ಸರ್ಕಾರಿ ನೌಕರರು ಜನರ ನಿರೀಕ್ಷೆಗೆ ಸ್ಪಂದಿಸಿ ಪ್ರಾಮಾಣಿಕತೆಯಿಂದ ಕೆಲಸ ನಿರ್ವಹಿಸಬೇಕು: ನಿವೃತ್ತ ಜಿಲ್ಲಾಧಿಕಾರಿ ಕಲ್ಪನಾ

ಉಡುಪಿ: ಜನರಿಂದ ಜನರಿಗೋಸ್ಕರ ಇರುವ ಸರ್ಕಾರ ಜನಸಾಮಾನ್ಯರನ್ನು ಕೇಂದ್ರವನ್ನಾಗಿಟ್ಟುಕೊಂಡು ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತರುತ್ತದೆ. ಇವುಗಳನ್ನು ಅನುಷ್ಠಾನಗೊಳಿಸುವ ಕೆಲಸ ಕಾರ್ಯಾಂಗದ್ದಾಗಿದ್ದು, ಇದರ ಜವಾಬ್ದಾರಿ ಸರ್ಕಾರಿ ನೌಕರರ ಮೇಲಿರುತ್ತದೆ. ಇದನ್ನು ಅರಿತು ದಕ್ಷತೆಯಿಂದ ಕಾರ್ಯನಿರ್ವಹಿಸಬೇಕು. ಬಹುಪಾಲು ಜನರು ಸರ್ಕಾರದಿಂದ ಹೆಚ್ಚೇನೂ ನಿರೀಕ್ಷಿಸದೇ ತಮ್ಮ ದೈನಂದಿನ ಕೆಲಸ ಕಾರ್ಯಗಳನ್ನು ನಿರ್ವಹಿಸಿಕೊಂಡು ಹೋಗುತ್ತಿರುತ್ತಾರೆ. ಸರ್ಕಾರದಿಂದ ಅಗತ್ಯ ಮೂಲಭೂತ ಸೌಕರ್ಯಗಳನ್ನು ಮಾತ್ರ ಅಪೇಕ್ಷಿಸುವ ಅವರ ನಿರೀಕ್ಷೆಗೆ ತಕ್ಕಂತೆ ನಾವು ಸ್ಪಂದಿಸಬೇಕು ಎಂದು ಉಡುಪಿ ಜಿಲ್ಲೆಯ ಪ್ರಥಮ ಜಿಲಾಧಿಕಾರಿ(ಈಗ ನಿವೃತ್ತ) ಕಲ್ಪನಾ ಹೇಳಿದರು. […]