ಶಾಂತಿ ಕದಡಿದರೆ ಭಜರಂಗದಳ ಮತ್ತು ಆರ್‌ಎಸ್‌ಎಸ್‌ ನಿಷೇಧ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ರಾಜ್ಯದಲ್ಲಿ ಶಾಂತಿ ಕದಡಿದರೆ ಭಜರಂಗದಳ ಮತ್ತು ಆರ್‌ಎಸ್‌ಎಸ್‌ನಂತಹ ಸಂಘಟನೆಗಳನ್ನು ತಮ್ಮ ಸರ್ಕಾರ ನಿಷೇಧಿಸಲಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ಬುಧವಾರ ಹೇಳಿದ್ದಾರೆ. ಇಲ್ಲಿ ಸುದ್ದಿಗಾರರೊಂದಿಗೆ ಸಂವಾದ ನಡೆಸಿದ ಖರ್ಗೆ, ‘ಬಿಜೆಪಿಗೆ ಕಷ್ಟವಾದರೆ ಪಾಕಿಸ್ತಾನಕ್ಕೆ ಹೋಗಲಿ’ ಎಂದು ಹೇಳಿದರು. ಕರ್ನಾಟಕವನ್ನು ಸ್ವರ್ಗವನ್ನಾಗಿ ಮಾಡುತ್ತೇವೆ ಎಂದು ಭರವಸೆ ನೀಡಿದ್ದೇವೆ, ಶಾಂತಿ ಕದಡಿದರೆ ಅದು ಭಜರಂಗದಳ ಅಥವಾ ಆರ್‌ಎಸ್‌ಎಸ್ ಎಂದು ಪರಿಗಣಿಸುವುದಿಲ್ಲ, ಕಾನೂನು ಕೈಗೆತ್ತಿಕೊಂಡಾಗ ಬಜರಂಗದಳ, ಆರ್‌ಎಸ್‌ಎಸ್ ಸೇರಿದಂತೆ ಯಾವುದೇ ಸಂಘಟನೆಗೆ ನಿಷೇಧ ಹೇರಲಾಗುವುದು ಎಂದು […]

ಹಿರಿಯ ನಾಯಕರಿಗೆ ಬೇಡವಾದ ಗೃಹ ಖಾತೆ; ನೀರಾವರಿ, ವಿದ್ಯುತ್ ಮತ್ತು ಕಂದಾಯ ಖಾತೆಗಳಿಗೆ ಬಹು ಬೇಡಿಕೆ

ಬೆಂಗಳೂರು: ಸಿಎಂ ಹುದ್ದೆ ಬಳಿಕ ಎರಡನೇ ಶಕ್ತಿಯುತ ಸ್ಥಾನ ಎಂದು ಪರಿಗಣಿಸಲ್ಪಡುವ ಗೃಹ ಖಾತೆ ಪಡೆಯಲು ಯಾವ ಹಿರಿಯ ನಾಯಕರೂ ಮುಂದೆ ಬರುತ್ತಿಲ್ಲ ಎಂದು ವರದಿಯಾಗಿದೆ. ಯಾವುದೇ ಹಿರಿಯ ನಾಯಕರು ಪೊಲೀಸ್ ಇಲಾಖೆಯನ್ನು ನಿಭಾಯಿಸಲು ಉತ್ಸುಕರಾಗಿಲ್ಲ, ಆದರೆ ನೀರಾವರಿ, ವಿದ್ಯುತ್ ಮತ್ತು ಕಂದಾಯದಂತಹ ಖಾತೆಗಳಿಗೆ ಹೆಚ್ಚಿನ ಬೇಡಿಕೆಯಿದೆ. ರಾಜ್ಯದಲ್ಲಿ ಸೌಹಾರ್ದತೆ ಕದಡುವವರ ವಿರುದ್ಧ ಕಡಿವಾಣ ಹಾಕುವಂತೆ ಕರ್ನಾಟಕದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಪೊಲೀಸ್ ಇಲಾಖೆಗೆ ಸೂಚಿಸಿದ್ದರೂ, ಗೃಹ ಇಲಾಖೆ ಹುದ್ದೆ ವಹಿಸುವವರಿಲ್ಲದೆ ಉಳಿದುಕೊಂಡಿದೆ ಎಂದು ವಿಷಯದ ಬಗ್ಗೆ […]

ಮುಂಬರುವ ತಾ.ಪಂ ಹಾಗೂ ಜಿ.ಪಂ. ಚುನಾವಣೆಗೆ ಇಂದಿನಿಂದಲೇ ಸಿದ್ದತೆ: ಉದಯ್ ಕುಮಾರ್ ಶೆಟ್ಟಿ

ಕಾರ್ಕಳ: ಮುಂಬರುವ ತಾ.ಪಂ ಹಾಗೂ ಜಿ.ಪಂ. ಚುನಾವಣೆಗೆ ನಾವು ಇಂದಿನಿಂದಲೇ ಸಿದ್ದತೆ ನಡೆಸಬೇಕಿದೆ. ಗೆಲುವಿವಾಗಿ ಪ್ರತಿ ಬೂತ್ ನ ಕಾರ್ಯಕರ್ತರು ಟೀಂ ಆಗಿ ಕಾರ್ಯನಿರ್ವಹಿಸಬೇಕಿದೆ ಎಂದು ಉದಯ ಶೆಟ್ಟಿ ಮುನಿಯಾಲು ತಿಳಿಸಿದರು. ರಾಜ್ಯದಲ್ಲಿ ಕಾಂಗ್ರೆಸ್‌ಗೆ ಬಹುಮತ ದೊರೆತ ಹಿನ್ನೆಲೆಯಲ್ಲಿ ಮೇ 22ರಂದು ಕಾರ್ಕಳದಲ್ಲಿ ನಡೆದ ವಿಜಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ರಾಜ್ಯದ ಮತದಾರರು ಸ್ಪಷ್ಟ ಬಹುಮತದೊಂದಿಗೆ ಸುಭದ್ರ ಸರಕಾರ ರಚಿಸುವಲ್ಲಿ ಬೆಂಬಲ ನೀಡಿದ್ದಾರೆ. ಕಾರ್ಕಳದಲ್ಲೂ ಕಾಂಗ್ರೆಸ್‌ ಗೆಲುವಿಗಾಗಿ ಕಾರ್ಯಕರ್ತರು ರಾತ್ರಿ ಹಗಲೆನ್ನದೆ ದುಡಿದಿದ್ದಾರೆ. ಅವರ ಶ್ರಮ ನಮ್ಮ ಮನಸ್ಸಿನಲ್ಲಿದೆ […]

ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಿದ್ದರಾಮಯ್ಯ

ಬೆಂಗಳೂರು: ಶ್ರೀಕಂಠೀರವ ಕ್ರೀಡಾಂಗಣದಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಜಿ ಪರಮೇಶ್ವರ, ಕೆ ಎಚ್ ಮುನಿಯಪ್ಪ, ಕೆ ಜೆ ಜಾರ್ಜ್, ಎಂ ಬಿ ಪಾಟೀಲ್, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ರಾಮಲಿಂಗಾ ರೆಡ್ಡಿ, ಜಮೀರ್ ಅಹಮದ್ ಖಾನ್ ಸೇರಿದಂತೆ ಕಾಂಗ್ರೆಸ್ ಶಾಸಕರು ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, […]

ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರದಂದೇ 28 ಶಾಸಕರು ಸಚಿವರಾಗಿ ಪದಗ್ರಹಣ ಸಾಧ್ಯತೆ ?

ಬೆಂಗಳೂರು: ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯಾಗಿ, ಡಿ.ಕೆ.ಶಿವಕುಮಾರ್‌ ಅವರನ್ನು ಉಪಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಹೈಕಮಾಂಡ್​ ಘೋಷಣೆ ಮಾಡಿದ್ದು, ನಾಳೆ (ಮೇ 20) ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಪದಗ್ರಹಣ ಸಮಾರಂಭ ನಡೆಯಲಿದೆ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಜೊತೆಗೆ ಕೆಲವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ. ಸಿಎಂ ಆಯ್ಕೆ ಸರ್ಕಸ್ ಬಳಿಕ ಕೈ ಪಾಳಯದಲ್ಲಿ ಸಚಿವ ಸಂಪುಟ ಕಸರತ್ತು ಶುರುವಾಗಿದ್ದು, ಹಲವು ಶಾಸಕರು ನೂತನ ಸಚಿವ ಸಂಪುಟ ಸೇರುವ ಆಶಯ ವ್ಯಕ್ತಪಡಿಸಿದ್ದಾರೆ. ಎಲ್ಲರೂ ತಮ್ಮ ಜಿಲ್ಲೆ, ತಮ್ಮ ಜಾತಿಗೆ ಹೆಚ್ಚು ಸಚಿವ […]