ಕಾಂಗ್ರೆಸ್ ಆಡಳಿತಾವಧಿಯಲ್ಲಿ ಹಿಂದೂಗಳ ಅಮಾನುಷ ಹತ್ಯೆ ಖಂಡನೀಯ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕೊಲೆ ಗಡುಕರಿಗೆ, ಭಯೋತ್ಪಾದಕರಿಗೆ ಬಲ ನೀಡಿದಂತೆ ಎಂಬುದಕ್ಕೆ ಕಾಂಗ್ರೆಸ್ ರಾಜ್ಯದ ಆಡಳಿತದ ಚುಕ್ಕಾಣಿ ಹಿಡಿದ ಎರಡೇ ತಿಂಗಳಲ್ಲಿ ರಾಜ್ಯದಲ್ಲಿ ಜೈನ ಮುನಿ ಮತ್ತು ಹಿಂದೂ ಕಾರ್ಯಕರ್ತನ ಅಮಾನುಷ ಹತ್ಯೆ ನಡೆದಿರುವುದು ಜ್ವಲಂತ ನಿದರ್ಶನವಾಗಿದೆ. ಹಂತಕರಿಗೆ ಕಾನೂನಿನ ಭಯವಿಲ್ಲದೆ ಇಂತಹ ಭೀಕರ ಕೊಲೆಗಳು ನಿರಂತರ ನಡೆಯುತ್ತಿರುವುದು ಅತ್ಯಂತ ಖಂಡನೀಯ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ‌ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜ್ […]