ಕಲಾವಿದರ ಮೇಲೆ ದಬ್ಬಾಳಿಕೆ ಖಂಡಿಸಿ ತೀವ್ರ ಹೋರಾಟದ ಎಚ್ಚರಿಕೆ ನೀಡಿದ ತುಳುನಾಡ ಕಲಾವಿದರು

ಮಂಗಳೂರು: ದೈವ–ದೇವರ ನಿಂದೆ ಮಾಡಲಾಗುತ್ತಿದೆ ಎಂದು ಆರೋಪಿಸಿ ರಂಗಭೂಮಿ, ಯಕ್ಷಗಾನ ಮತ್ತು ಸಿನಿಮಾ ಕಲಾವಿದರ ಮೇಲೆ ದಬ್ಬಾಳಿಕೆ ನಡೆಯುತ್ತಿದೆ ಎಂದು ಆರೋಪಿಸಿ ಕಲಾವಿದರು ಸೋಮವಾರ ನಡೆಸಿದ ಸಭೆಯಲ್ಲಿ ತೀವ್ರ ಹೋರಾಟಕ್ಕೆ ಇಳಿಯಲು ನಿರ್ಧರಿಸಲಾಯಿತು. ತುಳು ನಾಟಕ ಕಲಾವಿದರ ಒಕ್ಕೂಟ, ಜಿಲ್ಲಾ ರಂಗ ಸಮ್ಮಿಲನ ವೇದಿಕೆ, ಕೋಸ್ಟಲ್ ವುಡ್ ಕಲಾವಿದರು ಮತ್ತು ತಂತ್ರಜ್ಞರ ಒಕ್ಕೂಟ ಮತ್ತು ಯಕ್ಷಗಾನ ಕಲಾವಿದರು ಸೋಮವಾರದಂದು ಡಾನ್ ಬಾಸ್ಕೋ ಹಾಲ್ ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಶಾಂತಿಯುತ ಬೃಹತ್ ಕಾಲ್ನಡಿಗೆ ಜಾಥಾ ಹಮ್ಮಿಕೊಂಡಿದ್ದು, ವಿಜಯಕುಮಾರ್ ಕೊಡಿಯಾಲ್ […]

ದೈವ-ಕೋಲದ ವಿಚಾರದಲ್ಲಿ ತಡೆಯಾಜ್ಞೆ ತಂದ ವ್ಯಕ್ತಿ ದೈವದೆದುರೇ ಕುಸಿದು ಸಾವು: ಪಡುಹಿತ್ಲುವಿನಲ್ಲಿ ವಿಚಿತ್ರ ವಿದ್ಯಮಾನ

ಪಡುಬಿದ್ರೆ: ಇಲ್ಲಿನ ಪಡುಹಿತ್ಲು ಗ್ರಾಮದಲ್ಲಿ ಜಾರಂದಾಯ ಬಂಟ ದೈವಸ್ಥಾನದಲ್ಲಿ ಜಾರಂದಾಯ ಬಂಟ ಸೇವಾ ಸಮಿತಿಯ ನೇತೃತ್ವದಲ್ಲಿ ನೇಮೋತ್ಸವವು ವರ್ಷಂಪ್ರತಿ ನಡೆಯುತ್ತಿದ್ದು, ಇದೀಗ ಇಲ್ಲಿ ವಿಚಿತ್ರವೆನಿಸುವಂತಹ ಘಟನೆ ನಡೆದಿದೆ. ದೈವಸ್ಥಾನದ ಉಸ್ತುವಾರಿಯು ಪಡುಹಿತ್ಲು ಜಾರಂದಾಯ ಬಂಟ ಸೇವಾ ಸಮಿತಿಯದ್ದಾಗಿದ್ದು, ಈ ಹಿಂದೆ ಪ್ರಕಾಶ್ ಶೆಟ್ಟಿ ಅಧ್ಯಕ್ಷರಾಗಿದ್ದರು. ಆದರೆ ಸಮಿತಿ ಬದಲಾದಾಗ ಪ್ರಕಾಶ್ ಶೆಟ್ಟಿ ಅಧಿಕಾರ ಕಳೆದುಕೊಂಡರು. ಹಾಗಂತ ಸುಮ್ಮನಿರದ ಪ್ರಕಾಶ್ ಶೆಟ್ಟಿ 9 ಜನರ ಪ್ರತ್ಯೇಕ ಟ್ರಸ್ಟ್ ರಚಿಸಿ ಬಂಡಾರ ಮನೆಯ ಗುರಿಕಾರರಾದ ಜಯ ಪೂಜಾರಿಯನ್ನು ಅಧ್ಯಕ್ಷರನ್ನಾಗಿ ನೇಮಿಸುತ್ತಾರೆ […]