ಕಾಂಗ್ರೆಸ್ ಮುಳುಗುತ್ತಿರುವ ಹಡಗು, ಅಸ್ಥಿತ್ವಕ್ಕಾಗಿ ಪರದಾಡುತ್ತಿದೆ: ಬಿ.ಸಿ. ಪಾಟೀಲ್

ಹಾವೇರಿ: ಕಾಂಗ್ರೆಸ್ ನಲ್ಲಿ ಏನು ಉಳಿದಿಲ್ಲ, ಅದೊಂದು ಮುಳುಗುತ್ತಿರುವ ಹಡಗು. ತನ್ನ ಅಸ್ಥಿತ್ವವನ್ನು ಉಳಿಸಿಕೊಳ್ಳಲು ಪರದಾಡುತ್ತಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು. ಹಾವೇರಿಯ ಹೀರೆಕೆರೂರು ಪಟ್ಟಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದದರು. ಕಾಂಗ್ರೆಸ್ 2019ರ ಚುನಾವಣಾ ಪ್ರಣಾಳಿಕೆಯಲ್ಲಿ ಎಪಿಎಂಸಿ ಕಾಯ್ದೆಯ ತಿದ್ದುಪಡಿಯನ್ನು ಉಲ್ಲೇಖಿಸಿತ್ತು. ಆದರೆ ಈಗ ಕಾಂಗ್ರೆಸ್ ಪರಿಸ್ಥಿತಿ ಹೇಳುವುದೊಂದು ಮಾಡುವುದು ಇನ್ನೊಂದು ಆಗಿದೆ ಎಂದು ಕುಟುಕಿದರು. ಕಾಂಗ್ರೆಸ್ಸಿಗರು ರಾಜಕೀಯ ದುರುದ್ದೇಶಕ್ಕಾಗಿ ಈಗ ಕಾಯ್ದೆಗಳನ್ನು ವಿರೋಧಿಸುತ್ತಿದೆ. ಕಾಂಗ್ರೆಸ್ ಮಾಡುತ್ತಿರುವುದು ನಿಜಕ್ಕೂ ಒಳ್ಳೆಯ ಬೆಳವಣಿಗೆಯಲ್ಲ ಎಂದು ಕಿಡಿಕಾರಿದರು.