ಕೇಂದ್ರ ಸರಕಾರದ 5 ಕೆ.ಜಿ ಜೊತೆಗೆ ಗ್ಯಾರಂಟಿಯ 10 ಕೆ.ಜಿ. ಅಕ್ಕಿ ವಿತರಿಸಿ ಕಾಂಗ್ರೆಸ್ ಪೌರುಷ ತೋರಿಸಲಿ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಚುನಾವಣೆಯ ಸಂದರ್ಭದಲ್ಲಿ ಪೂರ್ವಾಪರ ಆಲೋಚಿಸದೆ ಬೇಕಾಬಿಟ್ಟಿಯಾಗಿ 5 ಉಚಿತ ಗ್ಯಾರಂಟಿಗಳನ್ನು ಘೋಷಿಸಿ, ತಮ್ಮ ವಾಗ್ದಾನದಂತೆ 24 ಗಂಟೆಗಳಲ್ಲಿ ಜಾರಿಗೊಳಿಸದೆ ರಾಜ್ಯದ ಜನತೆಯನ್ನು ಯಾಮಾರಿಸಿರುವ ಕಾಂಗ್ರೆಸ್ ಇದೀಗ ಕೇಂದ್ರ ಸರಕಾರದ ಮೇಲೆ ಗೂಬೆ ಕೂರಿಸುವ ಪ್ರಯತ್ನದ ಬದಲು ಕೇಂದ್ರ ಸರಕಾರ ರಾಜ್ಯಕ್ಕೆ ನೀಡುತ್ತಿರುವ ಉಚಿತ 5 ಕೆ.ಜಿ. ಅಕ್ಕಿಯನ್ನು ಹೊರತುಪಡಿಸಿ, ತಮ್ಮ ಗ್ಯಾರಂಟಿಯ 10 ಕೆ.ಜಿ. ಅಕ್ಕಿಯನ್ನು ಖರೀದಿಸಿ ಪ್ರತ್ಯೇಕವಾಗಿ ವಿತರಿಸಿ ಪೌರುಷ ತೋರಿಸಲಿ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ರಾಷ್ಟ್ರೀಯ […]

ಮಂಗಳೂರು: ಅನ್ನಭಾಗ್ಯಕ್ಕೆ ಅಕ್ಕಿ ನಿರಾಕರಣೆ ಆರೋಪಿಸಿ ಮಂಗಳೂರಿನಲ್ಲಿ ಅನ್ನದ ತಟ್ಟೆ ಹಿಡಿದು ಕಾಂಗ್ರೆಸ್ ಪ್ರತಿಭಟನೆ

ಮಂಗಳೂರು: ಮಂಗಳವಾರ ಮಂಗಳೂರಿನ ಮಿನಿ ವಿಧಾನಸೌಧದ ಎದುರು ‘10 ಕೆಜಿ ಉಚಿತ ಅಕ್ಕಿ’ ಅನ್ನಭಾಗ್ಯ ಯೋಜನೆಗಾಗಿ ಕರ್ನಾಟಕಕ್ಕೆ ಅಕ್ಕಿ ನಿರಾಕರಿಸುತ್ತಿರುವ ಕೇಂದ್ರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಅಕ್ಕಿ ತಟ್ಟೆ ಹಿಡಿದು ಪ್ರತಿಭಟನೆ ನಡೆಸಿದರು. ಭಾರತೀಯ ಆಹಾರ ನಿಗಮವು (ಎಫ್‌ಸಿಐ) ಬಿಪಿಎಲ್ ಕಾರ್ಡ್‌ದಾರರಿಗೆ 10 ಕೆಜಿ ಉಚಿತ ಅಕ್ಕಿಯನ್ನು ಪೂರೈಸುವ ತನ್ನ ಪ್ರಮುಖ ಕಾರ್ಯಕ್ರಮಕ್ಕೆ ಹೆಚ್ಚುವರಿ ಅಕ್ಕಿಗಾಗಿ ರಾಜ್ಯದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದೆ. ಆದರೆ, ಬಳಿಕ ಕೇಂದ್ರದ ಒತ್ತಡಕ್ಕೆ ಮಣಿದು ಹೆಚ್ಚುವರಿ ಅಕ್ಕಿ ನೀಡಲು ನಿರಾಕರಿಸಿದೆ ಎಂದು ಪ್ರತಿಭಟನಾಕಾರರು […]

ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ನೀಡಲು ಒಪ್ಪದ ಕೇಂದ್ರ ಸರಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಉಡುಪಿ: ಕಾಂಗ್ರೆಸ್ ಪಕ್ಷದ ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ನೀಡುವ ನಿರ್ಧಾರದಿಂದ ಹಿಂದೆ ಸರಿದು ಬಡವರ ಅನ್ನ ಕಿತ್ತುಕೊಳ್ಳಲು ಹೊರಟಿರುವ ಕೇಂದ್ರ ಬಿಜೆಪಿ ಸರಕಾರದ ವಿರುದ್ಧ ಉಡುಪಿ ಜಿಲ್ಲಾ‌ ಕಾಂಗ್ರೆಸ್ ನೇತೃತ್ವದಲ್ಲಿ ಉಡುಪಿ ಬ್ರಹ್ಮಗಿರಿ ಸರ್ಕಲ್ ನಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು. ನೂರಾರು ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ಭವನದಿಂದ ಮೆರವಣಿಗೆಯಲ್ಲಿ ಹೊರಟು ಬ್ರಹ್ಮಗಿರಿ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಿದರು. ಕೇಂದ್ರ ಸರಕಾರದ ವಿರುದ್ಧ ಧಿಕ್ಕಾರ ಕೂಗಿದರು‌. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ವಿನಯಕುಮಾರ್ ಸೊರಕೆ, ಕೇಂದ್ರ […]

ಮತಾಂತರ ಮತ್ತು ಗೋಹತ್ಯಾ ನಿಷೇಧ ಕಾಯ್ದೆ ವಾಪಸ್ ಪಡೆಯುವುದು ಅತ್ಯಂತ ಕಳವಳಕಾರಿ: ಪೇಜಾವರ ಶ್ರೀ

ಉಡುಪಿ: ಹಿಂದಿನ ಸರ್ಕಾರವು ಸಮಾಜದಲ್ಲಿ ಏರ್ಪಟ್ಟಿದ್ದ ಗೊಂದಲ ಪರಿಹಾರಕ್ಕಾಗಿ ಮತಾಂತರ ನಿಷೇಧ ಕಾಯ್ದೆ ಮತ್ತು ಗೋ ಹತ್ಯಾ ನಿಷೇಧ ಕಾಯ್ದೆಯನ್ನು ಜಾರಿಗೆ ತಂದಿತ್ತು. ಪ್ರಸ್ತುತ ಸರ್ಕಾರವು ಈ ಎರಡೂ ಕಾಯ್ದೆಯನ್ನು ಹಿಂಪಡೆಯುವ ನಿರ್ಧಾರ ಮಾಡಿದ್ದು ಇದು ಅತ್ಯಂತ ಕಳವಳಕಾರಿ ವಿಚಾರ. ರಾಜ್ಯ ಸರ್ಕಾರವು ಮತಾಂತರ ನಿಷೇಧ ಕಾಯ್ದೆ ಮತ್ತು ಗೋಹತ್ಯಾ ನಿಷೇಧ ಕಾಯ್ದೆ ಹಿಂಪಡೆಯುವ ದುಸ್ಸಾಹಸ ಮಾಡಬಾರದು ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು ಹೇಳಿದ್ದಾರೆ. ಸರ್ಕಾರವು ಕಾನೂನು ಹಿಂಪಡೆಯುವ ದುಸ್ಸಾಹಸ ಮಾಡಬಾರದು. […]

ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿ ವಾಪಸ್ ಪಡೆದ ರಾಜ್ಯ ಕಾಂಗ್ರೆಸ್ ಸರಕಾರದ ಹಿಂದೂ ವಿರೋಧಿ ನೀತಿ ಖಂಡನೀಯ: ವೀಣಾ ಎಸ್. ಶೆಟ್ಟಿ

ಉಡುಪಿ: ಸದಾ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರಕಾರ ಮತಾಂತರ ನಿಷೇಧ ಕಾಯ್ದೆಗೆ ಈ ಹಿಂದೆ ಬಿಜೆಪಿ ಸರಕಾರ ತಂದಿರುವ ತಿದ್ದುಪಡಿಯನ್ನು ವಾಪಾಸು ಪಡೆಯಲು ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡಿರುವುದು ಖಂಡನೀಯ ಎಂದು ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ತಿಳಿಸಿದ್ದಾರೆ. ಈಗಾಗಲೇ ಸಮಾಜದಲ್ಲಿ ಲವ್ ಜಿಹಾದ್ ಮತ್ತು ಆಮಿಷದ ಮುಖಾಂತರ ಮೋಸದ ಮತಾಂತರ ಅವ್ಯಾಹತವಾಗಿ ನಡೆಯುತ್ತಿದ್ದು ರಾಜ್ಯ ಕಾಂಗ್ರೆಸ್ ಸರಕಾರ ಮತಾಂತರ […]