ಕಾಂಗ್ರೆಸ್ ಪಕ್ಷದ ನಾಯಕರಿಂದ ಮತಚಲಾವಣೆ

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಪಕ್ಷಾಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮತಚಲಾಯಿಸಿದರು. #WATCH | Former Karnataka CM and Congress candidate from Varuna constituency, Siddaramaiah casts his vote for #KarnatakaElection pic.twitter.com/SPjUIzCOcF — ANI (@ANI) May 10, 2023 ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪುತ್ರ ಪ್ರಿಯಾಂಕ್ ಖರ್ಗೆ ಕೂಡಾ ತಮ್ಮ ಮತಚಲಾಯಿಸಿದರು. #WATCH | #KarnatakaElections | Congress national president Mallikarjun […]
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹೇಳಿಕೆ ವಿರುದ್ದ ಚುನಾವಣಾ ಆಯೋಗಕ್ಕೆ ದೂರು ನೀಡಿದ ಭಾರತೀಯ ಜನತಾ ಪಕ್ಷ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಭಾರೀ ರಾಜಕೀಯ ಬಿರುಗಾಳಿ ಎಬ್ಬಿಸಿರುವ ‘ಕರ್ನಾಟಕದ ಸಾರ್ವಭೌಮತ್ವ’ ಕುರಿತು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರು ನೀಡಿದ ಹೇಳಿಕೆ ವಿರುದ್ಧ ಭಾರತೀಯ ಜನತಾ ಪಕ್ಷ ಸೋಮವಾರ ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ. ಶನಿವಾರದಂದು ಸೋನಿಯಾ ಗಾಂಧಿ ಅವರು ಕರ್ನಾಟಕದ ಹುಬ್ಬಳ್ಳಿ ಜಿಲ್ಲೆಯಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ್ದರು. ಕಾಂಗ್ರೆಸ್ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್ ಪೋಸ್ಟ್ ಈ ಬಗ್ಗೆ ಪೋಸ್ಟ್ ಮಾಡಿ, “ಸಿಪಿಪಿ ಅಧ್ಯಕ್ಷೆ ಶ್ರೀಮತಿ ಸೋನಿಯಾ ಗಾಂಧಿ ಜಿ 6.5 ಕೋಟಿ ಕನ್ನಡಿಗರಿಗೆ […]
ಬಂಟ್ವಾಳದ ಸಮಗ್ರ ಅಭಿವೃದ್ದಿಗಾಗಿ ರಮಾನಾಥ್ ರೈ ಅವರನ್ನು ಗೆಲ್ಲಿಸೋಣ: ಜಯಂತಿ ಪೂಜಾರಿ

ಬಂಟ್ವಾಳ: ಮಹಿಳೆಯರಿಗೆ ಸುರಕ್ಷಿತ, ಸುಭದ್ರ ಮತ್ತು ಸಮೃದ್ಧಿದಾಯಕ ಪ್ರಣಾಳಿಕೆಯನ್ನು ಕಾಂಗ್ರೆಸ್ ಘೋಷಿಸಿದ್ದು, ಇಂತಹ ದೂರದೃಷ್ಟಿಯುಳ್ಳ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ನೀಡುವ ಮೂಲಕ ರಾಜ್ಯದಲ್ಲಿ ಸುಸ್ಥಿರ ಸರಕಾರ ರಚಿಸಲು ನೆರವಾಗುವಂತೆ ಬಂಟ್ವಾಳ ಕಾಂಗ್ರೆಸ್ ಮಹಿಳಾ ವಿಭಾಗದ ಅಧ್ಯಕ್ಷೆ ಜಯಂತಿ ವಿ. ಪೂಜಾರಿ ಮನವಿ ಮಾಡಿದರು. ಬಂಟ್ವಾಳ ಕಾಂಗ್ರೆಸ್ ಚುನಾವಣಾ ಪ್ರಚಾರ ಕಚೇರಿಯಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಐದು ಪ್ರಮುಖ ಗ್ಯಾರಂಟಿಗಳನ್ನು ಘೋಷಿಸಿದೆ. ಬೆಲೆ ಏರಿಕೆ ಗಗನಕ್ಕೇರಿರುವ ಇಂತಹ ಸಂದರ್ಭದಲ್ಲಿ ಮನೆ ನಿರ್ವಹಿಸಲು ಮಹಿಳೆಯರಿಗೆ ಅನುಕೂಲವಾಗುವಂತಹ ಗ್ಯಾರಂಟಿಗಳನ್ನು ಘೋಷಿಸಲಾಗಿದೆ. […]
ನನ್ನ ಆಡಳಿತಾವಧಿಯಲ್ಲಿ ಕ್ಷೇತ್ರದಲ್ಲಿ ಅತಿ ಹೆಚ್ಚು ಅಭಿವೃದ್ದಿ ಕಾರ್ಯ: ರಮಾನಾಥ ರೈ

ಬಂಟ್ವಾಳ : ಸಚಿವನಾಗಿದ್ದ ಅವಧಿಯಲ್ಲಿ ಕ್ಷೇತ್ರಕ್ಕೆ 5000 ಕೋಟಿಗೂ ಅಧಿಕ ಅನುದಾನ ತಂದು ಕ್ಷೇತ್ರದಾದ್ಯಂತ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ. ಬಂಟ್ವಾಳದಲ್ಲಿ ಏನಾದರೂ ಸರಕಾರಿ ಯೋಜನೆಗಳು ಕಾರ್ಯಗತವಾಗಿದ್ದರೆ ಅದು ನನ್ನ ಅವಧಿಯಲ್ಲಿ ಜಾರಿಯಾಗಿರುವಂತದ್ದು. ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನನ್ನ ಅವಧಿಯಲ್ಲಾಗಿದ್ದರೂ, ಅಪಪ್ರಚಾರದಿಂದ ನನ್ನನ್ನು ಸೋಲಿಸಲಾಗಿದೆ. ಸೋತ ಬಗ್ಗೆ ಬೇಸರವಿಲ್ಲ, ಅಪಪ್ರಚಾರ, ಸುಳ್ಳು, ವದಂತಿಗಳನ್ನು ಹರಡುವ ಮೂಲಕ, ವೈಯಕ್ತಿಕ ತೇಜೋವಧೆಯ ಮೂಲಕ ಸೋಲಿಸಿದ ವಿಧಾನದ ಬಗ್ಗೆ ನನಗೆ ಬೇಸರವಿದೆ. ಬಿಜೆಪಿಯ ಇಂತಹ ಕೃತ್ಯಗಳ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತರು ಗಮನವಿಟ್ಟು ಕೆಲಸ […]
ಬೆಳ್ತಂಗಡಿ: ಮಿತ್ತಬಾಗಿಲು, ಮಲವಂತಿಗೆ ಮತ್ತು ಕಡಿರುದ್ಯಾವರ ಭಾಗದ ಕಾಂಗ್ರೆಸ್ ನಾಯಕರು ಬಿಜೆಪಿ ಸೇರ್ಪಡೆ

ಬೆಳ್ತಂಗಡಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹಾಗೂ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ಅವರ ಸಮ್ಮುಖದಲ್ಲಿ ಮೇ.5 ರಂದು ಮಿತ್ತಬಾಗಿಲು, ಮಲವಂತಿಗೆ ಮತ್ತು ಕಡಿರುದ್ಯಾವರ ಭಾಗದ ಕಾಂಗ್ರೆಸ್ ನಾಯಕರು ಬಿಜೆಪಿಗೆ ಸೇರ್ಪಡೆಗೊಂಡರು. ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದ ಸೆಬಾಸ್ಟಿನ್ ಮಿತ್ತಬಾಗಿಲು, ಬಾಲಕೃಷ್ಣ ಗೌಡ ಮಲವಂತಿಗೆ, ಪೂವಪ್ಪ ಪೂಜಾರಿ ಮಲವಂತಿಗೆ, ವನಿತಾ ಕಡಿರುದ್ಯಾವರ, ಬಾಲಕೃಷ್ಣ ಗೌಡ ಉದ್ದಾರೆ ಅವರನ್ನು ಪಕ್ಷದ ಧ್ವಜ ನೀಡುವ ಮೂಲಕ ಶಾಸಕ ಹರೀಶ್ ಪೂಂಜ ಅವರು ಬಿಜೆಪಿಗೆ ಬರಮಾಡಿಕೊಂಡರು.