ಬಜಪೆ: 5 ಲಕ್ಷ ರೂ ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಶಾಲಾ ಸಂಚಾಲಕಿ

ಬಜಪೆ: ವಿದ್ಯೆ ಕಲಿಸಿ ವಿದ್ಯಾರ್ಥಿಗಳನ್ನು ಸರಿಯಾದ ದಾರಿಯಲ್ಲಿ ನಡೆಯಲು ಪ್ರೇರಣೆ ನೀಡಬೇಕಾಗಿರುವ ವಿದ್ಯಾ ದೇಗುಲಗಳೇ ಭ್ರಷ್ಟಾಚಾರಕ್ಕೆ ಎಡೆ ಮಾಡಿದಾಗ ಸಮಾಜಕ್ಕೆ ದಾರಿ ತೋರುವವರು ಯಾರು ಎನ್ನುವ ಪ್ರಶ್ನೆ ಉದ್ಭವವಾಗುತ್ತದೆ. ಇದಕ್ಕೆ ಸಾಕ್ಷಿ ಎಂಬಂತೆ ಬಜಪೆಯ ನಿರಂಜನ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಸಂಚಾಲಕಿ ಜ್ಯೋತಿ ಪೂಜಾರಿ ಲಂಚ ಸ್ವೀಕರಿಸುವ ವೇಳೆ ಲೋಕಾಯಕ್ತ ಬಲೆಗೆ ಸಿಲುಕಿ ಬಿದ್ದಿದ್ದಾರೆ. ಈ ತಿಂಗಳ ಅಂತ್ಯಕ್ಕೆ ನಿವೃತ್ತಿಯಾಗಲಿರುವ ಮುಖ್ಯ ಶಿಕ್ಷಕಿಯ ದಾಖಲೆಗಳಿಗೆ ಸಹಿ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದು, ಶುಕ್ರವಾರದಂದು 5 ಲಕ್ಷ […]

ಮುಖ್ಯಮಂತ್ರಿ ಕಚೇರಿಯಲ್ಲಿ ಲಂಚವಿಲ್ಲದೆ ಯಾವುದೇ ಕೆಲಸ ನಡೆಯುತ್ತಿಲ್ಲ: ಎಚ್‌ಡಿ ಕುಮಾರಸ್ವಾಮಿ ಗಂಭೀರ ಆರೋಪ

ಬೆಂಗಳೂರು: ಮುಖ್ಯಮಂತ್ರಿ ಕಚೇರಿಯಲ್ಲಿ ಲಂಚವಿಲ್ಲದೆ ಯಾವುದೇ ಕೆಲಸ ನಡೆಯುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಮುಖಂಡ ಎಚ್‌ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ. ಸೋಮವಾರದಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕುಮಾರಸ್ವಾಮಿ, ಸಿಎಂ ಕಚೇರಿಯ ಸಿಬ್ಬಂದಿಗಳು ಶಾಸಕರ ಶಿಫಾರಸು ಪತ್ರಗಳನ್ನು ನಿರ್ಲಕ್ಷಿಸುತ್ತಿದ್ದಾರೆ ಮತ್ತು ಯಾವುದೇ ಕೆಲಸ ಮಾಡಲು 30 ಲಕ್ಷ ರೂ.ಗೆ ಬೇಡಿಕೆ ಇಡುತ್ತಿದ್ದಾರೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿರುವ ಬಗ್ಗೆ ಸುಳಿವು ನೀಡಿದ ಅವರು ಈ ಸರ್ಕಾರದಲ್ಲಿ ವರ್ಗಾವಣೆ ಸಿಂಡಿಕೇಟ್ ಶುರುವಾಗಿದೆ. ಒಂದೊಂದು ಇಲಾಖೆಯಲ್ಲಿ ಒಂದೊಂದು ಸಿಂಡಿಕೇಟ್ ಇರುತ್ತದೆ. ಯಾರನ್ನು […]

ಪಾಲಿಗ್ರಾಫ್ ಪರೀಕ್ಷೆಗೆ ಸಿದ್ಧ ಎಂದ ಸುಕೇಶ್ ಚಂದ್ರಶೇಖರ್: ಸತ್ಯಪರೀಕ್ಷೆ ತೆಗೆದುಕೊಳ್ಳಲು ಮುಖ್ಯಮಂತ್ರಿ ಕೇಜ್ರಿವಾಲ್ ಗೂ ಪಂಥಾಹ್ವಾನ

ನವದೆಹಲಿ: ಬಹುಕೋಟಿ ವಂಚನೆ ಪ್ರಕರಣದ ಆರೋಪದಲ್ಲಿ ಜೈಲು ಪಾಲಾಗಿರುವ ಸುಕೇಶ್ ಚಂದ್ರಶೇಖರ್ ಶುಕ್ರವಾರ ದೆಹಲಿಯ ಲೆಫ್ಟಿನೆಂಟ್ ಗವರ್ನರ್ (ಎಲ್-ಜಿ) ವಿಕೆ ಸಕ್ಸೇನಾ ಅವರಿಗೆ ಬರೆದಿರುವ ಹೊಸ ಪತ್ರದಲ್ಲಿ, ತಮ್ಮ ಭ್ರಷ್ಟಾಚಾರದ ಆರೋಪಗಳನ್ನು ದೃಢೀಕರಿಸಲು ಪಾಲಿಗ್ರಾಫ್ ಪರೀಕ್ಷೆಗೆ ಒಪ್ಪಿಗೆ ನೀಡಿದ್ದಾರೆ ಮತ್ತು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಜೈಲಿನಲ್ಲಿರುವ ಆಪ್ ನಾಯಕ ಸತ್ಯೇಂದ್ರ ಜೈನ್ ಕೂಡಾ ತನ್ನ ಜೊತೆ ಪರೀಕ್ಷೆ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ. “ಕೇಜ್ರಿವಾಲ್ ಜಿ, ಸುಳ್ಳು ಎಂದು ಅಳುವ ಬದಲು, ಪಾಲಿಗ್ರಾಫ್ ಪರೀಕ್ಷೆಗೆ ಒಪ್ಪಿಕೊಳ್ಳಲು ಎದೆಗಾರಿಕೆ ಮತ್ತು […]

ಪಡುಬಿದ್ರಿ ಬ್ಲೂಫ್ಲ್ಯಾಗ್‌ ಬೀಚ್‌ ನಿರ್ವಹಣೆಯಲ್ಲಿ ಅಕ್ರಮ: ಜಿಲ್ಲಾಧಿಕಾರಿಗೆ ದೂರು ನೀಡಿದ ಉದ್ಯೋಗಿಗಳು

ಪಡುಬಿದ್ರಿ: ಅಂತಾರಾಷ್ಟ್ರೀಯ ಮಾನ್ಯತೆಯ ಪಡುಬಿದ್ರಿ ಬ್ಲೂಫ್ಲ್ಯಾಗ್‌ ಬೀಚ್‌ನ ಉದ್ಯೋಗಿಗಳು ಗುರುವಾರ ಕರ್ತವ್ಯಕ್ಕೆ ಗೈರಾಗಿ ಮಣಿಪಾಲದ ರಜತಾದ್ರಿಯಲ್ಲಿರುವ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಬ್ಲೂಫ್ಲ್ಯಾಗ್‌ ಬೀಚ್‌ ನಿರ್ವಹಣೆಯಲ್ಲಿ ಸಾಕಷ್ಟು ಅಕ್ರಮಗಳು ನಡೆಯುತ್ತಿರುವ ಬಗ್ಗೆ ದೂರು ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ. ಕಳೆದ ಕೆಲವು ತಿಂಗಳುಗಳಿಂದ ಕೆಲಸದ ವಾತಾವರಣ ಹದಗೆಟ್ಟಿದ್ದು, ಬೋಟಿಂಗ್‌ಗೆ ನಕಲಿ ರಶೀದಿಗಳನ್ನು ಮುದ್ರಿಸಿ ಹಣ ವಸೂಲು ಮಾಡಲಾಗುತ್ತಿದೆ. ವಸೂಲಾದ ಹಣವು ಪ್ರವಾಸೋದ್ಯಮ ಇಲಾಖೆಯ ಖಾತೆಗೆ ಜಮೆಯಾಗದೆ ಓರ್ವರ ಖಾಸಗಿ ಖಾತೆಗೆ ಜಮೆಯಾಗುತ್ತಿದೆ. ಈ ಕುರಿತು ಈ ಹಿಂದೆ ಜಿಲ್ಲಾಧಿಕಾರಿ ಹಾಗೂ […]

ಲೋಕಾಯುಕ್ತಕ್ಕೆ ಮತ್ತೆ ಬಂತು ಬಲ: ಎಸಿಬಿ ರದ್ದುಗೊಳಿಸಿ ಕರ್ನಾಟಕ ಹೈ ಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ಮಹತ್ವದ ತೀರ್ಪಿನಲ್ಲಿ, ಭ್ರಷ್ಟಾಚಾರ ತಡೆ (ಪಿಸಿ) ಕಾಯ್ದೆಯಡಿ ಲೋಕಾಯುಕ್ತ ಪೊಲೀಸ್ ವಿಭಾಗದ ಅಧಿಕಾರವನ್ನು ಹಿಂತೆಗೆದುಕೊಳ್ಳುವ ಮೂಲಕ 2016 ರಲ್ಲಿ ರಾಜ್ಯ ಸರ್ಕಾರ ರಚಿಸಿದ್ದ ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ಕರ್ನಾಟಕ ಹೈಕೋರ್ಟ್ ಗುರುವಾರ ರದ್ದುಗೊಳಿಸಿದೆ. ಎಸಿಬಿ ರಚನೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ತಂಡಕ್ಕೆ ಅನುಮತಿ ನೀಡಿದ ನ್ಯಾಯಮೂರ್ತಿ ಬಿ ವೀರಪ್ಪ ಮತ್ತು ನ್ಯಾಯಮೂರ್ತಿ ಕೆ ಎಸ್ ಹೇಮಲೇಖಾ ಅವರಿದ್ದ ವಿಭಾಗೀಯ ಪೀಠ, ಎಸಿಬಿಯಲ್ಲಿ ಬಾಕಿ ಉಳಿದಿರುವ ಎಲ್ಲಾ ಪ್ರಕರಣಗಳನ್ನು ಈಗ ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ವರ್ಗಾಯಿಸಲಾಗುವುದು […]