ಗೃಹ-ಲಕ್ಷ್ಮಿ ಯೋಜನೆ: ಹಣ ಪಡೆಯಲು ಅತ್ತೆಗೆ ಅರ್ಹತೆ

ಬೆಳಗಾವಿ: ಕಾಂಗ್ರೆಸ್ ಪಕ್ಷವು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಗೃಹ ಲಕ್ಷ್ಮೀ ಯೋಜನೆಯನ್ನು ಘೋಷಿಸಿದ್ದು, ಪ್ರತಿ ಕುಟುಂಬದ ಮನೆಯ ಯಜಮಾನಿಗೆ ಪ್ರತೀ ತಿಂಗಳು 2000 ರೂ ನೀಡುವ ಭರವಸೆ ನೀಡಿತ್ತು. ಆದರೆ ಇದೀಗ ಈ ಯೋಜನೆಯನ್ವಯ 2000 ರೂ ಪಡೆಯಲು ಅತ್ತೆ-ಸೊಸೆಯರಲ್ಲಿ ತಿಕ್ಕಾಟ ನಡೆಯುತ್ತಿರುವ ಪ್ರಸಂಗಗಳು ವರದಿಯಾಗುತ್ತಿವೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಪ್ರಣಾಳಿಕೆಯಲ್ಲಿ ಸ್ಪಷ್ಟತೆಯ ಕೊರತೆ ಇದ್ದು, ಕುಟುಂಬದ ಯಜಮಾನಿಯಾದ ಮಹಿಳೆಗೆ ಮಾತ್ರ ಪ್ರತೀ ತಿಂಗಳು 2000 ರೂ ನೀಡುವ ಬಗ್ಗೆ ಭರವಸೆ ನೀಡಲಾಗಿತ್ತು. […]
ಬಿಜೆಪಿ ನಾಯಕರು ನಿದ್ದೆಯ ಮಂಪರಿನಲ್ಲೂ ಕಾಂಗ್ರೆಸ್ ಪಕ್ಷದ ಗ್ಯಾರಂಟಿಯ ಬಗ್ಗೆ ಕನವರಿಸುತ್ತಿದ್ದಾರೆ: ರಮೇಶ್ ಕಾಂಚನ್

ಉಡುಪಿ: ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿದಂತಹ ಮತದಾರರೆ ಕಾಂಗ್ರೆಸ್ ಪಕ್ಷವು ಪ್ರಣಾಳಿಕೆಯಲ್ಲಿ ನೀಡಿದ ಗ್ಯಾರಂಟಿಯ ಬಗ್ಗೆ ಮಾತನಾಡುತ್ತಿಲ್ಲ, ಏಕೆಂದರೆ ಅವರಿಗೆ ಕಾಂಗ್ರೆಸ್ ಪಕ್ಷವು ನೀಡಿದ ಭರವಸೆ ಹಾಗೂ ಗ್ಯಾರಂಟಿಯನ್ನು ಖಂಡಿತವಾಗಿಯೂ ನೀಡುತ್ತಾರೆ ಎಂಬ ನಂಬಿಕೆ ಇದೆ. ಆದರೆ ಈ ಲಂಚಕೋರ ಹಾಗೂ ಸುಳ್ಳುಗಳ ಭರವಸೆಯನ್ನು ನೀಡಿದಂತಹ ಬಿಜೆಪಿಯವರಿಗೆ ಕಾಂಗ್ರೆಸ್ ಪಕ್ಷ ನೀಡಿದ ಗ್ಯಾರಂಟಿಯ ಬಗ್ಗೆ ಯೋಚನೆ ಯಾಗಿದೆ. ನಾವು ಈ ಗ್ಯಾರಂಟಿಯನ್ನು ಅನುಷ್ಠಾನಕ್ಕೆ ತಂದಾಗ ರಾಜ್ಯದಲ್ಲಿ ಬಿಜೆಪಿ ಕಣ್ಮರೆಯಾಗೋದು ಸಹಜ ಅದಕ್ಕಾಗಿ ಈ ಬಿಜೆಪಿ ನಾಯಕರುಗಳು ನಿದ್ದೆಯಲ್ಲಿ ಕೂಡ […]
ಕಾಂಗ್ರೆಸ್ ಗ್ಯಾರಂಟಿ ಜಾರಿಗೊಳಿಸಲು ಮೋಸದ ತಂತ್ರ ಅನುಸರಿಸಿದಲ್ಲಿ ಹೋರಾಟ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ 5 ಉಚಿತಗಳ ಗ್ಯಾರಂಟಿಯನ್ನು ಜಾರಿಗೊಳಿಸುತ್ತೇವೆ ಎಂದು ಪುಂಗಿ ಊದಿದ್ದ ಕಾಂಗ್ರೆಸ್ ಮುಖಂಡರು ಇದೀಗ ಉಲ್ಟಾ ಹೊಡೆದು ಜನತೆಗೆ ನೀಡಿದ ಗ್ಯಾರಂಟಿಗಳನ್ನು ಯಥಾವತ್ತಾಗಿ ಜಾರಿಗೊಳಿಸಲು ಹಿಂದೇಟು ಹಾಕುತ್ತಿರುವುದು ಹಾಸ್ಯಾಸ್ಪದ. ಜನರ ತೆರಿಗೆ ಹಣದಿಂದ ಬೇಕಾಬಿಟ್ಟಿ ಉಚಿತಗಳ ಗ್ಯಾರಂಟಿ ಘೋಷಿಸಿ, ಅಧಿಕಾರಕ್ಕೆ ಬಂದು, ಮಾತೆತ್ತಿದರೆ ಉಡಾಫೆ ಉತ್ತರ ನೀಡುವ ಕಾಂಗ್ರೆಸಿಗರಿಗೆ ಜನತೆ ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹರಿಹಾಯ್ದಿದ್ದಾರೆ. ಬಿಜೆಪಿ ಚುನಾವಣಾ […]
ಆದಾಯ ತೆರಿಗೆ ಪಾವತಿಸುವವರಿಗೆ, ಸರ್ಕಾರಿ ನೌಕರರಿಗಿಲ್ಲ ಕಾಂಗ್ರೆಸ್ ಗ್ಯಾರಂಟಿ: ಸತೀಶ್ ಜಾರಕಿಹೊಳಿ

ಬೆಳಗಾವಿ: ಚುನಾವಣೆಗೂ ಮುನ್ನ ಕಾಂಗ್ರೆಸ್ ಘೋಷಿಸಿದ್ದ ಗ್ಯಾರಂಟಿ ಯೋಜನೆಗಳಿಗೆ ಷರತ್ತುಗಳು ಅನ್ವಯವಾಗಲಿದ್ದು, ಎಲ್ಲರಿಗೂ ಗ್ಯಾರಂಟಿ ಯೋಜನೆ ಕೊಡಲು ಆಗುವುದಿಲ್ಲ. ನಿರ್ಗತಿಕರು ಹಾಗೂ ಬಡವರನ್ನು ಗುರುತಿಸಿ ಯೋಜನೆ ತಲುಪಿಸುತ್ತೇವೆ. ಗ್ಯಾರಂಟಿ ಯೋಜನೆ ಜಾರಿ ಸ್ವಲ್ಪ ವಿಳಂಬವಾಗಬಹುದು. ಆದರೆ ಕೊಟ್ಟ ಭರವಸೆ ಈಡೇರಿಸಲು ಸರ್ಕಾರ ಬದ್ಧವಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಭಾನುವಾರದಂದು ಕಿತ್ತೂರು ತಾಲೂಕಿನ ಬೈಲೂರು ನಿಷ್ಕಲಮಂಟಪ ಮಠದಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಚುನಾವಣೆ ಸಮಯದಲ್ಲಿ ಮನೆ ಮನೆಗೆ ಗ್ಯಾರಂಟಿ ಕಾರ್ಡ್ ಎಸೆದ ಹಾಗೆ ಎಲ್ಲರಿಗೂ ಗ್ಯಾರಂಟಿ […]
ಕಾಂಗ್ರೆಸ್ ಗ್ಯಾರಂಟಿ ಜಾರಿ ವಿಳಂಬ: ಜಿಲ್ಲಾ ಬಿಜೆಪಿ ಖಂಡನೆ

ಉಡುಪಿ: ಕಾಂಗ್ರೆಸ್ ಪಕ್ಷ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಜನತೆಗೆ ನೀಡಿದ 5 ಗ್ಯಾರಂಟಿ ಕಾರ್ಡ್ ಗಳ ಭರವಸೆಯನ್ನು ಸರಕಾರ ಅಸ್ತಿತ್ವಕ್ಕೆ ಬಂದು 1 ವಾರ ಕಳೆದರೂ ಜಾರಿ ಮಾಡದೇ ಇರುವುದನ್ನು ಜಿಲ್ಲಾ ಬಿಜೆಪಿ ಖಂಡಿಸಿದೆ. ಶನಿವಾರದಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಕಛೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಕಾಂಗ್ರೆಸ್ ನಡೆಯನ್ನು ಖಂಡಿಸಿದರು ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಸಹ ವಕ್ತಾರ ಶಿವಕುಮಾರ್ […]