ಕೊರೊನಾ: ಡಿಸಿಎಂ ಗೋವಿಂದ ಕಾರಜೋಳ ಪುತ್ರನ ಸ್ಥಿತಿ ಗಂಭೀರ

ಬೆಂಗಳೂರು: ಕೋವಿಡ್‌ನಿಂದ ಬಳಲುತ್ತಿರುವ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರ ಪುತ್ರ ಡಾ. ಗೋಪಾಲ್ ಕಾರಜೋಳ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಭಾನುವಾರ ಮಧ್ಯಾಹ್ನ ಹೈದರಾಬಾದ್‌ನ ಕಿಮ್ಸ್‌ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಕೋವಿಡ್‌ ದೃಢಪಟ್ಟ ಕಾರಣ ಗೋಪಾಲ್‌ ಅವರನ್ನು ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಕಳೆದ 24 ದಿನಗಳಿಂದ ವೆಂಟಿಲೇಟ್‌ರ್‌ನಲ್ಲಿದ್ದ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ. ಹೀಗಾಗಿ, ವೈದ್ಯರ ಸಲಹೆಯಂತೆ ಚೆನ್ನೈನ ಆಸ್ಪತ್ರೆಗೆ ಕರೆದೊಯ್ಯಲು ಮೊದಲು ತೀರ್ಮಾನಿಸಲಾಗಿತ್ತು. ಬಳಿಕ, ಹೈದರಾಬಾದ್‌ಗೆ ಕರೆದುಕೊಂಡು ಹೋಗಲು ತೀರ್ಮಾನಿಸಲಾಯಿತು ಎಂದು ತಿಳಿದುಬಂದಿದೆ. […]