ಅನ್ನಭಾಗ್ಯ ಯೋಜನೆಗೆ ಅಕ್ಕಿ ನಿರಾಕರಣೆ ಕೇಂದ್ರ ಸರ್ಕಾರದ ಕೊಳಕು ರಾಜಕೀಯಕ್ಕೆ ಸಾಕ್ಷಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅನ್ನಭಾಗ್ಯ ಯೋಜನೆ ಘೋಷಣೆ ಆದ ತಕ್ಷಣ ರಾಜ್ಯಕ್ಕೆ ಅಕ್ಕಿ ಕೊಡುವುದನ್ನು ನಿಲ್ಲಿಸುವ ಮಾಡುವ ಮೂಲಕ ಕೇಂದ್ರದ ಬಿಜೆಪಿ ಸರ್ಕಾರ ಬಡವರ ವಿರೋಧಿಯಾದ ಡರ್ಟಿ ಪಾಲಿಟಿಕ್ಸ್ ಮಾಡುತ್ತಿದೆ. ಅವರೇನು ಪುಕ್ಕಟ್ಟೆ ಕೊಡುತ್ತಿರಲಿಲ್ಲ, ಕೆಜಿಗೆ 34 ರೂ ನಮ್ಮಿಂದ ತಗೊಳ್ಳುತ್ತಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳು ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆ ವಿಧಾನಸೌಧದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಅನ್ನ ಭಾಗ್ಯ ಯೋಜನೆಯ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆಗೆ […]

ಸತತ 14ನೇ ಬಾರಿಗೆ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ: ಬಜೆಟ್ ಮುಖ್ಯಾಂಶಗಳು ಇಂತಿವೆ

ಬೆಂಗಳೂರು: ಮೇ 10ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆದು ಸರ್ಕಾರ ರಚಿಸಿ ಮುಖ್ಯಮಂತ್ರಿ ಪಟ್ಟಕ್ಕೇರಿದ ಸಿದ್ದರಾಮಯ್ಯ ಅವರು ಇಂದು 14ನೇ ಬಾರಿಗೆ ಬಜೆಟ್ ಮಂಡಿಸಿದ್ದಾರೆ. ಈ ಬಾರಿಯ ಬಜೆಟ್ ನಲ್ಲಿ ಕಾಂಗ್ರೆಸ್ ಗ್ಯಾರಂಟಿಗಳ ಪೂರೈಕೆಗಾಗಿ ಬಜೆಟ್ ನ ಗಾತ್ರವನ್ನು 18,565 ಕೋಟಿ ರೂ ಹೆಚ್ಚಳ ಮಾಡಲಾಗಿದೆ. ಈ ಬಾರಿ 3,27,747 ಕೋಟಿ ರೂ ಗಾತ್ರದ ಬಜೆಟ್ ಮಂಡನೆಯಾಗಿದೆ. ಬಜೆಟ್‌ನಲ್ಲಿ ಪಂಚ ಗ್ಯಾರಂಟಿ ಜಾರಿಗೆ ಐದು ಇಲಾಖೆಗಳಿಗೆ ಅನುದಾನ ಹಂಚಿಕೆ ಮಾಡಲಾಗಿದೆ. ಗೃಹ ಲಕ್ಷ್ಮಿ ಯೋಜನೆ – […]

10 ಕೆ.ಜಿ ಅಕ್ಕಿ ಬದಲಿಗೆ 5 ಕೆ.ಜಿ ಅಕ್ಕಿ ಕಾಸು; ಕಾಂಗ್ರೆಸ್ ನಿಂದ ಜನತೆಗೆ ದ್ರೋಹ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ವಿಧಾನಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ’10 ಕೆ.ಜಿ. ಅಕ್ಕಿ ಫ್ರೀ… ಬೇಕಾ ಬೇಡ್ವಾ…’ ಎಂದು ಘಂಟಾಘೋಷವಾಗಿ ಸಾರಿದ್ದ ಸಿ.ಎಂ. ಸಿದ್ದರಾಮಯ್ಯನವರು ಇದೀಗ ರಾಗ ಬದಲಿಸಿ, ಸಚಿವ ಸಂಪುಟ ಸಭೆಯ ತೀರ್ಮಾನದಂತೆ 10 ಕೆ.ಜಿ. ಅಕ್ಕಿಯ ಬದಲಿಗೆ ಕೇವಲ 5 ಕೆ.ಜಿ. ಅಕ್ಕಿಯ ಮೌಲ್ಯವನ್ನು ಪ್ರತೀ ಕೆ.ಜಿ.ಗೆ ರೂ.34ರಂತೆ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡುದಾರರಿಗೆ ನೀಡುತ್ತೇವೆ ಎಂದಿರುವುದು ರಾಜ್ಯದ ಜನತೆಗೆ ಬಗೆದ ದ್ರೋಹವಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ರಾಜ್ಯದ ಜನತೆಗೆ ನೀಡುತ್ತಿರುವ ಉಚಿತ […]

ಮನೆಯೊಡತಿಯರಿಗೆ ಸದ್ಯಕ್ಕಿಲ್ಲ ಲಕ್ಷ್ಮೀ ಕಟಾಕ್ಷ: ಗೃಹಲಕ್ಷ್ಮೀ ಯೋಜನೆ ತಾತ್ಕಾಲಿಕ ಸ್ಥಗಿತ

ಬೆಂಗಳೂರು: ಅರ್ಜಿದಾರರು ಎದುರಿಸುತ್ತಿರುವ ತಾಂತ್ರಿಕ ದೋಷಗಳು ಮತ್ತು ಇತರ ಸಮಸ್ಯೆಗಳನ್ನು ಪರಿಹರಿಸಲು ಗೃಹಲಕ್ಷ್ಮಿ ಯೋಜನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವುದಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಘೋಷಿಸಿದ್ದಾರೆ. ಗೃಹ ಲಕ್ಷ್ಮಿ ಯೋಜನೆಯು ಕಾಂಗ್ರೆಸ್ ಪಕ್ಷದ ಚುನಾವಣಾ ಖಾತರಿಗಳಲ್ಲಿ ಒಂದಾಗಿದ್ದು, ಇದು ರಾಜ್ಯಾದ್ಯಂತ ಕುಟುಂಬದ ಮಹಿಳಾ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ ನೀಡುವ ವಾಗ್ದಾನ ಹೊಂದಿದೆ. ಯೋಜನೆ ಅನುಷ್ಠಾನಕ್ಕೆ ವಿರಾಮ ನೀಡುವ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಸಮಾಲೋಚನೆ ನಡೆಸಿದ್ದೇನೆ ಎಂದು ಶಿವಕುಮಾರ್ ಹೇಳಿದ್ದಾರೆ. ಪ್ರಕ್ರಿಯೆಯನ್ನು ಸರಳಗೊಳಿಸುವ ಮತ್ತು ಭ್ರಷ್ಟಾಚಾರ ಮುಕ್ತ ವಾತಾವರಣವನ್ನು […]

ಅಧಿಕಾರಕ್ಕೆ ಬರುತ್ತಲೇ ಜನರಿಗೆ ಬೆಲೆಯೇರಿಕೆಯ ಬರೆ ಹಾಕಿದ ಕಾಂಗ್ರೆಸ್: ಸಿ.ಟಿ.ರವಿ

ಉಡುಪಿ: ಅಧಿಕಾರದಲ್ಲಿರುವ ಕಾಂಗ್ರೆಸ್ ಬೆಲೆ ಏರಿಕೆಯ ಮೂಲಕ ಜನತೆಗೆ ಮೋಸ ಮಾಡಿದೆ. ಸದ್ದಿಲ್ಲದೆ ಬೆಲೆ ಏರಿಕೆಗೆ ಮುಂದಾಗಿರುವ ಸರ್ಕಾರ ವಿದ್ಯುತ್ ಹಾಗೂ ಮದ್ಯದ ದರ ಹೆಚ್ಚಿಸಿದೆ. ಮುಂದೆ ನೋಂದಣಿ ಶುಲ್ಕ ಹೆಚ್ಚಿಸಲು ಸಿದ್ಧತೆ ಮಾಡಿಕೊಂಡಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದರು. ಗುರುವಾರ ಹೋಟೆಲ್ ಕಿದಿಯೂರು ಶೇಷಶಯನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದರು. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಅನ್ನಭಾಗ್ಯ ಯೋಜನೆ ಕೊಟ್ಟಿದ್ದು ನಾನೇ ಎಂದು ಹೇಳಿಕೊಳ್ಳುತ್ತಿದ್ದರು. ಈಗ ಕೇಂದ್ರ ಸರ್ಕಾರ […]