ಬಿಜೆಪಿ ಜನರ ಭಾವನೆಗಳ ಜೊತೆ ಚೆಲ್ಲಾಟವಾಡುತ್ತಿದೆ: ಡಿ.ಕೆ.ಶಿವಕುಮಾರ್

ಬೈಂದೂರು: ಹಿಂದೂತ್ವ ಎಂಬುದು ಯಾರ ಮನೆಯ ಆಸ್ತಿಯೂ ಅಲ್ಲ. ನಾನೂ ಕೂಡಾ ಹಿಂದೂ. ಬಿಜೆಪಿ ಬದುಕಿನ ಬಗ್ಗೆ ಚಿಂತನೆ ಮಾಡದೇ, ಭಾವನೆ ಜೊತೆಗೆ ಆಟವಾಡುತ್ತಿದೆ. ಬೆಲೆ ಏರಿಕೆ, ಉದ್ಯೋಗ, ಭವಿಷ್ಯದ ಬಗ್ಗೆ ಅವರಿಗೆ ಚಿಂತೆ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು. ಅವರು ಯಡ್ತರೆ ಜೆ.ಎನ್.ಆರ್. ಸಭಾಭವನದಲ್ಲಿ ಜರುಗಿದ ಬೈಂದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಹತ್ತಾರು ಸರಕಾರಿ ಉದ್ದಿಮೆ ಸ್ಥಾಪನೆ, ಜನರ ಸಶಕ್ತೀಕರಣಕ್ಕೆ ನೂರಾರು […]

ರಾಜ್ಯದಲ್ಲಿ ಅತಿ ಹೆಚ್ಚು ಬಾರಿ ಪಕ್ಷಾಂತರ ಮಾಡಿರುವುದು ಸಿದ್ದರಾಮಯ್ಯನವರು: ಪ್ರಮೋದ್ ಮಧ್ವರಾಜ್ ತಿರುಗೇಟು

ಉಡುಪಿ: ಈ ರಾಜ್ಯದಲ್ಲಿ ಯಾರಾದರೂ ಹೆಚ್ಚು ಪಕ್ಷಾಂತರ ಮಾಡಿದ್ದರೆ ಅದು ಸಿದ್ದರಾಮಯ್ಯ. ಅವರು ತಮ್ಮ ರಾಜಕೀಯ ಜೀವನದಲ್ಲಿ ಒಟ್ಟು 7 ಬಾರಿ ಪಕ್ಷಗಳನ್ನು ಬದಲಾಯಿಸಿದ್ದು ನಾನು ಹುಟ್ಟಿನಿಂದ ಕಾಂಗ್ರೆಸ್ ಪಕ್ಷದಲ್ಲಿದ್ದು ಈಗ ಸನ್ನಿವೇಶಕ್ಕೆ ಅನುಗುಣವಾಗಿ ಬಿಜೆಪಿ ಸೇರಿದ್ದೇನೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು. ಅವರು ಶುಕ್ರವಾರ ತಮ್ಮ ನಿವಾಸದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಉಡುಪಿಯಲ್ಲಿ ನಡೆದ ಪ್ರಜಾಧ್ವನಿ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನನ್ನನ್ನು ಪಕ್ಷಾಂತರಿ […]

ಬೊಮ್ಮಾಯಿ ಸರ್ಕಾರ ವಿಫಲ; ಮೋದಿ ಹೆಸರಲ್ಲಿ ಬಿಜೆಪಿ ಮತಯಾಚನೆ: ಡಿ.ಕೆ.ಶಿವಕುಮಾರ್

ಉಡುಪಿ: ರಾಜ್ಯದ ಬಿಜೆಪಿ ನೇತೃತ್ವದ ಬೊಮ್ಮಾಯಿ ಸರ್ಕಾರ ಎಲ್ಲಾ ಕ್ಷೇತ್ರಗಳಲ್ಲಿಯೂ ದಯನೀಯವಾಗಿ ವಿಫಲವಾಗಿದ್ದು, ಪಕ್ಷವು 2023 ರ ಚುನಾವಣೆಯನ್ನು ಪ್ರಧಾನಿ ಮೋದಿ ಮತ್ತು ರಾಷ್ಟ್ರೀಯ ನಾಯಕರ ನೇತೃತ್ವದಲ್ಲಿ ಎದುರಿಸಬೇಕಾಗಿದೆ. ರಾಜ್ಯ ಸರ್ಕಾರವು ತನ್ನ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಮತ್ತು ಅದಕ್ಕೀಗ ರಾಷ್ಟ್ರೀಯ ನಾಯಕರ ಅವಶ್ಯಕತೆಯಿದೆ. ಬಿಜೆಪಿಯು ಜನರಿಗೆ ನೀಡಿದ ಆಶ್ವಾಸನೆಗಳನ್ನು ಈಡೇರಿಸಲಿಲ್ಲ ಮತ್ತು ಗಗನಕ್ಕೇರಿರುವ ಬೆಲೆ ಏರಿಕೆಯನ್ನು ತಡೆಯಲೂ ಆಗಲಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಆರೋಪಿಸಿದರು. ಅವರು ಭಾನುವಾರ ಉಡುಪಿಯ ಮಿಶನ್ ಕೌಂಪಾಡಿನ […]

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜೀವನಾಧಾರಿತ ಚಲನ ಚಿತ್ರ ತೆರೆಗೆ: ನಿರ್ಮಾಪಕರ ಜೊತೆ ಮಾತುಕತೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಜೀವನಾಧಾರಿತ ಕನ್ನಡ ಚಲನಚಿತ್ರವು ತೆರೆಗೆ ಬರುವ ಸಾಧ್ಯತೆಯಿದೆ ಎನ್ನಲಾಗಿದೆ. ಕರ್ನಾಟಕದಲ್ಲಿ ಏಪ್ರಿಲ್-ಮೇ 2023 ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಈ ಚಿತ್ರ ತೆರೆಕಾಣುವ ನಿರೀಕ್ಷೆ ಇದೆ. ಮಾಜಿ ಶಾಸಕ ಶಿವರಾಜ್ ತಂಗಡಗಿ ಮತ್ತು ಶಾಸಕ ಬಿ ಜೆಡ್ ಜಮೀರ್ ಅಹಮದ್ ಖಾನ್ ಅವರು ಸಿದ್ದರಾಮಯ್ಯ ಅವರ ವೈಯಕ್ತಿಕ ಮತ್ತು ರಾಜಕೀಯ ಪ್ರಯಾಣವನ್ನು ಬಿಂಬಿಸುವ ಚಿತ್ರವನ್ನು ನಿರ್ಮಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ‘ಹೌದು ಹುಲಿಯಾ’ […]

ಮುಂದಿನ ಚುನಾವಣೆಯಲ್ಲಿ ಒಬ್ಬ ವ್ಯಕ್ತಿಗೆ ಒಂದೇ ಟಿಕೆಟ್: ಕಾಂಗ್ರೆಸ್ ಉಸ್ತುವಾರಿ ಡಿಕೆ ಶಿವಕುಮಾರ್

ಬೆಂಗಳೂರು: ಮುಂಬರುವ ಚುನಾವಣೆಯಲ್ಲಿ ಒಬ್ಬ ವ್ಯಕ್ತಿಗೆ ಒಂದೇ ಟಿಕೆಟ್ ಸಿಗಲಿದೆ ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಡಿಕೆ ಶಿವಕುಮಾರ್ ಶುಕ್ರವಾರ ಹೇಳಿದ್ದಾರೆ. ಒಂದಕ್ಕಿಂತ ಹೆಚ್ಚು ಕ್ಷೇತ್ರಗಳಿಂದ ಸ್ಪರ್ಧಿಸಲು ಆಕಾಂಕ್ಷಿಗಳು ಅರ್ಜಿ ಸಲ್ಲಿಸಿರುವ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಕೆ ಶಿವಕುಮಾರ್, ಯಾರೇ ಆಗಲಿ ಒಬ್ಬರಿಗೆ ಒಂದೇ ಟಿಕೆಟ್ ಸಿಗುತ್ತದೆ. ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕಿದ್ದು, ಇಲ್ಲಿ ಪಕ್ಷಕ್ಕಿಂತ ವ್ಯಕ್ತಿ ಮುಖ್ಯವಲ್ಲ. ಪಕ್ಷ ಅಧಿಕಾರಕ್ಕೆ ಬರಬೇಕು, ಅದು ಆದಾಗ ಎಲ್ಲರಿಗೂ ಅಧಿಕಾರ ಸಿಗುತ್ತದೆ.ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ […]