೇಲೂ ದಾಳಿ ನಡೆದಿಲ್ಲ ಎಂದು ಮಂಗಳೂರು ‌ಕಮಿಷನರ್ ಸ್ಪಷ್ಟನೆ ನೀಡಿದ್ದಾರೆ ಎಂದು ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿ ಮಾಡಿದೆ. ಅಪ್ರಾಪ್ತ ವಿದ್ಯಾರ್ಥಿಗಳಿಗೆ ಮದ್ಯ ಪೂರೈಕೆ ನಡೆಸುತ್ತಿದುದನ್ನು ಆರೋಪಿಸಿ ಸಂಘಟನೆಯವರು ಬಂದಿದ್ದಾರೆ. ಬೌನ್ಸರ್ […]