ಧರ್ಮಸ್ಥಳ: ವ್ಯಸನಮುಕ್ತ ಸಾಧಕರ ಸಮಾವೇಶ ಮತ್ತು ಶತದಿನೋತ್ಸವ

ಮಂಗಳೂರು: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ ವತಿಯಿಂದ ರಾಜ್ಯಾದ್ಯಂತ ನಡೆಸಲಾದ ಮದ್ಯವರ್ಜನ ಶಿಬಿರದಲ್ಲಿ ಭಾಗವಹಿಸಿ ದುಶ್ವಟಮುಕ್ತರಾಗಿ ನವಜೀವನ ನಡೆಸುತ್ತಿರುವ ವ್ಯಸನಮುಕ್ತ ಸಾಧಕರ ಸಮಾವೇಶ ಮತ್ತು ಶತದಿನೋತ್ಸವ ಕಾರ್ಯಕ್ರಮ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಶ್ರೀಮತಿ ಶಶಿಕಲಾ ಜೊಲ್ಲೆ, ಕೆಲವೊಮ್ಮೆ ತಮ್ಮ ಪರಿಸ್ಥಿತಿಯಿಂದಾಗಿ ಕೆಲವರು ವ್ಯಸನಕ್ಕೆ ಬಲಿಯಾಗಿರಬಹುದು. ಆದರೆ ನಂತರ ಅದರಿಂದ ಮುಕ್ತವಾಗುವುದು ತುಂಬಾ ಕಷ್ಟ, ಆದರೆ ಸರಿಯಾದ ಬದುಕಿಗೆ ಕೈ ಹಿಡಿದು ಕರೆದುಕೊಂಡು […]

ಧರ್ಮಸ್ಥಳ: ಧರ್ಮಶ್ರೀ ವಿಸ್ತೃತ ನೂತನ ಕಟ್ಟಡ ಉದ್ಘಾಟನೆ

ಧರ್ಮಸ್ಥಳ: ಧರ್ಮಸ್ಥಳದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಧರ್ಮಶ್ರೀ ವಿಸ್ತೃತ ನೂತನ ಕಟ್ಟಡವನ್ನು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಶ್ರೀ ಕ್ಷೇತ್ರ ಧರ್ಮಸ್ಥಳ ಒಂದು ಸರಕಾರದ ಆಡಳಿತ ವ್ಯವಸ್ಥೆ ಇದ್ದಂತೆ. ವ್ಯಕ್ತಿಯನ್ನು ಜವಾಬ್ದಾರಿಯುತ ನಾಗರಿಕನನ್ನಾಗಿಸುವಲ್ಲಿ ಸರಕಾರಕ್ಕಿಂತಲೂ ಹೆಚ್ಚಿನ ಕೆಲಸ ಮಾಡುತ್ತಿದೆ. ಡಾ. ಹೆಗ್ಗಡೆ ಅವರ ಸ್ವಚ್ಛ ಶ್ರದ್ಧಾಕೇಂದ್ರ ಸ್ವಾತಂತ್ರ‍್ಯ ಆಂದೋಲನದಂತೆ ಪರಿವರ್ತನೆಯಾಗಿದೆ. ಸೈನಿಕರು ದೇಶರಕ್ಷಣೆ ಮಾಡುತ್ತಿದ್ದಾರೆ ನಾವು ಸ್ವಚ್ಛತೆ ಮೂಲಕ ಸಮಾಜ ರಕ್ಷಣೆ ಮಾಡೋಣ ಎಂದು ಕರೆ ನೀಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳ […]