ರೈತರಿಂದಲೇ ಬೆಳೆ ಸಮೀಕ್ಷೆ ನಡೆಸಲು ಖಾರಿಫ್ ಫಾರ್ಮರ್ ಕ್ರಾಪ್ ಸರ್ವೆ ಆ್ಯಪ್‌ ಅಭಿವೃದ್ದಿ

  ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ರೈತರಿಂದಲೇ ಬೆಳೆ ಸಮೀಕ್ಷೆ ಕೈಗೊಳ್ಳಲು ಮೊಬೈಲ್ ಆ್ಯಪ್‌ನ್ನು ಅಭಿವೃದ್ಧಿ ಪಡಿಸಲಾಗಿರುತ್ತದೆ. ರೈತರು ಗೂಗಲ್ ಪ್ಲೇಸ್ಟೋರ್‌ನಿಂದ Kharif Farmer Crop Survey – 2022-23 ಆ್ಯಪ್‌ನ್ನು ಡೌನ್‌ಲೋಡ್ ಮಾಡಿಕೊಂಡು ಆರ್ಥಿಕ ವರ್ಷ ಹಾಗೂ ಋತುವನ್ನು ದಾಖಲಿಸಿ ಆಧಾರ್‌ನ ಮಾಹಿತಿಗಳನ್ನು ಭರ್ತಿ ಮಾಡಿ, ಮೊಬೈಲ್ ಸಂಖ್ಯೆ ನಮೂದಿಸಿ ಸಕ್ರಿಯಗೊಳಿದಾಗ ಮೊಬೈಲ್ ಸಂಖ್ಯೆಗೆ ಓ.ಟಿ.ಪಿ ಬರಲಿದೆ. ಓ.ಟಿ.ಪಿ ಯನ್ನು ದಾಖಲಿಸಿ, ಜಿಲ್ಲೆ, […]