ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳನ್ನು ತಯಾರಿಸುವ ಕ್ರೀಡಾ ವಿಜ್ಞಾನ ಕೇಂದ್ರದ ಉದ್ಘಾಟನೆ: ಕೆ. ರಘುಪತಿ ಭಟ್

ಉಡುಪಿ: ಜಿಲ್ಲೆಯಲ್ಲಿನ ಕ್ರೀಡಾಪಟುಗಳಿಗೆ ಉತ್ತೇಜಿಸುವುದರೊಂದಿಗೆ ಅವರುಗಳು ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸಿ, ಉತ್ತಮ ಪ್ರದರ್ಶನ ನೀಡುವುದರೊಂದಿಗೆ ಸ್ಪರ್ಧೆಗಳಲ್ಲಿ ವಿಜೇತರಾಗಿ ಪ್ರಶಸ್ತಿ ಹಾಗೂ ಬಹುಮಾನ ಪಡೆಯುವಂತೆ ಅನುಕೂಲ ಮಾಡುವ ಉದ್ದೇಶದಿಂದ ಉಡುಪಿ ನಗರದಲ್ಲಿ ಕ್ರೀಡಾ ವಿಜ್ಞಾನ ಕೇಂದ್ರವನ್ನು ಸ್ಥಾಪಿಸಲಾಗುತ್ತಿದ್ದು, ಕ್ರೀಡಾಪಟುಗಳು ದೇಹ ಸದೃಢತೆ ಆಧಾರಿತ ಕ್ರೀಡೆಯಲ್ಲಿ ಭಾಗವಹಿಸುವಿಕೆ, ಕ್ರೀಡಾ ಸಂದರ್ಭದಲ್ಲಿ ಆಗುವ ಅವಘಡಗಳ ಚಿಕಿತ್ಸೆಗೆ ನೆರವಾಗುವ ಕ್ರೀಡಾ ವಿಜ್ಞಾನ ಕೇಂದ್ರವನ್ನು 2 ಕೋಟಿ ರೂ. ವೆಚ್ಚದಲ್ಲಿ ಉಡುಪಿಯ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಇದೇ 24 ರಂದು […]

ವಾರಾಹಿ ಎಡದಂಡೆ ಯೋಜನೆಯಿಂದ ಜನರಿಗಾಗುತ್ತಿರುವ ತೊಂದರೆ ತಕ್ಷಣ ಬಗೆಹರಿಸಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.

ಉಡುಪಿ: ಹಾರ್ದಳ್ಳಿ-ಮಂಡಳ್ಳಿ ಗ್ರಾಮ ವ್ಯಾಪ್ತಿಯಲ್ಲಿ ಹಾದು ಹೋಗಿರುವ ವಾರಾಹಿ ಎಡದಂಡೆ ಕಾಮಗಾರಿಯಿಂದ ಸ್ಥಳೀಯರಿಗೆ ಸಂಪರ್ಕ ರಸ್ತೆ ಸಮಸ್ಯೆ ಸೇರಿದಂತೆ ಮತ್ತಿತರ ಸಮಸ್ಯೆಗಳ ಬಗ್ಗೆ ತಕ್ಷಣವೇ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚನೆ ನೀಡಿದರು. ಅವರು ಶನಿವಾರ ಬಿದ್ಕಲ್‌ಕಟ್ಟೆಯ ಕೆ.ಪಿ.ಎಸ್. ಶಾಲೆಯಲ್ಲಿ ನಡೆದ ಹಾರ್ದಳ್ಳಿ-ಮಂಡಳ್ಳಿ ಗ್ರಾಮ ವ್ಯಾಪ್ತಿಯ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಾರಾಹಿ ಎಡದಂಡೆ ಕಾಮಗಾರಿಯ ಕಾರಣ ಗ್ರಾಮದಲ್ಲಿ ಹಲವೆಡೆ ಸಂಪರ್ಕ ರಸ್ತೆಗಳ ಸಮಸ್ಯೆ ಉಂಟಾಗಿದೆ. ಈ ಬಗ್ಗೆ ವಾರಾಹಿ […]

ಮಂಗಳೂರು ವಿಶ್ವವಿದ್ಯಾನಿಲಯದಿಂದ ವಿದ್ಯಾರ್ಥಿಗಳಿಗಾಗುತ್ತಿರುವ ಸಮಸ್ಯೆ ಬಗೆಹರಿಸಲು ಜಿಲ್ಲಾಧಿಕಾರಿಗೆ ಮನವಿ ನೀಡಿದ ಎಬಿವಿಪಿ

ಉಡುಪಿ: ಮಂಗಳೂರು ವಿಶ್ವವಿದ್ಯಾನಿಲಯದಿಂದ ವಿದ್ಯಾರ್ಥಿಗಳು ಅನುಭವಿಸುತ್ತಿರುವ ಶೈಕ್ಷಣಿಕ ಸಮಸ್ಯೆಯ ಕುರಿತು ಡಿ.17 ರಂದು ಎಬಿವಿಪಿ ವತಿಯಿಂದ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಮಂಗಳೂರು ವಿಶ್ವವಿದ್ಯಾನಿಲಯವು ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ನೀಡದೆ ಸತಾಯಿಸುತ್ತಿರುವುದು, ಅಂಕಪಟ್ಟಿ ಬಾರದ ಹಿನ್ನೆಲೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಹಾಕಲು ಸಮಸ್ಯೆಯಾಗುತ್ತಿರುವುದು, ಮೌಲ್ಯಮಾಪನವನ್ನು ಸೂಕ್ತ ಸಮಯದಲ್ಲಿ ನಡೆಸದೇ ಇರುವುದು, ಮರು ಪರೀಕ್ಷೆ ಹಾಗೂ ಮರುಮೌಲ್ಯಮಾಪನಗಳಲ್ಲಿ ಗೊಂದಲ, ಮರು ಮೌಲ್ಯಮಾಪನದಲ್ಲಿ ಶುಲ್ಕ ಮರುಪಾವತಿಗೆ ನಿಗದಿ ಪಡಿಸಿದಷ್ಟು ಅಂಕ ಬಂದರೂ ಸಹ ಕಟ್ಟಿದ ಶುಲ್ಕವು ಮರುಪಾವತಿಯಾಗದಿರುವುದು, […]

ಹವಾಮಾನಾಧಾರಿತ ರೋಗಗಳ ನಿಯಂತ್ರಣಕ್ಕೆ ಯೋಜನೆ ರೂಪಿಸಿ: ಜಿಲ್ಲಾಧಿಕಾರಿ ಕೂರ್ಮಾ ರಾವ್

ಉಡುಪಿ: ಸಾಮಾನ್ಯವಾಗಿ ರೋಗ ರುಜಿನಗಳು ಹವಾಮಾನಕ್ಕೆ ಅನುಗುಣವಾಗಿ ಹರಡುತ್ತವೆ. ಇವುಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ವತಿಯಿಂದ ವರ್ಷದ ಮೊದಲನೇ ಮಾಸದಿಂದ ಕೊನೆಯ ಮಾಸದವರೆಗೆ ಮುನ್ನೆಚ್ಚರಿಕಾ ಕ್ರಮಗಳು ಸೇರಿದಂತೆ ಮತ್ತಿತರ ಕಾರ್ಯಗಳನ್ನು ಕೈಗೊಳ್ಳಲು ಯೋಜನೆಗಳನ್ನು ರೂಪಿಸಿ, ಅನುಷ್ಠಾನಕ್ಕೆ ತಂದಲ್ಲಿ ಸಮಾಜವು ಆರೋಗ್ಯಯುಕ್ತವಾಗಿ ಇರಲು ಸಾಧ್ಯ. ಸಾರ್ವಜನಿಕರಿಗೆ ಸಾಂಕ್ರಾಮಿಕ ರೋಗಗಳ ಹರಡುವಿಕೆ, ಅವುಗಳ ಲಕ್ಷಣಗಳ ಬಗ್ಗೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಆಗಿಂದಾಗ್ಗೆ ಅರಿವು ಮೂಡಿಸಿದ್ದಲ್ಲಿ ಮಾತ್ರ ಜನರು ರೋಗಮುಕ್ತರಾಗಿರಲು ಸಾಧ್ಯ. ಈ ಬಗ್ಗೆ ಆರೋಗ್ಯ ಇಲಾಖಾ ಅಧಿಕಾರಿಗಳು ಮತ್ತು […]

ಎಲ್ಲರಿಗಾಗಿ ಉಚಿತ ಆರೋಗ್ಯ ಸೇವೆ ಯೋಜನೆಯಡಿ ನಮ್ಮ ಕ್ಲಿನಿಕ್ ಗಳ ಉದ್ಘಾಟನೆ

ಉಡುಪಿ: ಬುಧವಾರದಂದು ಬೀಡಿನಗುಡ್ಡೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಉಡುಪಿ ಇವರ ಸಹಯೋಗದಲ್ಲಿ ನಮ್ಮ ಕ್ಲಿನಿಕ್ ನ ಉದ್ಘಾಟನೆ ನಡೆಯಿತು. ಸೇವೆಯನ್ನು ಉದ್ಘಾಟಿಸಿ ಮಾತನಾಡಿದ ನಗರಸಭಾಧ್ಯಕ್ಷೆ ಸುಮಿತ್ರಾ ನಾಯಕ್, ನಮ್ಮ ಕ್ಲಿನಿಕ್ ಜನಸ್ನೇಹಿ, ಜನೋಪಯೋಗಿ ಆರೋಗ್ಯ ಸೇವೆ ಒದಗಿಸಬೇಕು. ನಗರ ಪ್ರದೇಶ ವ್ಯಾಪ್ತಿಯಲ್ಲಿ ಬಡಜನರನ್ನೊಳಗೊಂಡಂತೆ ಎಲ್ಲರಿಗೂ ಆರೋಗ್ಯ ಸೇವೆಯನ್ನು ಸರಳವಾಗಿ ಪಡೆಯಲು ಅನುಕೂಲವಾಗುವ ಉದ್ದೇಶದಿಂದ ಇದನ್ನು ಪ್ರಾರಂಭಿಸಲಾಗಿದೆ ಎಂದರು. ಜಿಲ್ಲೆಯಲ್ಲಿ […]