ರಾಜ್ಯ ಬಿಜೆಪಿ ಸರ್ಕಾರಕ್ಕೆ ಕೊರೊನಾ ಹಣ ಮಾಡುವ ದಂಧೆಯಾಗಿದೆ: ಮಿಥುನ್ ರೈ ಆರೋಪ

ಉಡುಪಿ: ಕೊರೊನಾ ಜನಸಾಮಾನ್ಯರಿಗೆ ಸಂಕಷ್ಟವನ್ನು ತಂದೊಡ್ಡಿದ್ದಾರೆ. ಬಿಜೆಪಿಗೆ ಇದು ಹಣ ಮಾಡುವ ದಂಧೆಯಾಗಿದೆ ಎಂದು ದಕ್ಷಿಣ ಕನ್ನಡ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಆರೋಪಿಸಿದರು. ಇಂದು ಉಡುಪಿ ಕಾಂಗ್ರೆಸ್ ಭವನದಲ್ಲಿ ನಡೆದ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ರಾಜ್ಯ ಸರ್ಕಾರ ಕೊರೊನಾ ಪರಿಕರಣಗಳ ಖರೀದಿಯಲ್ಲಿ ದೊಡ್ಡಮಟ್ಟದ ಹಗರಣ ನಡೆಸಿದೆ. ದುಪ್ಪಟ್ಟು ಹಣಕೊಟ್ಟು ಪರಿಕರಣಗಳನ್ನು ಖರೀದಿ ಮಾಡಿದೆ ಎಂದು ದೂರಿದರು. ಸರ್ಕಾರವು ಕಾರ್ಮಿಕರಿಗೆ ಊರಿಗೆ ತೆರಳಲು ವ್ಯವಸ್ಥೆ ಮಾಡದೆ ಅನ್ಯಾಯ ಎಸಗಿದೆ. […]