ಡಯಾಲಿಸಿಸ್ ಕೇಂದ್ರದ ಸಿಬ್ಬಂದಿಗಳ ಮುಷ್ಕರ: ರೋಗಿಗಳಿಗೆ ಅನಾನುಕೂಲವಾಗದಂತೆ ಕ್ರಮವಹಿಸಲು ಸುನಿಲ್ ಕುಮಾರ್ ಮನವಿ
![](https://udupixpress.com/wp-content/uploads/2022/11/sunil-kumar-1.png)
ಕಾರ್ಕಳ: ರಾಜ್ಯಾದ್ಯಂತ ತಾಲ್ಲೂಕು ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿನ 167 ಡಯಾಲಿಸಿಸ್ ಕೇಂದ್ರಗಳಲ್ಲಿ ಸುಮಾರು 900 ಡಯಾಲಿಸಿಸ್ ಸಿಬ್ಬಂದಿಗಳು ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಸದರಿ ಡಯಾಲಿಸಿಸ್ ಕೇಂದ್ರದ ಸಿಬ್ಬಂದಿಗಳು ವೇತನ ಹಾಗೂ ಇನ್ನಿತರ ಸೌಲಭ್ಯಗಳಿಗೆ ಆಗ್ರಹಿಸಿ ರಾಜ್ಯಾದ್ಯಂತ ಅನಿರ್ಧಿಷ್ಟಾವಧಿ ಪ್ರತಿಭಟನೆಯನ್ನು ನಡೆಸಲು ತೀರ್ಮಾನಿಸಿರುವುದು ತಿಳಿದುಬಂದಿದೆ. ಕಾರ್ಕಳ ಸಾರ್ವಜನಿಕ ಆಸ್ಪತ್ರೆಯ ಡಯಾಲಿಸಿಸ್ ಕೇಂದ್ರದಲ್ಲಿ ಒಟ್ಟು 05 ಜನ ಸಿಬ್ಬಂದಿಗಳು ಕರ್ತವ್ಯನಿರ್ವಹಿಸುತ್ತಿದ್ದು, ಡಯಾಲಿಸಿಸ್ ಕೇಂದ್ರದಲ್ಲಿ ನಿರಂತರವಾಗಿ ನನ್ನ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರತಿ ದಿನ ಸುಮಾರು 15 ರಿಂದ 20 ರೋಗಿಗಳು ಡಯಾಲಿಸಿಸ್ಗೆ […]
ಪ್ರಕೃತಿಗೆ ಸಮೀಪವಾಗಿ ಬದುಕುವ ಆಯುರ್ವೇದದ ಆರೋಗ್ಯಕರ ಜೀವನ ಪದ್ದತಿ ಆಳವಡಿಸಿಕೊಳ್ಳಿ: ಜಿಲ್ಲಾಧಿಕಾರಿ ಕೂರ್ಮಾ ರಾವ್
![](https://udupixpress.com/wp-content/uploads/2022/10/ayurveda-day1-1.png)
ಉಡುಪಿ: ಪ್ರಕೃತಿಯೊಂದಿಗೆ ಬಾಳುವುದು ಮಾನವನ ಜೀವನ ವಿಧಾನ. ಪ್ರಕೃತಿಗೆ ಹತ್ತಿರವಾಗಿದ್ದುಕೊಂಡು ಆರೋಗ್ಯಕರವಾಗಿ ಜೀವನ ನಡೆಸಬೇಕು ಎಂಬ ತಿಳುವಳಿಕೆ ನೀಡುವ ಆಯುರ್ವೇದ ಪದ್ದತಿಯನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಆಧುನಿಕ ವೈದ್ಯಕೀಯ ಪದ್ದತಿಯಲ್ಲಿ ಅನಾರೋಗ್ಯ ಪೀಡಿತ ವ್ಯಕ್ತಿಗೆ ಚಿಕಿತ್ಸೆ ನೀಡಲಾಗುತ್ತದೆ. ಆದರೆ ಆಯುರ್ವೇದವು ವ್ಯಕ್ತಿಯು ತನ್ನ ಆರೋಗ್ಯವನ್ನು ಪ್ರತಿದಿನದ ತನ್ನ ಜೀವನ ಪದ್ದತಿಯಲ್ಲಿ ಹೇಗೆ ಅಳವಡಿಸಿಕೊಳ್ಳಬೇಕು ಎಂಬುದನ್ನು ತಿಳಿಸುತ್ತದೆ. ಇದರಲ್ಲಿ ಯಾವುದೇ ಅಡ್ಡಪರಿಣಾಮಗಳಿಲ್ಲ. ಆಯುರ್ವೇದ ಸೂತ್ರಗಳನ್ನು ಪ್ರತಿದಿನದ ನಮ್ಮ ದಿನಚರಿಯಲ್ಲಿ ಪಾಲಿಸಬೇಕು ಎಂದರು. ಅವರು ಆದಿತ್ಯವಾರದಂದು ಅಜ್ಜರಕಾಡು ಜಿಲ್ಲಾ ಆಯುಷ್ […]