ಪಶ್ಚಿಮ ಬಂಗಾಳದಲ್ಲಿ ಹಠಾತ್ ಚಂಡಮಾರುತಕ್ಕೆ 5 ಬಲಿ; 300 ಕ್ಕೂ ಹೆಚ್ಚು ಜನ ಗಾಯಾಳು

ಪಶ್ಚಿಮ ಬಂಗಾಳದಲ್ಲಿ ಹಠಾತ್ ಚಂಡಮಾರುತಕ್ಕೆ 5 ಬಲಿ; 300 ಕ್ಕೂ ಹೆಚ್ಚು ಜನ ಗಾಯಾಳು ಕೊಲ್ಕತ್ತಾ: ಉತ್ತರ ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಗೆ ಭಾನುವಾರ ಅಪ್ಪಳಿಸಿದ ಹಠಾತ್ ಚಂಡಮಾರುತದಲ್ಲಿ ಕನಿಷ್ಠ 5 ಸಾವನ್ನಪ್ಪಿದ್ದಾರೆ ಮತ್ತು 300 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮನೆಗಳು ಹಾಗೂ ಕಟ್ಟಡಗಳಿಗೂ ಹಾನಿಯಾಗಿರುವ ವರದಿಯಾಗಿದೆ. ಆಸ್ಪತ್ರೆಗೆ ದಾಖಲಾಗಿರುವ 42 ಮಂದಿಯಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. ಬಂಗಾಳದ ಗವರ್ನರ್ ಸಿವಿ ಆನಂದ ಬೋಸ್ ಅವರು ಸೋಮವಾರ ಚಂಡಮಾರುತ ಪೀಡಿತ ಪ್ರದೇಶಕ್ಕೆ […]

ಚಂಡಮಾರುತ ಬಿಪರ್‌ಜೋಯ್ ಹಿನ್ನೆಲೆಯಲ್ಲಿ ಕಚ್ ಜಿಲ್ಲೆಯ 30000 ಕ್ಕೂ ಮಿಕ್ಕಿ ಸ್ಥಳೀಯರ ಸ್ಥಳಾಂತರ

ಅಹಮದಾಬಾದ್: ಬಿಪರ್‌ಜೋಯ್ ಚಂಡಮಾರುತವು ನಾಳೆ ಸಂಜೆ ಗುಜರಾತ್‌ನ ಸೌರಾಷ್ಟ್ರ ಮತ್ತು ಕಚ್ ಪ್ರದೇಶ ಮತ್ತು ಪಕ್ಕದ ಪಾಕಿಸ್ತಾನದ ಕರಾವಳಿಗೆ ಅಪ್ಪಳಿಸುವ ನಿರೀಕ್ಷೆಯಿದೆ. ಚಂಡಮಾರುತವು ಪ್ರಸ್ತುತ ಪೂರ್ವ-ಮಧ್ಯ ಅರೇಬಿಯನ್ ಸಮುದ್ರದ ಮೇಲೆ ನೆಲೆಗೊಂಡಿದ್ದು ಪೋರಬಂದರ್‌ನಿಂದ ನೈಋತ್ಯಕ್ಕೆ 350 ಕಿಲೋಮೀಟರ್ ದೂರದಲ್ಲಿದೆ. ಚಂಡಮಾರುತ ಹಿನ್ನೆಲೆಯಲ್ಲಿ ಮಂಗಳವಾರ, ಗುಜರಾತ್‌ನ ಅಧಿಕಾರಿಗಳು ಕಚ್ ಜಿಲ್ಲೆಯ ಜಖೌ ಬಂದರಿನ ಬಳಿ ಕರಾವಳಿ ಪ್ರದೇಶಗಳಿಂದ 37,800 ಜನರನ್ನು ತಾತ್ಕಾಲಿಕ ಆಶ್ರಯಕ್ಕೆ ಸ್ಥಳಾಂತರಿಸಿದ್ದಾರೆ. ಅಧಿಕಾರಿಗಳ ಪ್ರಕಾರ, ಹಲವಾರು ಎನ್.ಡಿ.ಆರ್.ಎಫ್ ಮತ್ತು ಎಸ್.ಡಿ.ಆರ್.ಎಫ್ ತಂಡಗಳು ಕಾರ್ಯಾಚರಣೆಗೆ ಸನ್ನದ್ದವಾಗಿವೆ. ಪರಿಹಾರ […]

ಬಿಪರ್‌ಜೋಯ್ ಚಂಡಮಾರುತ: ಮುಂಬೈ ವಿಮಾನ ಸಂಚಾರ ಅಸ್ತವ್ಯಸ್ತ; ಮುಂದಿನ ಪಯಣ ಗುಜರಾತ್ ನತ್ತ

ಮುಂಬೈ: ಬಿಪರ್‌ಜೋಯ್ ಚಂಡಮಾರುತ ಅರಬ್ಬಿ ಸಮುದ್ರದ ಮೇಲೆ ಬೀಸುತ್ತಿದ್ದು, ಹವಾಮಾನ ವೈಪರೀತ್ಯದಿಂದಾಗಿ ನಿನ್ನೆ ಸಂಜೆ ಮುಂಬೈನಲ್ಲಿ ವಿಮಾನ ಕಾರ್ಯಾಚರಣೆಗೆ ತೊಂದರೆಯಾಗಿದೆ. ಬಿಪರ್‌ಜೋಯ್ ಚಂಡಮಾರುತದ ತೀವ್ರತೆಯು “ಅತ್ಯಂತ ತೀವ್ರವಾದ ಚಂಡಮಾರುತ” ವಾಗಿ ಪರಿವರ್ತನೆ ಗೊಂಡಿದ್ದು, ಮುಂಬೈನಲ್ಲಿ ಭಾರೀ ಮಳೆ ಮತ್ತು ಗಾಳಿಯು ರಭಸದಿಂದ ಅಪ್ಪಳಿಸಿದೆ. ನೂರಾರು ಪ್ರಯಾಣಿಕರು ಗಂಟೆಗಟ್ಟಲೆ ತಮ್ಮ ವಿಮಾನಗಳಿಗಾಗಿ ಕಾಯುತ್ತಿದ್ದರಿಂದ ಮುಂಬೈ ವಿಮಾನ ನಿಲ್ದಾಣವು ಆತಂಕ ಮತ್ತು ಅವ್ಯವಸ್ಥೆಯ ದೃಶ್ಯಗಳಿಗೆ ಸಾಕ್ಷಿಯಾಯಿತು. ಹವಾಮಾನದ ಕಾರಣದಿಂದ ಹಲವಾರು ವಿಮಾನಗಳು ವಿಳಂಬಗೊಂಡು ಕೆಲವು ರದ್ದುಗೊಂಡವು. ಮತ್ತೆ ಕೆಲವು ಲ್ಯಾಂಡಿಗ್ […]

ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಸಾಧ್ಯತೆ: ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ

ಉಡುಪಿ: ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ ಉಂಟಾಗುವ ಸಂಭವವಿದ್ದು, ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 4 ದಿನಗಳಲ್ಲಿ ಸಮುದ್ರದ ಅಲೆಗಳಲ್ಲಿ ಏರಿಳಿತ ಉಂಟಾಗುವ ಹಾಗೂ ಮಳೆಯಾಗುವ ಸಾಧ್ಯತೆ ಇರುತ್ತದೆ. ಈ ಸಂದರ್ಭದಲ್ಲಿ ಮೀನುಗಾರರು ಮೀನುಗಾರಿಕೆಗಾಗಿ ಸಮುದ್ರಕ್ಕೆ ತೆರಳುವುದನ್ನು ನಿಷೇಧಿಸಲಾಗಿದ್ದು, ಸಾರ್ವಜನಿಕರು ಹಾಗೂ ಪ್ರವಾಸಿಗರು ಸಮುದ್ರ ಹಾಗೂ ನದಿ ತೀರ ಪ್ರದೇಶಗಳಲ್ಲಿ ಇಳಿಯಬಾರದು. ಮಕ್ಕಳು ಮತ್ತು ಸಾರ್ವಜನಿಕರು ಸಮುದ್ರ ತೀರ, ಅಪಾಯಕಾರಿ ವಿದ್ಯುತ್ ಕಂಬ, ಕಟ್ಟಡ ಹಾಗೂ ಮರಗಳ ಕೆಳಗೆ ನಿಲ್ಲಬಾರದು. […]

ಆಗ್ನೇಯ ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಸಾಧ್ಯತೆ: ಕರಾವಳಿ ಕರ್ನಾಟಕ್ಕೆ ಮುನ್ನೆಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ: ಆಗ್ನೇಯ ಅರಬ್ಬೀ ಸಮುದ್ರದ ಮೇಲೆ ಚಂಡಮಾರುತದ ಪರಿಚಲನೆಯ ಪ್ರಭಾವದ ಅಡಿಯಲ್ಲಿ, ಅದೇ ಪ್ರದೇಶದ ಮೇಲೆ ಕಡಿಮೆ ಒತ್ತಡದ ಪ್ರದೇಶವು ರೂಪುಗೊಂಡಿದೆ ಮತ್ತು ಸಂಬಂಧಿತ ಚಂಡಮಾರುತದ ಪರಿಚಲನೆಯು ವಿಸ್ತರಿಸುವ ಸಾಧ್ಯತೆ ಇದೆ. ಮುಂದಿನ 24 ಗಂಟೆಗಳಲ್ಲಿ ಇದು ಉತ್ತರ-ವಾಯುವ್ಯದ ಕಡೆಗೆ ಚಲಿಸುವ ಮತ್ತು ಆಗ್ನೇಯ ಮತ್ತು ಪಕ್ಕದ ಪೂರ್ವ ಮಧ್ಯ ಅರಬ್ಬೀ ಸಮುದ್ರದ ಮೇಲೆ ಚಂಡಮಾರುತವಾಗಿ ಪರಿಣಮಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಕರಾವಳಿಯ ಬಂದರು ನಗರಗಳಾದ ಕಾರವಾರ, ಮಂಗಳೂರು (0824 […]